ಸಾಗರ

ಶಿಕ್ಷಕರಿಗೆ ಗೌರವ ಕೊಡುವುದು ನನಗೆ ಗೊತ್ತು: ಹಾಲಪ್ಪ ಆರೋಪಕ್ಕೆ ಬೇಳೂರು ತಿರುಗೇಟು

ಶಿಕ್ಷಕರ ದಿನಾಚರಣೆ ಕಾರ್ಯಕ್ರಮಕ್ಕೆ ಗೈರಾಗುವ ಮೂಲಕ ಶಿಕ್ಷಕರಿಗೆ ಅವಮಾನ ಮಾಡಿದ್ದಾರೆ ಎಂಬ ಹರತಾಳು ಹಾಲಪ್ಪ ಅವರ ಆರೋಪಕ್ಕೆ ಶಾಸಕ ಗೋಪಾಲಕೃಷ್ಣ ಬೇಳೂರು ತಿರುಗೇಟು ನೀಡಿದ್ದಾರೆ. ಕಸ್ತೂರಿ ರಂಗನ್ ವರದಿ ವಿರೋಧಿ ಪಾದಯಾತ್ರೆಯಿಂದ ಕಾರ್ಯಕ್ರಮಕ್ಕೆ ತಡವಾಯಿತು, ಶಿಕ್ಷಕರಿಗೆ ಗೌರವ ಕೊಡಲು ಯಾರಿಂದಲೂ ಕಲಿಯಬೇಕಿಲ್ಲ ಎಂದು ಹೇಳಿದರು.

ನಮ್ಮದೇ ಸರ್ಕಾರವಿರುವಾಗ ಬಿಜೆಪಿ ಸೇರುವ ಅಗತ್ಯವಿಲ್ಲ: ಹಾಲಪ್ಪ ಆರೋಪಕ್ಕೆ ಬೇಳೂರು ತಿರುಗೇಟು – beluru vs h halappa

ಸಾಗರ: ಶಿಕ್ಷಕರ ದಿನಾಚರಣೆ ಕಾರ್ಯಕ್ರಮಕ್ಕೆ ಗೈರಾಗುವ ಮೂಲಕ ಶಿಕ್ಷಕರಿಗೆ ಅವಮಾನ ಮಾಡಿದ್ದಾರೆ ಎಂಬ ಮಾಜಿ ಸಚಿವ ಹರತಾಳು ಹಾಲಪ್ಪ ಅವರ ಆರೋಪಕ್ಕೆ ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ತೀವ್ರ ಪ್ರತಿಕ್ರಿಯೆ ನೀಡಿದ್ದಾರೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಸಾಗರ ತಾಲೂಕಿನ ಶಿಕ್ಷಕರ ಬಗ್ಗೆ ತಮಗೆ ಅಪಾರ ಗೌರವವಿದೆ. ಶಿಕ್ಷಕರಿಗೆ ಗೌರವ ಕೊಡಲು ಯಾರಿಂದಲೂ ಪಾಠ ಕಲಿಯುವ ಅಗತ್ಯವಿಲ್ಲ ಎಂದು ಬೇಳೂರು ಗೋಪಾಲಕೃಷ್ಣ ಹೇಳಿದರು.

ತೀರ್ಥಹಳ್ಳಿಯಲ್ಲಿ ನಡೆದ ಕಸ್ತೂರಿ ರಂಗನ್ ವರದಿ ವಿರೋಧಿ ಪಾದಯಾತ್ರೆಯಲ್ಲಿ ಭಾಗವಹಿಸಿದ್ದರಿಂದ ಸಾಗರದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮಕ್ಕೆ ಬರಲು ತಡವಾಯಿತು. ಈ ಬಗ್ಗೆ ಆಯೋಜಕರಿಗೆ ಮುಂಚಿತವಾಗಿಯೇ ಮಾಹಿತಿ ನೀಡಿದ್ದೆ. ತಮ್ಮ ಕಾರಣದಿಂದ ಕಾರ್ಯಕ್ರಮ ವಿಳಂಬವಾಗಬಾರದು ಎಂದು ಕಾರ್ಯಕ್ರಮ ಮುಂದುವರಿಸುವಂತೆ ತಿಳಿಸಲಾಗಿತ್ತು ಎಂದು ಅವರು ಸ್ಪಷ್ಟಪಡಿಸಿದರು.

ನಂತರ ಹೊಸನಗರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದೇನೆ. ಆದ್ದರಿಂದ ಉದ್ದೇಶಪೂರ್ವಕವಾಗಿ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಿಂದ ದೂರ ಉಳಿದಿಲ್ಲ ಎಂದು ಬೇಳೂರು ಹೇಳಿದರು.

ಶಿಕ್ಷಕರು ಸಮಾಜದಲ್ಲಿ ದೇವರ ಸಮಾನರು. ದೇಶದ ಪ್ರಧಾನಿಯಿಂದ ಹಿಡಿದು ಪ್ರತಿಯೊಬ್ಬರೂ ಶಿಕ್ಷಕರಿಗೆ ಗೌರವ ಕೊಡುತ್ತಾರೆ. ನಾನು ಮೂರು ಬಾರಿ ಶಾಸಕನಾಗಿ ಆಯ್ಕೆಯಾಗಿದ್ದೇನೆ. ಯಾರಿಗೆ ಯಾವ ರೀತಿಯಲ್ಲಿ ಗೌರವ ನೀಡಬೇಕು ಎಂಬುದು ನನಗೆ ಚೆನ್ನಾಗಿ ಗೊತ್ತಿದೆ ಎಂದು ಹೇಳಿದರು.

ಕೆಲಸವಿಲ್ಲದ ವಿರೋಧಿಗಳು ಇಂತಹ ಸಣ್ಣ ವಿಚಾರಗಳನ್ನೇ ದೊಡ್ಡದು ಮಾಡಿ ರಾಜಕೀಯ ಲಾಭ ಪಡೆಯಲು ಯತ್ನಿಸುತ್ತಿದ್ದಾರೆ ಎಂದು ಅವರು ಕಿಡಿಕಾರಿದರು.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

ಇದೇ ವೇಳೆ ಹಾಲಪ್ಪ ವಿರುದ್ಧ ಲೇವಡಿ ಮಾಡಿದ ಬೇಳೂರು, ಇತ್ತೀಚೆಗೆ ಅವರ ಪಕ್ಷದ ಕಾರ್ಯಕರ್ತರೇ ಜನರೊಂದಿಗೆ ಹೇಗೆ ಮಾತನಾಡಬೇಕು, ಜನರ ಹೆಗಲ ಮೇಲೆ ಕೈ ಹಾಕುವುದು ಹೇಗೆ, ಕೈಬೀಸಿ ಟಾಟಾ ಮಾಡುವುದು ಹೇಗೆ ಎಂಬುದನ್ನು ಹೇಳಿಕೊಡಬೇಕಾದ ಪರಿಸ್ಥಿತಿ ಬಂದಿದೆ ಎಂದು ಟೀಕಿಸಿದರು.

ಕೃತಕ ವರ್ತನೆ ಕಲಿಯುವ ಪರಿಸ್ಥಿತಿ ನಮಗಿಲ್ಲ. ಸಾಗರದ ಜನತೆಗೆ ಹಾಗೂ ಶಿಕ್ಷಕರಿಗೆ ಬೇಳೂರು ಏನು ಎಂಬುದು ಚೆನ್ನಾಗಿ ತಿಳಿದಿದೆ ಎಂದು ಗೋಪಾಲಕೃಷ್ಣ ಬೇಳೂರು ತಿರುಗೇಟು ನೀಡಿದರು.

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Koushik G K

MalnadTimes.com ವೆಬ್‌ಸೈಟ್‌ನ ಸ್ಥಾಪಕ ಮತ್ತು ನಿರ್ವಾಹಕರಾಗಿದ್ದಾರೆ. ಅಕ್ಟೋಬರ್ 3 2019 ರಲ್ಲಿ ಈ ತಾಣವನ್ನು ಆರಂಭಿಸಿದ ಅವರು, ಮೊದಲಿಗೆ ಐಟಿ ಕ್ಷೇತ್ರದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ತಮ್ಮ ತಾಂತ್ರಿಕ ಪರಿಣತಿಯನ್ನು ಮತ್ತು ಸ್ಥಳೀಯ ಸುದ್ದಿಗಳ ಪ್ರೀತಿಯನ್ನು ಒಂದಾಗಿಸಿ, ಮಲ್ನಾಡಿನ ಜನತೆಗೆ ನಿಖರವಾದ, ವಿಶ್ವಾಸಾರ್ಹ ಹಾಗೂ ಸಮಗ್ರ ಸುದ್ದಿಗಳನ್ನು ತಲುಪಿಸುವ ನಿಟ್ಟಿನಲ್ಲಿ ಈ ತಾಣವನ್ನು ರೂಪಿಸಿದ್ದಾರೆ. Malnad Times ಮೂಲಕ  ಶಿವಮೊಗ್ಗ ಮತ್ತು ಮಲ್ನಾಡು ಭಾಗದ ಸಮುದಾಯದ ಧ್ವನಿಯಾಗಿ, ಗ್ರಾಮೀಣ ಬದುಕು, ಪರಿಸರ, ಕೃಷಿ, ಶಿಕ್ಷಣ, ಮತ್ತು ಸಾರ್ವಜನಿಕ ವಿಚಾರಗಳನ್ನು ತಲುಪಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ.ಈ ತಾಣದ ನಿರ್ವಹಣೆ, ತಾಂತ್ರಿಕ ಹಾಗೂ ಸಂಪಾದಕೀಯ ಕಾರ್ಯಗಳಲ್ಲಿ ನಿತ್ಯ ಭಾಗವಹಿಸುತ್ತಿದ್ದಾರೆ.Contact No -7022818650