ಹೊಸನಗರ

ಜೇನುಕಲ್ಲಮ್ಮ ದೇವಾಲಯದ ನೂತನ ಮಹಾದ್ವಾರ ಶಂಕುಸ್ಥಾಪನೆಗೆ ಶಾಸಕ ಬೇಳೂರಿಗೆ ಆಹ್ವಾನ

HOSANAGARA ; ಇತಿಹಾಸ ಪ್ರಸಿದ್ಧ ತಾಲೂಕಿನ ಅಮ್ಮನಘಟ್ಟದ ಶ್ರೀ ಜೇನುಕಲ್ಲಮ್ಮ ಶಿಲಾಮಯ ‌ದೇವಾಲಯ ಆವರಣದಲ್ಲಿ ನಿರ್ಮಿಸಲು ದೇವಾಲಯದ ವ್ಯವಸ್ಥಾಪನಾ ಸಮಿತಿ ಉದ್ದೇಶಿಸಿರುವ ನೂತನ ಮಹಾದ್ವಾರದ ಶಂಕುಸ್ಥಾಪನೆ ಕಾರ್ಯಕ್ರಮಕ್ಕೆ ‌ಆಗಮಿಸಿ ಶಂಕುಸ್ಥಾಪನೆ ನೆರವೇರಿಸಬೇಕೆಂದು ಶಾಸಕ ಗೋಪಾಲಕೃಷ್ಣ ಬೇಳೂರು ಅವರನ್ನು ಸಾಗರದ ಅವರ ಸ್ವಗೃಹದಲ್ಲಿ ದೇವಾಲಯದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ, ಮಾಜಿ ಶಾಸಕ ಬಿ. ಸ್ವಾಮಿರಾವ್ ಮುಕ್ತ ಭೇಟಿ ಮಾಡಿ ವಿಶೇಷ ಆಹ್ವಾನ ನೀಡಿದರು.

WhatsApp Group Join Now
Telegram Group Join Now
Instagram Group Join Now

ನವರಾತ್ರಿಯ ಅಕ್ಟೋಬರ್‌ 12ರ ಶನಿವಾರ ಬೆಳಗ್ಗೆ 11 ಗಂಟೆಗೆ ಸಮಿತಿ ಅಧ್ಯಕ್ಷ ಸ್ವಾಮಿರಾವ್ ಅಧ್ಯಕ್ಷತೆಯಲ್ಲಿ ಶಂಕುಸ್ಥಾಪನೆ ಕಾರ್ಯ ನಡೆಯಲಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಶ್ರೀ ದೇವಿಯ ಭಕ್ತಾದಿಗಳು ಅಂದು ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಅವರು ಕೋರಿದ್ದಾರೆ. ಈ ಸಂದರ್ಭದಲ್ಲಿ ಪ್ರಮುಖರಾದ ಉಸ್ಮಾನ್ ಸಾಬ್, ಪತ್ರಕರ್ತ ಶ್ರೀಕಂಠ ಇದ್ದರು.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play
ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]