ಹೊಸನಗರ ತಾಲೂಕಿನ ವಿಜಾಪುರ ಶ್ರೀ ವಿದ್ಯಾಗಣಪತಿ ಸೇವಾ ಸಮಿತಿಯವರ ನೇತೃತ್ವದಲ್ಲಿ ವಿಶಿಷ್ಟ ಸಾಮಾಜಿಕ ಸೇವಾ ಕಾರ್ಯಕ್ರಮ ನಡೆಯಿತು. ಸಮಿತಿಯ ಸಮರ್ಪಕ ಯೋಜನೆ ಹಾಗೂ ಗ್ರಾಮಸ್ಥರ ಉತ್ಸಾಹದಿಂದ ನಡೆದ ಈ ಕಾರ್ಯಕ್ರಮದಲ್ಲಿ ರಕ್ತದಾನ ಶಿಬಿರ ಹಾಗೂ ಉಚಿತ ಆರೋಗ್ಯ ತಪಾಸಣೆ ಆಯೋಜಿಸಲಾಯಿತು.
ಈ ಶಿಬಿರವನ್ನು ಸರ್ಕಾರಿ ಆಯುರ್ವೇದಿಕ್ ಆಸ್ಪತ್ರೆ ವಿಜಾಪುರದಲ್ಲಿ ರಕ್ತನಿಧಿ ವಿಭಾಗ ಮೆಗ್ಗಾನ್ ಆಸ್ಪತ್ರೆ, ಶಿವಮೊಗ್ಗ ಇವರ ಸಹಯೋಗದಲ್ಲಿ ನಡೆಸಲಾಯಿತು. ಗ್ರಾಮಸ್ಥರ ಸಹಕಾರ ಹಾಗೂ ವೈದ್ಯಕೀಯ ತಂಡದ ನಿಸ್ವಾರ್ಥ ಸೇವೆಯಿಂದ ಶಿಬಿರವು ಯಶಸ್ವಿಯಾಗಿ ನೆರವೇರಿತು.

ಕಾರ್ಯಕ್ರಮದಲ್ಲಿ ಗ್ರಾಮಸ್ಥರು ಸ್ವಯಂಪ್ರೇರಿತವಾಗಿ ಪಾಲ್ಗೊಂಡು ಒಟ್ಟು 26 ಯೂನಿಟ್ ರಕ್ತದಾನವನ್ನು ಮಾಡಿದರು. ಗ್ರಾಮಸ್ಥರ ಈ ಉತ್ಸಾಹವನ್ನು ವೈದ್ಯರು ಹಾಗೂ ಸಂಘಟಕರು ಶ್ಲಾಘಿಸಿದರು. ರಕ್ತದಾನ ಮಾಡಿದ ಪ್ರತಿಯೊಬ್ಬರಿಗೂ ಧನ್ಯವಾದ ಸಲ್ಲಿಸಲಾಯಿತು.
ಆರೋಗ್ಯ ತಪಾಸಣೆಯ ಭಾಗವಾಗಿ ಹಾಜರಾದ ರಕ್ತದೊತ್ತಡ, ಮಧುಮೇಹ, ಹೆಮೋಗ್ಲೋಬಿನ್, ಸಾಮಾನ್ಯ ಆರೋಗ್ಯ ತಪಾಸಣೆಗಳನ್ನು ಉಚಿತವಾಗಿ ಮಾಡಿಕೊಡಲಾಯಿತು. ವೈದ್ಯಕೀಯ ಸಿಬ್ಬಂದಿ ಗ್ರಾಮಸ್ಥರಿಗೆ ಆರೋಗ್ಯ ಕಾಪಾಡಿಕೊಳ್ಳುವ ಬಗ್ಗೆ ಅಗತ್ಯ ಸಲಹೆಗಳನ್ನು ನೀಡಿದರು.
ಕಾರ್ಯಕ್ರಮದ ಯಶಸ್ಸಿಗೆ ಆಯುರ್ವೇದಿಕ್ ಆಸ್ಪತ್ರೆ ವೈದ್ಯಾಧಿಕಾರಿ ಡಾ.ರಾಜೇಶ್ವರಿ , ವೈದ್ಯರು, ನರ್ಸ್ ಸಿಬ್ಬಂದಿಗಳಿಗೆ ಸಮಿತಿಯವರು ಧನ್ಯವಾದ ಅರ್ಪಿಸಿದರು .
ಈ ಶಿಬಿರವು ಗ್ರಾಮೀಣ ಪ್ರದೇಶಗಳಲ್ಲಿ ಆರೋಗ್ಯ ಜಾಗೃತಿ ಮೂಡಿಸಲು ಹಾಗೂ ರಕ್ತದಾನದ ಮಹತ್ವವನ್ನು ಸಾರಲು ಮಾದರಿಯಾಗಿದೆ.
ಲಿಂಗನಮಕ್ಕಿ ಜಲಾಶಯ: 7 ಗೇಟ್ ತೆರೆದು 15,000 ಕ್ಯೂಸೆಕ್ ನೀರು ನದಿಗೆ ಬಿಡುಗಡೆ : ಮೈದುಂಬಿದ ಜೋಗ ಜಲಪಾತ
MalnadTimes.com ವೆಬ್ಸೈಟ್ನ ಸ್ಥಾಪಕ ಮತ್ತು ನಿರ್ವಾಹಕರಾಗಿದ್ದಾರೆ. ಅಕ್ಟೋಬರ್ 3 2019 ರಲ್ಲಿ ಈ ತಾಣವನ್ನು ಆರಂಭಿಸಿದ ಅವರು, ಮೊದಲಿಗೆ ಐಟಿ ಕ್ಷೇತ್ರದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ತಮ್ಮ ತಾಂತ್ರಿಕ ಪರಿಣತಿಯನ್ನು ಮತ್ತು ಸ್ಥಳೀಯ ಸುದ್ದಿಗಳ ಪ್ರೀತಿಯನ್ನು ಒಂದಾಗಿಸಿ, ಮಲ್ನಾಡಿನ ಜನತೆಗೆ ನಿಖರವಾದ, ವಿಶ್ವಾಸಾರ್ಹ ಹಾಗೂ ಸಮಗ್ರ ಸುದ್ದಿಗಳನ್ನು ತಲುಪಿಸುವ ನಿಟ್ಟಿನಲ್ಲಿ ಈ ತಾಣವನ್ನು ರೂಪಿಸಿದ್ದಾರೆ.
Malnad Times ಮೂಲಕ ಶಿವಮೊಗ್ಗ ಮತ್ತು ಮಲ್ನಾಡು ಭಾಗದ ಸಮುದಾಯದ ಧ್ವನಿಯಾಗಿ, ಗ್ರಾಮೀಣ ಬದುಕು, ಪರಿಸರ, ಕೃಷಿ, ಶಿಕ್ಷಣ, ಮತ್ತು ಸಾರ್ವಜನಿಕ ವಿಚಾರಗಳನ್ನು ತಲುಪಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ.ಈ ತಾಣದ ನಿರ್ವಹಣೆ, ತಾಂತ್ರಿಕ ಹಾಗೂ ಸಂಪಾದಕೀಯ ಕಾರ್ಯಗಳಲ್ಲಿ ನಿತ್ಯ ಭಾಗವಹಿಸುತ್ತಿದ್ದಾರೆ.Contact No -7022818650