ಹೊಸನಗರ

ಪ್ರತಿ ಮನೆಯಲ್ಲೂ ಭಗವದ್ಗೀತೆ ಪಠಣ ಮಾಡಬೇಕು ; ವಿಜೇಂದ್ರ ಶೇಟ್

ಹೊಸನಗರ : ಭಾರತ ಅನೇಕ ಧರ್ಮದವರನ್ನು ಹೊಂದಿದ ದೇಶ. ಅವರೆಲ್ಲರೂ ಅವರವರಿಗೆ ಸಂಬಂಧಿಸಿದ ಧರ್ಮ ಗ್ರಂಥಗಳನ್ನು ಅವರವರ ಮನೆಯಲ್ಲಿಯೇ ಓದುತ್ತಾರೆ. ಅದೇ ರೀತಿ ಹಿಂದು ಧರ್ಮದ ಗ್ರಂಥವಾದ ಭಗವದ್ಗೀತೆ ಪುಸ್ತಕವನ್ನು ಪ್ರತಿಯೊಬ್ಬರ ಮನೆಯಲ್ಲಿಯೇ ಓದುವಂತೆ ಪ್ರೇರೇಪಿಸಬೇಕೆಂದು ವರ್ತಕರ ಸಂಘದ ಅಧ್ಯಕ್ಷ ಹಾಗೂ ಭಗವದ್ಗೀತೆ ಅಭಿಯಾನದ ಅಧ್ಯಕ್ಷ ವಿಜೆಂದ್ರ ಶೇಟ್‌ ಹೇಳಿದರು.

WhatsApp Group Join Now
Telegram Group Join Now
Instagram Group Join Now

ತಾಲ್ಲೂಕಿನ ಕಾರಣಗಿರಿ ದೇವಸ್ಥಾನದ ಆವರಣದಲ್ಲಿ ಶ್ರೀ ಸೋಂದಾ ಸ್ವರ್ಣವಲ್ಲಿ ಮಹಾ ಸಂಸ್ಥಾನ ಇವರ ಆಶ್ರಯದಲ್ಲಿ ಹೊಸನಗರ ತಾಲ್ಲೂಕು ಭಗವದ್ಗೀತಾ ಅಭಿಯಾನ ಸಮಿತಿಯ ವತಿಯಿಂದ ಪ್ರಶಿಕ್ಷಣ ಸಮಾರಂಭವನ್ನು ಏರ್ಪಡಿಸಲಾಗಿದ್ದು ಈ ಕಾರ್ಯಕ್ರಮದಲ್ಲಿ ಮಾತನಾಡಿದರು.

ಈ ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ಹನಿಯ ರವಿ, ಭಗವದ್ಗೀತೆಯನ್ನು ಮಕ್ಕಳು ಹೆಚ್ಚು ಕಲಿಯುವಂತೆ ಆಗಬೇಕು ಆಗ ಮಾತ್ರ ದೇಶದ ದೇವರ ಬಗ್ಗೆ ಗೌರವ ಹೊಂದಲು ಸಾಧ್ಯ ಎಂದರು.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

ಈ ಕಾರ್ಯಕ್ರಮವನ್ನು ಬ್ರಾಹ್ಮಣ ಮಹಾ ಸಭಾ ತಾಲ್ಲೂಕು ಅಧ್ಯಕ್ಷ ಡಾ. ರಾಮಚಂದ್ರರಾವ್‌ ಕಾರ್ಯಕ್ರಮ ಉದ್ಘಾಟಿಸಿದರು.

ಈ ಕಾರ್ಯಕ್ರಮದಲ್ಲಿ ಅಭಿಯಾನ ಸಮಿತಿಯ ಸಂಚಾಲಕಿ ಅನುಪಮ ಸುರೇಶ್, ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಶಿವರಾಮ್ ಭಟ್, ಗೀತಾ ಭಾಗವತ್, ಶಾಂತಲಾ ರಾಮಚಂದ್ರ, ಲಕ್ಷ್ಮಿ ಶ್ರೀಪತಿರಾವ್, ಗಾಯಿತ್ರಿ ಅರಣ್ ಸದಾಶಿವ ಶ್ರೇಷ್ಠಿ, ಇನ್ನೂ ಮುಂತಾದವರು ಆಗಮಿಸಿ ಭಗವದ್ಗೀತೆ ಪಠಣದ ಬಗ್ಗೆ ಮಾತನಾಡಿದರು.

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]