ಹೊಸನಗರ

ಕಾಂಗ್ರೆಸ್‌ ವಿರುದ್ಧ ಹೊಸನಗರದಲ್ಲಿ ಬಿಜೆಪಿ ಆಕ್ರೋಶ | ಅಧಿಕಾರಿಗಳು ಶಾಸಕರ ಕೈಗೊಂಬೆಯಾಗಿ ಕೆಲಸ ಮಾಡುತ್ತಿದ್ದಾರೆ ; ಹರತಾಳು ಹಾಲಪ್ಪ

ಹೊಸನಗರ ; ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಸ್ಥಾಪನೆಗೊಂಡ ಬಳಿಕ ಸಾಗರ ವಿಧಾನಸಭಾ ಕ್ಷೇತ್ರದಲ್ಲಿ ಅಭಿವೃದ್ಧಿಯ ವಿಷಯದಲ್ಲಿ ಸಂಪೂರ್ಣ ವೈಫಲ್ಯ ಕಂಡುಬಂದಿದೆ. ಅದು ಅಲ್ಲದೇ ಹೊಸನಗರ ತಾಲ್ಲೂಕಿನ ಅಧಿಕಾರಿಗಳು ಶಾಸಕರ ಮತ್ತು ಅವರ ಹಿಂಬಾಲಕರ ಕೈಗೊಂಬೆಯಾಗಿ ಕೆಲಸ ಮಾಡುತ್ತಿದ್ದು ಬಡವರಿಗೆ, ರೈತರಿಗೆ ಹಾಗೂ ಬಿಜೆಪಿ ಕಾರ್ಯಕರ್ತರಿಗೆ ಹಿಂಸೆ ನೀಡುತ್ತಿದ್ದಾರೆ. ಇನ್ಮುಂದೆ ಶಾಸಕರ ಹಾಗೂ ಅವರ ಹಿಂಬಾಲಕರ ಆಟ ನಡೆಯುವುದಿಲ್ಲ ಅಧಿಕಾರಿಗಳ ಕಛೇರಿಯ ಮುಂದೆ ಧರಣಿ ನಡೆಸಿ ನ್ಯಾಯ ಕೊಡಿಸುವುದಾಗಿ ಬಿಜೆಪಿ ರಾಜ್ಯ ಉಪಾಧ್ಯಕ್ಷ ಹರತಾಳು ಹಾಲಪ್ಪ ಎಚ್ಚರಿಕೆ ನೀಡಿದರು.

WhatsApp Group Join Now
Telegram Group Join Now
Instagram Group Join Now

ವಿಡಿಯೋ ವೀಕ್ಷಿಸಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ https://www.facebook.com/reel/1454679282280975/?mibextid=9drbnH

ತಾಲೂಕು ಕಛೇರಿ ಆವರಣದಲ್ಲಿ ಬಿಜೆಪಿ ಮಂಡಲ ಶನಿವಾರ ನಡೆಸಿದ ಪ್ರತಿಭಟನೆಯ ನೇತೃತ್ವ ವಹಿಸಿದ್ದ ಅವರು ಮಾತನಾಡಿ, ಸಾಗರ ವಿಧಾನಸಭಾ ಕ್ಷೇತ್ರದ ಶಾಸಕರು ಅಭಿವೃದ್ಧಿಯ ವಿಷಯದಲ್ಲಿ ಎಡವಿದ್ದಾರೆ. ಬಡವರು, ರೈತರ ಪರ ಕಾಳಜಿ ಇಲ್ಲದಂತೆ ವರ್ತಿಸುತ್ತಿದ್ದಾರೆ. ರೈತರ ಬಗರ್‌ಹುಕುಂ ಸಾಗುವಳಿ ಜಮೀನು ತೆರವುಗೊಳಿಸಿದ್ದಷ್ಟೇ ಈವರೆಗಿನ ಇವರ ಸಾಧನೆಯಾಗಿದೆ. ಬಿಜೆಪಿ ಕಾರ್ಯಕರ್ತರ ವಿರುದ್ಧ ಸುಳ್ಳು ಪ್ರಕರಣಗಳನ್ನು ದಾಖಲು ಮಾಡಲಾಗುತ್ತಿದೆ ಎಂದು ಆಪಾದಿಸಿದರು.

ಸ್ಥಳೀಯ ಶಾಸಕರು ಅಧಿಕಾರಿ ವರ್ಗವನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ. ಕೆಲ ಅಧಿಕಾರಿಗಳು ಸಹಾ ಶಾಸಕರ ಹಿಂಬಾಲಕರಂತೆ ವರ್ತಿಸುತ್ತಿದ್ದಾರೆ. ಇದು ಆಡಳಿತ ವೈಫಲ್ಯಕ್ಕೆ ಸಾಕ್ಷಿಯಾಗಿದೆ. ಶಾಸಕರ ಹಿಂಬಾಲಕರು ಸರ್ಕಾರಿ ಕಛೇರಿಗಳಲ್ಲಿಯೇ ಠಿಕಾಣಿ ಹೂಡಿಕೊಂಡಿದ್ದು, ಜನಸಾಮಾನ್ಯರು ಅಸಹ್ಯ ಪಡುವಂತಾಗಿದೆ ಎಂದು ಕಿಡಿಕಾರಿದರು.

ಆರ್.ಎಸ್.ಎಸ್ ವಿರುದ್ಧ ಬೇಳೂರು ಗೋಪಾಲಕೃಷ್ಣ ಮಾತನಾಡಿದ್ದು (ಬ್ರಿಟಿಷರನ್ನೇ ಓಡಿಸಿದ ಈ ನಮ್ಮ ಕಾಂಗ್ರೆಸ್ ಪಕ್ಷ ಆರ್.ಎಸ್.ಎಸ್ ಯಾವ ಲೆಕ್ಕ) ಇವರು 10 ವರ್ಷದ ಹಿಂದೆ ಆರ್‌ಎಸ್‌ಎಸ್ ಚಡ್ಡಿ ಹಾಕಿಕೊಂಡು ಬಿಜೆಪಿಯಿಂದ ಶಾಸಕರಾದವರು ಅದನ್ನು ಮರೆತಂತೆ ಕಾಣುತ್ತಿದ್ದೆ. ಆರ್‌ಎಸ್‌ಎಸ್‌ನ್ನು ಭಾರತ ದೇಶದಿಂದ ಓಡಿಸಲು ಇವರಿಂದ ಸಾಧ್ಯವಿಲ್ಲ ಎಂದರು.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

ತಹಸೀಲ್ದಾರ್, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ, ವಿವಿಧ ಇಲಾಖೆ ಎಂಜಿನಿಯರ್, ಶಿಕ್ಷಣ ಇಲಾಖೆಯ ಅಧಿಕಾರಿಗಳ ಹುದ್ದೆಗಳು ಖಾಲಿ ಉಳಿದಿವೆ. ಜನಸಾಮಾನ್ಯರು ಅಹವಾಲು ಸಲ್ಲಿಸಲು ಕಛೇರಿಗೆ ಬಂದರೆ ಕೇಳುವವರಿಲ್ಲದಂತಾಗಿದೆ. ತಾಲೂಕಿನ ಬಹುತೇಕ ರಸ್ತೆಗಳು ಹೊಂಡ ಬಿದ್ದರೂ ಮುಚ್ಚುವವರಿಲ್ಲದಂತಹ ಸ್ಥಿತಿ ತಲುಪಿವೆ. ಮೊದಲು ಅಭಿವೃದ್ಧಿಯ ಕಡೆ ಗಮನ ಹರಿಸಲಿ ಎಂದರು.

ಮಂಡಲದ ಅಧ್ಯಕ್ಷ ಮತ್ತಿಮನೆ ಸುಬ್ರಮಣ್ಯ ಮಾತನಾಡಿ, ರಾಜ್ಯ ಸರ್ಕಾರ ಬಿಪಿಎಲ್ ಕಾರ್ಡ್‌ಗಳನ್ನು ವಜಾ ಮಾಡುವ ಮೂಲಕ ಬಡವರನ್ನು ಸಂಕಷ್ಟಕ್ಕೆ ಸಿಲುಕಿಸಿದೆ. ಯಾವುದೇ ಇಲಾಖೆಯಲ್ಲಿಯೂ ಶಾಸಕರು ಅವರ ಹಿಂಬಾಲಕರು ಕೈಯಾಡಿಸುವ ಕೆಲಸ ನಡೆಯುತ್ತಿದೆ ಅದು ಅಲ್ಲದೆ ಕೆಲವು ಹಿಂಬಾಲಕರು ಶಾಸಕರ ಹೆಸರನ್ನು ಬಳಸಿಕೊಂಡು ಅಧಿಕಾರಿಗಳ ಮುಂದೆ ಕಾಲು ಅಲುಗಡಿಸುತ್ತಾ ಬೆಳಿಗ್ಗೆಯಿಂದ ಸಂಜೆಯವರೆಗೆ ಕುಳಿತಿರುತ್ತಾರೆ. ಈ ಹಿಂಬಾಲಕರಿಗೆ ಯಾರ ಭಯವು ಇಲ್ಲದಾಂತಾಗಿದೆ ಎಂದ ಅವರು, ಆರ್‌ಎಸ್‌ಎಸ್ ಸಂಘಟನೆಯನ್ನು ನಿಷೇಧಿಸುವುದಾಗಿ ಹೇಳಿರುವ ಶಾಸಕರ ಹೇಳಿಕೆಯನ್ನು ಖಂಡಿಸಿದರು.

ಪ್ರತಿಭಟನೆಯಲ್ಲಿ ಬಿಜೆಪಿ ಮುಖಂಡರಾದ ಎನ್.ಆರ್.ದೇವಾನಂದ, ಉಮೇಶ ಕಂಚುಗಾರ್, ಹಾಲಗದ್ದೆ ಉಮೇಶ, ಎನ್ ಶ್ರೀಧರ ಉಡುಪ, ವೀರೇಶ್ ಆಲವಳ್ಳಿ, ಆರ್‌ಟಿ.ಗೋಪಾಲ, ಸುರೇಶ್ ಸ್ವಾಮಿರಾವ್, ನಾಗಾರ್ಜುನ ಸ್ವಾಮಿ, ಸತ್ಯನಾರಾಯಣ, ಚಾಲುಕ್ಯ ಬಸವರಾಜ್, ಶ್ರೀಪತಿರಾವ್, ಮಂಡಾನಿ ಮೋಹನ್, ಅಭಿಲಾಷ್, ಮಂಜುನಾಥ್ ಸಂಜೀವ, ನಾಗರತ್ನ ದೇವರಾಜ್, ಶಶಿಕಲಾ, ಸುಮಾ ಸುರೇಶ್, ಎನ್.ವೈ.ಸುರೇಶ್, ಬಂಕ್ರಿಬೀಡು ಮಂಜುನಾಥ್, ಪುರುಷೋತ್ತಮ ಶಾನುಭೋಗ್, ನರಲೆ ರಮೇಶ, ಸವಿತಾ, ನಿರ್ಮಾಲ ರಾಘವೇಂದ್ರ, ಗಾಯಿತ್ರಿ ನಾಗರಾಜ್, ಕೃಷ್ಣವೇಣಿ, ಮನೋಧರ, ನಗರ ನಿತಿನ್, ಕಾರಣಗಿರಿ ಕಾವ್ಯ, ಕಾವೇರಿ ವಿಜಯ, ಮಾವಿನಕೊಪ್ಪ ಗೌತಮ್, ಮಹೇಂದ್ರ, ಮತ್ತಿತರರು ಇದ್ದರು.

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]