ತೀರ್ಥಹಳ್ಳಿ

ತೀರ್ಥಹಳ್ಳಿ ಬಿಇಒ ಬಿಜೆಪಿ ಸಂಘಟನಾ ಕಾರ್ಯದರ್ಶಿಯೆ? : ಪ.ಪಂ. ಸದಸ್ಯ ಬಿ.ಆರ್.ರಾಘವೇಂದ್ರ ಶೆಟ್ಟಿ ಪ್ರಶ್ನೆ

ತೀರ್ಥಹಳ್ಳಿ : ಸಂಸದರು ವೇದಿಕೆಯಲ್ಲಿದ್ದ ಬ್ಯಾಗ್‌ ಮತ್ತು ಸ್ವಟರ್ ವಿತರಣೆ ಕಾರ್ಯಕ್ರಮವನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಬಿಜೆಪಿ ಕಾರ್ಯಕ್ರಮವನ್ನಾಗಿ ಸಂಪೂರ್ಣ ಮಾರ್ಪಡಿಸಿದ್ದಾರೆ. ಸರ್ಕಾರಿ ಯೋಜನೆ ವಿತರಣೆ ಕಾರ್ಯಕ್ರಮದಲ್ಲಿ ಯಾವುದೇ ರೀತಿಯ ಶಿಷ್ಟಾಚಾರ ಪಾಲನೆ ಮಾಡದ ಕ್ಷೇತ್ರ ಶಿಕ್ಷಣಾಧಿಕಾರಿ ಬಿಜೆಪಿ ಸಂಘಟನಾ ಕಾರ್ಯದರ್ಶಿಯೇ? ಎಂದು ಕಾಂಗ್ರೆಸ್ ಮುಖಂಡ, ಪಟ್ಟಣ ಪಂಚಾಯಿತಿ ನಾಮನಿರ್ದೇಶಿತ ಸದಸ್ಯ ಬಿ.ಆ‌ರ್. ರಾಘವೇಂದ್ರ ಶೆಟ್ಟಿ ಪ್ರಶ್ನಿಸಿದ್ದು ಅಷ್ಟೇ ಅಲ್ಲದೆ ಸೋಮವಾರ ಕ್ಷೇತ್ರ ಶಿಕ್ಷಣಾಧಿಕಾರಿಗಳ ವಿರುದ್ಧ ಅವರ ಕಚೇರಿ ಮುಂಭಾಗ ಕಾಂಗ್ರೆಸ್ ಪಕ್ಷದ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳುವುದಾಗಿ ತಿಳಿಸಿದ್ದಾರೆ.

WhatsApp Group Join Now
Telegram Group Join Now
Instagram Group Join Now

ಕೇಂದ್ರ ಸರ್ಕಾರದ ರಾಷ್ಟ್ರೀಯ ಗ್ರಾಮೀಣ ಸಾಕ್ಷರತಾ ಮಿಷನ್ ಯೋಜನೆಯಡಿ ಸರ್ಕಾರಿ ಶಾಲಾ ಮಕ್ಕಳಿಗೆ ವಿತರಿಸಲು ಬಿಡುಗಡೆಗೊಂಡ ಬ್ಯಾಗ್ ಮತ್ತು ಸ್ವೆಟರ್ ಗಳನ್ನು ತೀರ್ಥಹಳ್ಳಿಯ ಬಿಇಒ ನೇರವಾಗಿ ಉಸ್ತುವಾರಿ ಸಚಿವರಾದ ಮಧು ಬಂಗಾರಪ್ಪ ಅವರ ಗಮನಕ್ಕೆ ತಾರದೆ ಸಂಸದರ ಮೂಲಕ ಹಂಚಿಕೆ ಮಾಡಿದ್ದಾರೆ.

ಈ ಕಾರ್ಯಕ್ರಮದಲ್ಲಿ ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷರು ಹಾಗೂ ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರು, ವಿಧಾನ ಪರಿಷತ್ತು ಸದಸ್ಯರನ್ನು ಕೈಬಿಡಲಾಗಿದೆ. ಇದು ಒಕ್ಕೂಟ ವ್ಯವಸ್ಥೆಯನ್ನು ಮುರಿಯುವ ಪ್ರಯತ್ನವಾಗಿದೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

ವೇದಿಕೆ ಕಾರ್ಯಕ್ರಮದಲ್ಲಿಯೂ ಶಿಕ್ಷಣ ಸಚಿವರ ಬಗ್ಗೆ ಉಲ್ಲೇಖ ಮಾಡಿಲ್ಲ. ಇದು ಸಂಸದರು, ಶಾಸಕರು ವೈಯಕ್ತಿಕ ಹಣದಿಂದ ಕೊಟ್ಟಿರುವುದೇ ಆದರೆ ನಾವೇನು ಪ್ರಶ್ನಿಸುವುದಿಲ್ಲ. ಆದರೆ ಇದೂ ಪೂರ್ಣ ಕೇಂದ್ರ ಸರ್ಕಾರದ ಪ್ರಾಯೋಜಿತ ಕಾರ್ಯಕ್ರಮವಾಗಿದೆ. ರಾಜ್ಯ ಸರ್ಕಾರದ ಮೂಲಕವೇ ಅನುಷ್ಠಾನವಾಗಬೇಕಾದ ಈ ಕಾರ್ಯಕ್ರಮವನ್ನು ಶಿಕ್ಷಣಾಧಿಕಾರಿ ಮೊದಲೇ ಸಚಿವರ ಗಮನಕ್ಕೆ ತಂದಿಲ್ಲ ಎಂದು ಆರೋಪಿಸಿದ್ದಾರೆ.

ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಬ್ಯಾಗ್ ಮತ್ತು ಸ್ವಟರ್ ವಿತರಿಸುವ ಕೇಂದ್ರ ಸರ್ಕಾರದ ಯೋಜನೆಯ ಕಾರ್ಯ ಶ್ಲಾಘನೀಯ. ಅದನ್ನೇ ನೆಪ ಮಾಡಿಕೊಂಡು ಕ್ಷೇತ್ರ ಶಿಕ್ಷಣಾಧಿಕಾರಿ ತಮ್ಮ ಕಚೇರಿಯನ್ನು ಬಿಜೆಪಿ ಕಚೇರಿ ಎಂದು ತಿಳಿದಂತಿದೆ. ಅದೊಂದು ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯನ್ನು ಬಿಜೆಪಿ ಮೋರ್ಚಾವಾಗಿ ಬದಲಾಯಿಸಲು ಪ್ರಯತ್ನಿಸಿದ ಕ್ಷೇತ್ರ ಶಿಕ್ಷಣಾಧಿಕಾರಿ, ಕಾರ್ಯಕ್ರಮದಲ್ಲಿ ಭಾಗವಹಿಸಿದ ಎಲ್ಲಾ ಸಿಆರ್‌ಪಿ, ಸೇರಿ ಇತರ ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಿ ಅವರ ಮೇಲೆ ಶಿಸ್ತುಕ್ರಮ ಜರುಗಿಸಬೇಕೆಂದು ಬಿ.ಆ‌ರ್.ರಾಘವೇಂದ್ರ ಶೆಟ್ಟಿ  ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Koushik G K

MalnadTimes.com ವೆಬ್‌ಸೈಟ್‌ನ ಸ್ಥಾಪಕ ಮತ್ತು ನಿರ್ವಾಹಕರಾಗಿದ್ದಾರೆ. ಅಕ್ಟೋಬರ್ 3 2019 ರಲ್ಲಿ ಈ ತಾಣವನ್ನು ಆರಂಭಿಸಿದ ಅವರು, ಮೊದಲಿಗೆ ಐಟಿ ಕ್ಷೇತ್ರದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ತಮ್ಮ ತಾಂತ್ರಿಕ ಪರಿಣತಿಯನ್ನು ಮತ್ತು ಸ್ಥಳೀಯ ಸುದ್ದಿಗಳ ಪ್ರೀತಿಯನ್ನು ಒಂದಾಗಿಸಿ, ಮಲ್ನಾಡಿನ ಜನತೆಗೆ ನಿಖರವಾದ, ವಿಶ್ವಾಸಾರ್ಹ ಹಾಗೂ ಸಮಗ್ರ ಸುದ್ದಿಗಳನ್ನು ತಲುಪಿಸುವ ನಿಟ್ಟಿನಲ್ಲಿ ಈ ತಾಣವನ್ನು ರೂಪಿಸಿದ್ದಾರೆ. Malnad Times ಮೂಲಕ  ಶಿವಮೊಗ್ಗ ಮತ್ತು ಮಲ್ನಾಡು ಭಾಗದ ಸಮುದಾಯದ ಧ್ವನಿಯಾಗಿ, ಗ್ರಾಮೀಣ ಬದುಕು, ಪರಿಸರ, ಕೃಷಿ, ಶಿಕ್ಷಣ, ಮತ್ತು ಸಾರ್ವಜನಿಕ ವಿಚಾರಗಳನ್ನು ತಲುಪಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ.ಈ ತಾಣದ ನಿರ್ವಹಣೆ, ತಾಂತ್ರಿಕ ಹಾಗೂ ಸಂಪಾದಕೀಯ ಕಾರ್ಯಗಳಲ್ಲಿ ನಿತ್ಯ ಭಾಗವಹಿಸುತ್ತಿದ್ದಾರೆ.Contact No -7022818650