ಶಿವಮೊಗ್ಗ

ಇಂಡಿಯನ್ ಅಕಾಡೆಮಿ ಆಫ್ ಪಿಡಿಯಾಟ್ರಿಕ್ ಭವನ ನಿರ್ಮಾಣಕ್ಕೆ ಭೂಮಿ ಪೂಜೆ

ಶಿವಮೊಗ್ಗ ; ಭದ್ರಾವತಿ ತಾಲೂಕಿನ ಮಜ್ಜಿಗೆನಹಳ್ಳಿ ಗ್ರಾಮದ ಸಮೀಪ ನಿರ್ಮಾಣ ಮಾಡಲು ನಿರ್ಧರಿಸಿರುವ ಇಂಡಿಯನ್ ಅಕಾಡೆಮಿ ಆಫ್ ಪಿಡಿಯಾಟ್ರಿಕ್ (IAP) ಶಿವಮೊಗ್ಗ ಜಿಲ್ಲಾ ಶಾಖೆಯ ಭವನ ನಿರ್ಮಾಣಕ್ಕೆ ಇಂದು ಭೂಮಿ ಪೂಜೆ ನೆರವೇರಿಸಲಾಯಿತು.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಮಕ್ಕಳ ಆರೋಗ್ಯದ ಪೋಷಣೆಗೆ ಹಾಗೂ ಆರೈಕೆಗೆ ಶ್ರಮಿಸುತ್ತಿರುವ ಜಿಲ್ಲೆಯ ಮಕ್ಕಳ ತಜ್ಞ ವೈದ್ಯರ ಸಮೂಹ ಈ ನೂತನ ಭವನದ ನಿರ್ಮಾಣಕ್ಕೆ ಅಡಿಗಲ್ಲು ಹಾಕಿದ್ದಾರೆ. ಮುಂದೆ ಈ ಭವನ ನಿರ್ಮಾಣವಾದ ಮೇಲೆ ಇಲ್ಲಿ ಶಿಕ್ಷಣ ಮತ್ತು ತರಬೇತಿ ಕಾರ್ಯಗಳು, ಲಸಿಕೆಗಳ ಬಗ್ಗೆ ಜಾಗೃತಿ ಶಿಬಿರಗಳು, ಮಕ್ಕಳ ಆರೋಗ್ಯ ಮತ್ತು ಭದ್ರತೆಯ ಬಗ್ಗೆ ತರಬೇತಿ, ಶಾಲಾ ಮಕ್ಕಳಿಗಾಗಿ ಯುವ ಆರೋಗ್ಯ ನಾಯಕತ್ವ ಕಾರ್ಯಗಾರ, ಶಾಲಾ ಆರೋಗ್ಯ ಶಿಕ್ಷಣ, ಪ್ರಥಮ ಚಿಕಿತ್ಸೆ ತರಬೇತಿ ಸೇರಿದಂತೆ ಆರೋಗ್ಯ ಸಂಬಂಧಿತ ವಿವಿಧ ಕಾರ್ಯ ಚಟುವಟಿಕೆಗಳು ನಡೆಯುತ್ತವೆ.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಶಾಸಕರಾದ ಡಾ. ಧನಂಜಯ ಸರ್ಜಿ, ಇಂಡಿಯನ್ ಅಕಾಡೆಮಿ ಆಫ್ ಪಿಡಿಯಾಟ್ರಿಕ್ ಶಿವಮೊಗ್ಗ ಜಿಲ್ಲಾ ಶಾಖೆ ಅಧ್ಯಕ್ಷರಾದ ಡಾ. ಯತೀಶ ಬಿ.ಎಲ್, ಕಾರ್ಯದರ್ಶಿಗಳಾದ ಡಾ. ರಾಜಾರಾಮ್ ಯು.ಹೆಚ್, ಖಜಾಂಚಿಗಳಾದ ಡಾ. ವಿನೋದ್ ಕುಮಾರ್ ಎಂ.ಕೆ, ಪ್ರಮುಖರಾದ ಡಾ. ಕೊಟ್ರೇಶ್, ಡಾ. ಗಣೇಶ್ ಬಿದರಿಕೊಪ್ಪ, ಡಾ. ಜಗದೀಶ್ ವೈದ್ಯ, ಡಾ.ಮಲ್ಲಿಕಾರ್ಜುನ್ ಸಾಲೆಯರ್, ಡಾ. ದೀಪಕ್ ಕುಮಾರ್, ಡಾ. ನಿತಿನ್, ಡಾ. ಶಂಭುಲಿಂಗ ಬಂಕವಳ್ಳಿ, ಡಾ.ಅಜಯ್, ಡಾ.ವಿನಾಯಕ ಹೆಗಡೆ, ಡಾ.ಅಂಜನಾ ರಾವ್, ಡಾ. ಮಲ್ಲಿಕಾರ್ಜುನ್, ಸೇರಿದಂತೆ ಹಿರಿಯ ಸದಸ್ಯರು, ವೈದ್ಯರು ಉಪಸ್ಥಿತರಿದ್ದರು.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play
ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesh Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ <strong>'ಮಲ್ನಾಡ್ ಟೈಮ್ಸ್'</strong> ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. <a href="mailto:[email protected]">[email protected]</a>