ಶಿವಮೊಗ್ಗ ಸುದ್ದಿ

ಶಿವಮೊಗ್ಗ: ಕೆರೆ ಪಕ್ಕದಲ್ಲಿ ಪುರುಷನ ಶವ ಪತ್ತೆ – ಕೊಲೆ ಶಂಕೆ!

ಶಿವಮೊಗ್ಗ– ನಗರದಲ್ಲಿ ಭೀಕರ ಘಟನೆ ನಡೆದಿದೆ. ಹಳೆ ಬೊಮ್ಮನಕಟ್ಟೆಯ ಕೆಂಚಮ್ಮ ದೇವಸ್ಥಾನದ ಹಿಂಬದಿಯ ಕೆರೆ ಪಕ್ಕದಲ್ಲಿ 35 ವರ್ಷದ ಪುರುಷನ ಶವವೊಂದು ರಕ್ತಸಿಕ್ತ ಸ್ಥಿತಿಯಲ್ಲಿ ಭಾನುವಾರ ಬೆಳಿಗ್ಗೆ ಪತ್ತೆಯಾಗಿದೆ. ಮೃತನನ್ನು ಅವಿನಾಶ್ ಎಂದು ಗುರುತಿಸಲಾಗಿದೆ.

WhatsApp Group Join Now
Telegram Group Join Now
Instagram Group Join Now

ಘಟನೆ ಸ್ಥಳದಲ್ಲಿ ಮದ್ಯದ ಬಾಟಲಿ, ಖಾರಾ ಮಿಕ್ಸ್ಚರ್ ಮುಂತಾದ ವಸ್ತುಗಳು ಬಿದ್ದಿದ್ದು, ಈ ವ್ಯಕ್ತಿ ತಡರಾತ್ರಿ ಸ್ನೇಹಿತರ ಜೊತೆ ಮದ್ಯಪಾನ ಮಾಡಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ಬಳಿಕ ಜಗಳವೊಂದು ಉಂಟಾಗಿ, ಕೊಲೆಯಲ್ಲಿ ಅಂತ್ಯವಾಗಿರಬಹುದು ಎಂಬ ಪೋಲೀಸರ ಪ್ರಾಥಮಿಕ ಅಂದಾಜು.

ಈ ಘಟನೆ ವಿನೋಬನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ತುಂಗಾನಗರ ಠಾಣೆಯಿಂದ ಫೊರೆನ್ಸಿಕ್ ತಂಡ ಆಗಮಿಸಿ ಪರಿಶೀಲನೆ ನಡೆಸಿದ್ದು, ಶ್ವಾನದಳ ಕೂಡ ಸ್ಥಳಕ್ಕೆ ಕರೆತರಲಾಗಿದೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದು, ಆರೋಪಿಗಳ ಪತ್ತೆಗಾಗಿ ಬಲೆ ಬೀಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನಷ್ಟು ಮಾಹಿತಿಯ ನಿರೀಕ್ಷೆಯಿದೆ

ದೇಹ-ಮನಸ್ಸು-ಆತ್ಮದ ಸಂಯೋಜನೆಯಾದ ಯೋಗವನ್ನು ಅಳವಡಿಸಿಕೊಳ್ಳಬೇಕು: ಸಂಸದ ಬಿ.ವೈ. ರಾಘವೇಂದ್ರ

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Koushik G K

MalnadTimes.com ವೆಬ್‌ಸೈಟ್‌ನ ಸ್ಥಾಪಕ ಮತ್ತು ನಿರ್ವಾಹಕರಾಗಿದ್ದಾರೆ. ಅಕ್ಟೋಬರ್ 3 2019 ರಲ್ಲಿ ಈ ತಾಣವನ್ನು ಆರಂಭಿಸಿದ ಅವರು, ಮೊದಲಿಗೆ ಐಟಿ ಕ್ಷೇತ್ರದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ತಮ್ಮ ತಾಂತ್ರಿಕ ಪರಿಣತಿಯನ್ನು ಮತ್ತು ಸ್ಥಳೀಯ ಸುದ್ದಿಗಳ ಪ್ರೀತಿಯನ್ನು ಒಂದಾಗಿಸಿ, ಮಲ್ನಾಡಿನ ಜನತೆಗೆ ನಿಖರವಾದ, ವಿಶ್ವಾಸಾರ್ಹ ಹಾಗೂ ಸಮಗ್ರ ಸುದ್ದಿಗಳನ್ನು ತಲುಪಿಸುವ ನಿಟ್ಟಿನಲ್ಲಿ ಈ ತಾಣವನ್ನು ರೂಪಿಸಿದ್ದಾರೆ. Malnad Times ಮೂಲಕ  ಶಿವಮೊಗ್ಗ ಮತ್ತು ಮಲ್ನಾಡು ಭಾಗದ ಸಮುದಾಯದ ಧ್ವನಿಯಾಗಿ, ಗ್ರಾಮೀಣ ಬದುಕು, ಪರಿಸರ, ಕೃಷಿ, ಶಿಕ್ಷಣ, ಮತ್ತು ಸಾರ್ವಜನಿಕ ವಿಚಾರಗಳನ್ನು ತಲುಪಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ.ಈ ತಾಣದ ನಿರ್ವಹಣೆ, ತಾಂತ್ರಿಕ ಹಾಗೂ ಸಂಪಾದಕೀಯ ಕಾರ್ಯಗಳಲ್ಲಿ ನಿತ್ಯ ಭಾಗವಹಿಸುತ್ತಿದ್ದಾರೆ.Contact No -7022818650