ಬೆಂಗಳೂರು : ಅಡಿಕೆ ಸೇವನೆಯಿಂದ ಹತ್ತು ಹಲವು ಆರೋಗ್ಯ ಲಾಭಗಳಿವೆ ಎಂದು ತಜ್ನರ ಸಂಶೋಧನಾ ವರದಿಯಿಂದ ವೇದ್ಯವಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಇಂದು ವಿಧಾನ ಪರಿಷತ್ ನಲ್ಲಿ ತಿಳಿಸಿದರು.
ಸಚಿವರು ವಿಧಾನ ಪರಿಷತ್ತಿನಲ್ಲಿ ಗಮನ ಸೆಳೆವ ಸೂಚನೆಗೆ ಉತ್ತರವಾಗಿ ಮಾತನಾಡುತ್ತ, ಈ ವಿಷಯ ತಿಳಿಸಿದ್ದು ಪ್ರತಿಷ್ಠಿತ ಎಂ ಎಸ್ ರಾಮಯ್ಯ ವಿಶ್ವ ವಿದ್ಯಾಲಯದ ಸಂಸ್ಥೆ, ಈ ಕುರಿತು ಸಂಶೋಧನೆ ನಡೆಸಿದ್ದು ಸದ್ಯದಲ್ಲಿಯೇ ಅಂತರಾಷ್ಟ್ರೀಯ ಮಾನ್ಯತೆ ಪಡೆದ ನಿಯತ ಕಾಲಿಕಾದಲ್ಲಿ ಪ್ರಕಟಣೆ ಗೊಳ್ಳಲಿದೆ ಎಂದು ಮಾಹಿತಿ ನೀಡಿದರು.
ಸಂಸ್ಥೆಯು ನಡೆಸಿದ ಪ್ರಾಥಮಿಕ ಸಂಶೋಧನೆಗಳ ಪ್ರಕಾರ ಅಡಿಕೆ ತೀವ್ರತರದ ಗಾಯವನ್ನು ಗುಣಪಡಿಸುವ ಮಧುಮೇಹ ಸಮಸ್ಯೆಯ ನಿಯಂತ್ರಣ, ಹೃದಯ ಸಂಬಂಧಿತ ಕಾಯಿಲೆಗಳು, ಉದರದ ಅಲ್ಸರ್ ಹಾಗೂ ಇನ್ನಿತರ ಸಮಸ್ಯೆಗಳ ಪರಿಹಾರಕ್ಕೆ ಆಶಾದಾಯಿಕ ಫಲಿತಾಂಶಗಳು ಬಂದಿವೆ ಎಂದು ನುಡಿದರು.
ಸುಪ್ರೀಂಕೋರ್ಟ್ನಲ್ಲಿ ಅಡಿಕೆ ಸೇವನೆಯಿಂದ ಆಗುವ ಆರೋಗ್ಯ ಲಾಭಗಳ ಕುರಿತು ಕಂಡು ಬಂದಿರುವ ಸಂಶೋಧನಾ ಫಲಿತಾಂಶ ವರದಿಗಳನ್ನು ಸಲ್ಲಿಸಲಾಗುವುದು ಎಂದೂ ಸದನಕ್ಕೆ ತಿಳಿಸಿದರು.
ತೀರ್ಥಹಳ್ಳಿ: ಮೇ 5 ಭಾನುವಾರ ನಡೆದ ತೀರ್ಥಹಳ್ಳಿ ಮಾರುಕಟ್ಟೆಯ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.
ಹೊಸನಗರ : ಕಾಂಗ್ರೆಸ್ ಪಕ್ಷದೇಶದ ಪ್ರಗತಿಯಾಗಿ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ಮೀಸಲಾತಿ ಜಾರಿಗೊಳಿಸಿದ ಪರಿಣಾಮ ಇಂದು ಕೆಳಜಾತಿಯವರು ಸರ್ಕಾರಿ ಉದ್ಯೋಗ…
ರಿಪ್ಪನ್ಪೇಟೆ : ನಾಡಿದ್ದು ಮೇ 7 ರಂದು ನಡೆಯುವ ಶಿವಮೊಗ್ಗ ಲೋಕಸಭಾ ಚುನಾವಣೆಯ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪನವರು ಇಂದು ಭರ್ಜರಿ…
ಹೊಸನಗರ : ಅಂತರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿರುವ ಹಾಸನದ ಪ್ರಜ್ವಲ್ ರೇವಣ್ಣ ಅವರ ಪ್ರಕರಣ ಅತ್ಯಂತ ಹೇಯವಾದದ್ದು. ಹೆಣ್ಣು ಮಕ್ಕಳ ಮಾನಹಾನಿಯಾಗುವಂತಹ…
ರಿಪ್ಪನ್ಪೇಟೆ : ಅರಸಾಳು ಗ್ರಾಪಂ ವ್ಯಾಪ್ತಿಯ ಬಸವಾಪುರ ಗ್ರಾಮದಲ್ಲಿ ಶುಕ್ರವಾರ ಬೆಳಗ್ಗೆ ಕಾಡಾನೆ ದಾಳಿಗೆ ತುತ್ತಾಗಿದ್ದ ಮೃತಪಟ್ಟ ತಿಮ್ಮಪ್ಪ ನಿವಾಸಕ್ಕೆ…
ಶಿವಮೊಗ್ಗ : ನಮ್ಮನ್ನು ಯಾರು ಆಳಬೇಕೆಂಬ ತೀರ್ಮಾನ ಮತದಾರರ ಕೈಯಲಿದೆ. ಆದ್ದರಿಂದ ಎಲ್ಲ ಮತದಾರರು ತಪ್ಪದೇ ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಿ…