ತೀರ್ಥಹಳ್ಳಿ ; ರಾಷ್ಟ್ರೀಯ ಹೆದ್ದಾರಿ ಕೊಪ್ಪ-ತೀರ್ಥಹಳ್ಳಿ ನಡುವಿನ ತಿರಳೆಬೈಲು ಬಳಿ ಮರಕ್ಕೆ ಬೈಕ್ ಡಿಕ್ಕಿಯಾಗಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಗುರುವಾರ ನಡೆದಿದೆ.
ಮೃತನನ್ನು ಕೋಣಂದೂರಿನ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ಗಂಗಾಧರ್ (52) ಎಂದು ಗುರುತಿಸಲಾಗಿದೆ.
ತೀರ್ಥಹಳ್ಳಿ ಕಡೆಯಿಂದ ಕೊಪ್ಪ ಕಡೆ ಹೋಗುವಾಗ ತಿರಳೆಬೈಲು ಬಳಿ ಬೈಕ್ ಮರಕ್ಕೆ ಡಿಕ್ಕಿ ಹೊಡೆದು ಗಂಗಾಧರ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಘಟನೆ ಸಂಬಂಧ ತೀರ್ಥಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Malnad Times App ಡೌನ್ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.

