ತೀರ್ಥಹಳ್ಳಿ

ತೀರ್ಥಹಳ್ಳಿ : ಬ್ರಹ್ಮೋಸ್ ಗಣಪತಿ – ಹೊದಲದಲ್ಲಿ ವಿಶೇಷ ಆಕರ್ಷಣೆ

ತೀರ್ಥಹಳ್ಳಿ :ತಾಲೂಕಿನ ಹೊದಲದ ಶ್ರೀ ಗಣಪತಿ ಸೇವಾ ಸಮಿತಿ ವತಿಯಿಂದ ಆಯೋಜಿಸಲಾಗಿರುವ 31ನೇ ವರ್ಷದ ಗಣೇಶೋತ್ಸವದಲ್ಲಿ ಈ ಬಾರಿ ವಿಶೇಷ ಆಕರ್ಷಣೆಯಾಗಿ “ಬ್ರಹ್ಮೋಸ್ ಗಣೇಶ” ಪ್ರತಿಷ್ಠಾಪನೆ ಮಾಡಲಾಗಿದೆ.

WhatsApp Group Join Now
Telegram Group Join Now
Instagram Group Join Now

ಕುಶಲಕರ್ಮಿ ಹಾಗೂ ಕಲಾವಿದ ಉಪೇಂದ್ರ ಆಚಾರ್ಯ ಅವರ ಸೃಜನಾತ್ಮಕ ಚಿಂತನೆಯ ಫಲವಾಗಿ ಈ ಗಣಪತಿಯನ್ನು ಭಾರತೀಯ ಸೇನೆಯ ಅತ್ಯಾಧುನಿಕ ಕ್ಷಿಪಣಿ ಬ್ರಹ್ಮೋಸ್ ವಿನ್ಯಾಸದಲ್ಲಿ ರೂಪಿಸಲಾಗಿದೆ. ಪ್ರತಿಮೆ ನೋಡಲು ಆಗಮಿಸುತ್ತಿರುವ ಭಕ್ತರಿಗೆ ಇದು ವಿಶೇಷ ಕುತೂಹಲವನ್ನು ಮೂಡಿಸಿದೆ.

ಪ್ರತಿವರ್ಷವೂ ವಿಭಿನ್ನ ಆಲೋಚನೆಗಳಲ್ಲಿ ಗಣಪತಿಯನ್ನು ಅಲಂಕರಿಸುವ ಪರಂಪರೆಯನ್ನು ಮುಂದುವರಿಸಿಕೊಂಡು ಬಂದಿರುವ ಸಮಿತಿಯವರು, ಈ ಬಾರಿ ದೇಶಾಭಿಮಾನ ಮತ್ತು ಆಧುನಿಕ ತಂತ್ರಜ್ಞಾನಕ್ಕೆ ಸಂಬಂಧಿಸಿದ ಸಂದೇಶವನ್ನು ಒದಗಿಸುವ ಉದ್ದೇಶದಿಂದ ಈ ವಿನ್ಯಾಸವನ್ನು ಆಯ್ಕೆ ಮಾಡಿದ್ದಾರೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

ಸ್ಥಳೀಯರು ಹಾಗೂ ಭಕ್ತರು ಪ್ರತಿದಿನ ಹರಿದುಬರುತ್ತಿದ್ದು, ಈ ವಿನೂತನ ಬ್ರಹ್ಮೋಸ್ ಗಣೇಶವನ್ನು ಕಣ್ತುಂಬಿಕೊಳ್ಳುತ್ತಿದ್ದಾರೆ. ಸಾಂಸ್ಕೃತಿಕ ಕಾರ್ಯಕ್ರಮಗಳು, ಭಜನೆ, ಪೂಜೆ ಹಾಗೂ ಧಾರ್ಮಿಕ ಚಟುವಟಿಕೆಗಳೊಂದಿಗೆ ಸಾಗುತ್ತಿದೆ.

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Koushik G K

MalnadTimes.com ವೆಬ್‌ಸೈಟ್‌ನ ಸ್ಥಾಪಕ ಮತ್ತು ನಿರ್ವಾಹಕರಾಗಿದ್ದಾರೆ. ಅಕ್ಟೋಬರ್ 3 2019 ರಲ್ಲಿ ಈ ತಾಣವನ್ನು ಆರಂಭಿಸಿದ ಅವರು, ಮೊದಲಿಗೆ ಐಟಿ ಕ್ಷೇತ್ರದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ತಮ್ಮ ತಾಂತ್ರಿಕ ಪರಿಣತಿಯನ್ನು ಮತ್ತು ಸ್ಥಳೀಯ ಸುದ್ದಿಗಳ ಪ್ರೀತಿಯನ್ನು ಒಂದಾಗಿಸಿ, ಮಲ್ನಾಡಿನ ಜನತೆಗೆ ನಿಖರವಾದ, ವಿಶ್ವಾಸಾರ್ಹ ಹಾಗೂ ಸಮಗ್ರ ಸುದ್ದಿಗಳನ್ನು ತಲುಪಿಸುವ ನಿಟ್ಟಿನಲ್ಲಿ ಈ ತಾಣವನ್ನು ರೂಪಿಸಿದ್ದಾರೆ. Malnad Times ಮೂಲಕ  ಶಿವಮೊಗ್ಗ ಮತ್ತು ಮಲ್ನಾಡು ಭಾಗದ ಸಮುದಾಯದ ಧ್ವನಿಯಾಗಿ, ಗ್ರಾಮೀಣ ಬದುಕು, ಪರಿಸರ, ಕೃಷಿ, ಶಿಕ್ಷಣ, ಮತ್ತು ಸಾರ್ವಜನಿಕ ವಿಚಾರಗಳನ್ನು ತಲುಪಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ.ಈ ತಾಣದ ನಿರ್ವಹಣೆ, ತಾಂತ್ರಿಕ ಹಾಗೂ ಸಂಪಾದಕೀಯ ಕಾರ್ಯಗಳಲ್ಲಿ ನಿತ್ಯ ಭಾಗವಹಿಸುತ್ತಿದ್ದಾರೆ.Contact No -7022818650