ಬೆಂಗಳೂರು : ದಿನೇ ದಿನೇ ತಾಪಮಾನ ಹೆಚ್ಚುತ್ತಿದ್ದು ಜನರು ಹೈರಾಣಾಗಿದ್ದಾರೆ. ಈ ನಡುವೆಯೇ ಖುಷಿ ಸುದ್ದಿಯೊಂದು ಹೊರಬಿದ್ದಿದೆ.
ಶಿವಮೊಗ್ಗ (Shivamogga), ಮೈಸೂರು (Mysore), ಚಾಮರಾಜನಗರ (Chamarajanagar), ಚಿಕ್ಕಮಗಳೂರು (Chikkamagalur), ಕೊಡಗು (Kodagu), ಹಾಸನ (Hasana) ಸೇರಿದಂತೆ ದಕ್ಷಿಣ ಒಳನಾಡಿನಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಶಿವಮೊಗ್ಗ, ಮೈಸೂರು, ಚಾಮರಾಜನಗರ, ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗ, ಮೈಸೂರು, ಚಾಮರಾಜನಗರ, ಚಿಕ್ಕಮಗಳೂರು, ಕೊಡಗು, ಹಾಸನ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಸೇರಿ ಹಲವು ಜಿಲ್ಲೆಗಳಲ್ಲಿ ಇಂದಿನಿಂದ 2 ದಿನಗಳ ಕಾಲ ಮಳೆಯಾಗುವ (Rain) ನಿರೀಕ್ಷೆಯಿದೆ ಎಂದು ತಿಳಿಸಿದೆ.
ಅಲ್ಲದೆ, ಕೊಡಗು ಸೇರಿದಂತೆ ಚಿಕ್ಕಮಗಳೂರು, ಹುಬ್ಬಳ್ಳಿ ಮತ್ತು ಧಾರವಾಡ ಸೇರಿ ಗಡಿನಾಡು ಬೆಳಗಾವಿಯ ಕೆಲವು ಪ್ರದೇಶದಲ್ಲಿ ಈಗಾಗಲೇ ಮಳೆಯಾಗಿದೆ. ಇನ್ನೇನು ಕೆಲವೇ ದಿನಗಳಲ್ಲಿ ರಾಜ್ಯಾದ್ಯಂತ ಮತ್ತೆ ಮಳೆಯ ಆರ್ಭಟ ಶುರುವಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.