HOSANAGARA | ಶಿಕ್ಷಣ ವ್ಯವಸ್ಥೆಯು
ಬಲಗೊಂಡಷ್ಟು ದೇಶದ ಪ್ರಗತಿಯ ವೇಗ
ಹೆಚ್ಚುತ್ತದೆ ಅದರಲ್ಲಿ ಭಾರತ ದೇಶ ಶಿಕ್ಷಣ
ವ್ಯವಸ್ಥೆಯಲ್ಲಿ ಗಟ್ಟಿತನದಲ್ಲಿದೆ ಎಂದು ಶಾಸಕ
ಬೇಳೂರು ಗೋಪಾಲಕೃಷ್ಣ (Beluru Gopalkrishna) ತಿಳಿಸಿದರು.
ಇಲ್ಲಿನ ಈಡಿಗರ ಭವನದಲ್ಲಿ ಗುರುವಾರ ಏರ್ಪಡಿಸಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿ, ಶಿಕ್ಷಕರು ಆದರ್ಶ ಪ್ರಜೆಗಳನ್ನು ರೂಪಿಸುವ ಗುರುತರ ಜವಾಬ್ದಾರಿಯನ್ನು ಹೊಂದಿದ್ದಾರೆ. ಉತ್ತಮ ವ್ಯಕ್ತಿತ್ವ ನಿರ್ಮಾಣ ಮಾಡುವುದಷ್ಟೇ ಅಲ್ಲ, ಇಡೀ ವ್ಯವಸ್ಥೆಯನ್ನು ಬದಲಾಯಿಸುವ ಶಕ್ತಿ ಶಿಕ್ಷಕರಿಗೆ ಇದೆ. ಈ ಕಾರಣಕ್ಕೆ ಶಿಕ್ಷಕರು ಜವಾಬ್ದಾರಿಯನ್ನು ಅರಿತು ಕೆಲಸ ಮಾಡಬೇಕು ಎಂದರು.
ಹಿಂದಿನ ಕಾಲದ ಶಿಕ್ಷಣ ವ್ಯವಸ್ಥೆಗೂ ಇಂದಿನ
ವ್ಯವಸ್ಥೆಗೂ ಅಜಗಜಾಂತರ ವ್ಯವಸ್ಥೆಯಿದೆ. ಹಿಂದೆ ಮಕ್ಕಳಿಗೆ ಶಿಕ್ಷೆ ನೀಡುವುದು ಸಾಮಾನ್ಯವಾಗಿತ್ತು. ಈಗ ಹಾಗೆ ಮಾಡುವಂತಿಲ್ಲ. ಶಿಕ್ಷಣದ
ಪರಿಕಲ್ಪನೆಯಲ್ಲಿಯೂ ಸಾಕಷ್ಟು
ಬದಲಾವಣೆಗಳಾಗಿವೆ ಎಂದ ಅವರು ತಮ್ಮ
ಶಾಲಾ ದಿನಗಳನ್ನು ನೆನಪು ಮಾಡಿಕೊಂಡರು.
ಶಾಸಕ ಆರಗ ಜ್ಞಾನೇಂದ್ರ ಮಾತನಾಡಿ,
ಎಸ್.ರಾಧಾಕೃಷ್ಣನ್ ಅವರಂತಹ ಮೇರು ವ್ಯಕ್ತಿತ್ವ ಹೊಂದಿದವರು ನಮ್ಮ ದೇಶದಲ್ಲಿದ್ದರು
ಎನ್ನುವುದು ಪ್ರತಿಯೊಬ್ಬರ ಭಾರತೀಯನಿಗೂ
ಹೆಮ್ಮೆಯ ವಿಷಯ. ದೇಶ ಶಿಕ್ಷಣ
ಕ್ಷೇತ್ರದಲ್ಲಿ ಗುರುತರ ಸಾಧನೆ ಮಾಡಿದ್ದು,
ಹಲವು ಕ್ಷೇತ್ರಗಳಲ್ಲಿ ಭಾರತೀಯರು
ಪ್ರಸಿದ್ಧರಾಗಿದ್ದಾರೆ. ಭಾರತದ ಶಿಕ್ಷಣ
ವ್ಯವಸ್ಥೆಯ ಗಟ್ಟಿತನ ಇಡೀ ಪ್ರಪಂಚಕ್ಕೇ ಅರಿವಾಗಿದೆ ಎಂದರು.
ಶಿಕ್ಷಕರ ಸಂಘದ ಅಧ್ಯಕ್ಷ ಹೆಚ್.ಆರ್
ಸುರೇಶ್ ಮಾತನಾಡಿ, ಹೊಸನಗರ
ತಾಲ್ಲೂಕಿನಲ್ಲಿ ಶಿಕ್ಷಕರ ಸಭಾಭವನದ
ಅವಶ್ಯಕತೆಯಿದ್ದು ಇಬ್ಬರು ಶಾಸಕರು ಕೈ
ಜೋಡಿಸಬೇಕು. ಒಂದು ವರ್ಷದ ಒಳಗೆ ಸಭಾಭವನ ನಿರ್ಮಿಸಿ ಕೊಡುವುದರ ಜೊತೆಗೆ ತಾವೇ ಬಂದು ಉದ್ಘಾಟಿಸಬೇಕೆಂದು ಹೊಸನಗರ ತಾಲ್ಲೂಕಿನ ಶಿಕ್ಷಕ ವೃಂದ ಉತ್ತಮ ರೀತಿಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆಂಗು ಶಿಕ್ಷಕರ ಬಗ್ಗೆ ಮೆಚ್ಚಿಗೆ ವ್ಯಕ್ತಪಡಿಸಿದರು.

ಉತ್ತಮ ಶಿಕ್ಷಕ ಪ್ರಶಸ್ತಿ, ನಿವೃತ್ತ ಶಿಕ್ಷಕರಿಗೆ
ಬೀಳ್ಕೊಡುಗೆ, ಸೇವಾವಧಿಯಲ್ಲಿ ಮೃತರಾದ
ಶಿಕ್ಷಕರ ಕುಟುಂಬಕ್ಕೆ ಸ್ಮರಣಿಕೆ, ಎಸ್ಎಸ್ಎಲ್ಸಿಯಲ್ಲಿ ಉತ್ತಮ ಸಾಧನೆ ಮಾಡಿ ವಿದ್ಯಾರ್ಥಿಗಳ ಪೋಷಕರಿಗೆ ಅಭಿನಂದನೆ ನಡೆಯಿತು.
ಬಿಇಓ ಎಚ್.ಆರ್.ಕೃಷ್ಣಮೂರ್ತಿ ಸ್ವಾಗತಿಸಿದರು. ತಹಸೀಲ್ದಾರ್ ಎಚ್.ಜೆ.ರಶ್ಮಿ, ತಾ.ಪಂ. ಇಓ ನರೇಂದ್ರಕುಮಾರ್, ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಬಸವಣ್ಯಪ್ಪ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಎಚ್.ಆರ್.ಸುರೇಶ್, ಶಿಕ್ಷಕರ ಪತ್ತಿನ ಸಹಕಾರಿ ಸಂಘದ ಕಾರ್ಯದರ್ಶಿ ಧರ್ಮಪ್ಪ, ತಿರುಪತಿ ನಾಯ್ಕ್, ರೇಣುಕೇಶ್, ಕಾರ್ಯದರ್ಶಿ ಕೆ.ಜಿ.ಪುಟ್ಟಸ್ವಾಮಿ ಸೇರಿದಂತೆ ಶಿಕ್ಷಕರ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.
Author Profile

- ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.
Latest entries
HosanagaraJune 1, 2025ಹೊಸನಗರ ; ಜೂ. 2 ಮತ್ತು 3ಕ್ಕೆ ತಾಲೂಕಿನಲ್ಲಿ ವಿಕಸಿತ ಕೃಷಿ ಸಂಕಲ್ಪ ಅಭಿಯಾನ 2025 ಕಾರ್ಯಕ್ರಮ
Adike RateJune 1, 2025Arecanut, Black Pepper Price 31 May 2025 | ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಮತ್ತು ಕಾಳುಮೆಣಸು ರೇಟ್ ಎಷ್ಟಿದೆ ?
SagaraMay 31, 2025ಪತ್ರಕರ್ತನ ಮೇಲೆ ಹಲ್ಲೆ ಯತ್ನ, ಜೀವ ಬೆದರಿಕೆ ; ಕ್ರಮಕ್ಕೆ ಒತ್ತಾಯ
RipponpeteMay 31, 2025ಜೂ. 4ಕ್ಕೆ ಇತಿಹಾಸ ಪ್ರಸಿದ್ಧ ಅಮ್ಮನಘಟ್ಟ ಶ್ರೀ ಜೇನುಕಲ್ಲಮ್ಮ ದೇವಿಯ ನೂತನ ಶಿಲಾಮಯ ದೇವಸ್ಥಾನ ಲೋಕಾರ್ಪಣೆ