ಅಪರಾಧ ಸುದ್ದಿ

ಶಿವಮೊಗ್ಗದಲ್ಲಿ ಮತ್ತೆ ಹರಿದ ನೆತ್ತರು ; ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್‌ನ ಮರ್ಡರ್ !

ರಾಮೇನಕೊಪ್ಪ ಪ್ರದೇಶದಲ್ಲಿ ಸೀಗೆಹಟ್ಟಿ ನಿವಾಸಿ ಕುಳ್ಳಿ ಕಿರಣ್ (32) ಎಂಬ ಯುವಕನನ್ನು ಮಾರಕಾರಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಈ ಘಟನೆಯನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ನಿಖಿಲ್ ಬಿ. ಖಚಿತಪಡಿಸಿದ್ದಾರೆ.

InShot 20260906 205935415

ಶಿವಮೊಗ್ಗ ; ಇಲ್ಲಿನ ರಾಮೇನಕೊಪ್ಪ ಪ್ರದೇಶದಲ್ಲಿ ಸೀಗೆಹಟ್ಟಿ ನಿವಾಸಿ ಕುಳ್ಳಿ ಕಿರಣ್ (32) ಎಂಬ ಯುವಕನನ್ನು ಮಾರಕಾರಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಈ ಘಟನೆಯನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ನಿಖಿಲ್ ಬಿ. ಖಚಿತಪಡಿಸಿದ್ದಾರೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಪ್ರಾಥಮಿಕ ಮಾಹಿತಿಯ ಪ್ರಕಾರ, ವೈಯಕ್ತಿಕ ಹಣಕಾಸಿನ ವಿವಾದ ಹಾಗೂ ದ್ವೇಷವೇ ಈ ಕೃತ್ಯಕ್ಕೆ ಕಾರಣ ಎಂದು ಶಂಕಿಸಲಾಗಿದೆ.

ದುಷ್ಕರ್ಮಿಗಳು ಕಿರಣ್ ಎದೆಗೆ ಮಾರಕಾಸ್ತ್ರಗಳಿಂದ ಎರಡು ಬಾರಿ ಇರಿದಿದ್ದಾರೆ. ತೀವ್ರ ರಕ್ತಸ್ರಾವದಿಂದ ಬಳಲುತ್ತಿದ್ದ ಆತನನ್ನು ಖಾಸಗಿ ಆಸ್ಪತ್ರೆಗೆ ಕೊಂಡೊಯ್ಯುವಾಗ ಮಾರ್ಗಮಧ್ಯೆಯೇ ಕೊನೆಯುಸಿರೆಳೆದಿದ್ದಾನೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

ಈ ಭೀಕರ ಹತ್ಯೆಯಲ್ಲಿ ಇಬ್ಬರು ಅಥವಾ ಮೂವರು ಭಾಗಿಯಾಗಿರುವ ಅನುಮಾನವನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ.

ಇದು ಗುಂಪುಗಾರಿಕೆ ಅಥವಾ ‘ಗ್ಯಾಂಗ್ ವಾರ್’ ಹಿನ್ನೆಲೆಯಲ್ಲಿ ನಡೆದ ಕೊಲೆಯೇ ಎಂಬ ಬಗ್ಗೆ ಸದ್ಯಕ್ಕೆ ಯಾವುದೇ ಸ್ಪಷ್ಟತೆ ಇಲ್ಲ. ಸದ್ಯ ತನಿಖೆ ಚುರುಕುಗೊಂಡಿದ್ದು, ಹಂತಕರ ಪತ್ತೆಯಾದ ನಂತರ ಹಾಗೂ ಹಣಕಾಸಿನ ವ್ಯವಹಾರದ ಸಂಪೂರ್ಣ ವಿವರ ಲಭ್ಯವಾದ ಬಳಿಕವಷ್ಟೇ ನಿಖರ ಮಾಹಿತಿ ಹೊರಬರಬೇಕಿದೆ. ಒಂದು ವೇಳೆ ಗ್ಯಾಂಗ್ ವಾರ್ ಬಗ್ಗೆ ಸಾಕ್ಷ್ಯಗಳು ದೊರೆತರೆ ಮಾಧ್ಯಮಗಳಿಗೆ ಮಾಹಿತಿ ನೀಡುವುದಾಗಿ ಎಸ್ಪಿ ನಿಖಿಲ್ ಸ್ಪಷ್ಟಪಡಿಸಿದ್ದಾರೆ.

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]