ರಿಪ್ಪನ್ಪೇಟೆ ; ಇತಿಹಾಸ ಪ್ರಸಿದ್ಧ ಅಮ್ಮನಘಟ್ಟ ಶ್ರೀ ಜೇನುಕಲ್ಲಮ್ಮ ದೇವಿಯ 3ನೇ ಜಾತ್ರಾ ಮಹೋತ್ಸವ ನಾಳೆ (ಸೆ.16 ಮಂಗಳವಾರ) ನಡೆಯಲಿದ್ದು ಶಾಸಕ, ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕೆ ನಿಗಮ ನಿಯಮಿತದ ಅಧ್ಯಕ್ಷ ಮತ್ತು ಜಾತ್ರಾ ಸಮಿತಿಯ ಗೌರವಾಧ್ಯಕ್ಷ ಬೇಳೂರು ಗೋಪಾಲಕೃಷ್ಣ ಭೇಟಿ ನೀಡಿದ್ದಾರೆ ಎಂದು ಅಮ್ಮನಘಟ್ಟ ಜಾತ್ರಾ ಸಮಿತಿಯ ಕಾರ್ಯಾಧ್ಯಕ್ಷ ಕಲಗೋಡು ರತ್ನಾಕರ ತಿಳಿಸಿದ್ದಾರೆ.
ಮಂಗಳವಾರ ವರ್ಷದ ಮೂರನೇ ಜಾತ್ರೆ ನಡೆಯಲಿದ್ದು ಅಮ್ಮನಘಟ್ಟ ಕ್ಷೇತ್ರಕ್ಕೆ ಬೆಳಗ್ಗೆ 10:30ಕ್ಕೆ ಬೇಳೂರು ಗೋಪಾಲಕೃಷ್ಣ ಆಗಮಿಸಿ ದೇವಿಯ ದರ್ಶನ ಪಡೆದು ನಂತರ ಕ್ಷೇತ್ರದ ಅಭಿವೃದ್ಧಿ ಕೆಲಸಗಳು ಹಾಗೂ ಮುಂದಿನ ಅಭಿವೃದ್ಧಿ ಕಾರ್ಯಗಳ ಬಗ್ಗೆ ಚರ್ಚಿಸಲಿದ್ದಾರೆ ಎಂದು ತಿಳಿಸಿದ್ದಾರೆ.
Malnad Times App ಡೌನ್ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.

