SHIVAMOGGA | ಭೀಕರ ರಸ್ತೆ ಅಪಘಾತದಲ್ಲಿ 13 ಜನ ಮೃತಪಟ್ಟ ಘಟನೆ ಹಾವೇರಿ (Haveri) ಜಿಲ್ಲೆಯ ಬ್ಯಾಡಗಿ (Byadagi) ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿಯ ಬೆಂಗಳೂರು – ಪುಣೆ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ನಿಂತಿದ್ದ ಲಾರಿಗೆ ಹಿಂದಿನಿಂದ ಟಿಟಿ ವಾಹನ (TT Vehicle) ಡಿಕ್ಕಿಯಾಗಿದೆ. ಡಿಕ್ಕಿ ರಭಸಕ್ಕೆ ಟಿಟಿ ವಾಹನದಲ್ಲಿದ್ದ 7 ಮಂದಿ ಮಹಿಳೆಯರು ಸೇರಿದಂತೆ 13 ಜನ ಮೃತಪಟ್ಟಿದ್ದಾರೆ.

ಮೃತರೆಲ್ಲರು ಶಿವಮೊಗ್ಗದ ಭದ್ರಾವತಿಯ ಎಮ್ಮೆಹಟ್ಟಿಯ ಪರಶುರರಾಮ್ (45), ಭಾಗ್ಯ (40), ನಾಗೇಶ್ (50), ವಿಶಾಲಾಕ್ಷಿ (40), ಅರ್ಪಿತಾ (18), ಸುಭದ್ರಾಬಾಯಿ (65), (ಪುಣ್ಯ 50), ಮಂಜುಳುಬಾಯಿ (62), ಆದರ್ಶ (23), ಮಾನಸ (24), ರೂಪಾ (40), ಮಂಜುಳಾ (50) ಮೃತಪಟ್ಟವರು ಎಂದು ತಿಳಿದು ಬಂದಿದೆ ಇನ್ನೊಬ್ಬರ ಹೆಸರು ತಿಳಿದು ಬಂದಿಲ್ಲ.
ಓರ್ವ ಬಾಲಕಿ ಮತ್ತು ಅಜ್ಜಿ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಳಗಿನಜಾವ 4 ಗಂಟೆಯ ಸುಮಾರಿಗೆ ಈ ಅಪಘಾತ ನಡೆದಿದೆ ಎನ್ನಲಾಗಿದೆ.

ಟಿಟಿ ವಾಹನದಲ್ಲಿದ್ದ ಒಟ್ಟು 15 ಜನರೂ ಸವದತ್ತಿ ರೇಣುಕಾ ಯಲ್ಲಮ್ಮ ದರ್ಶನ ಪಡೆದು ಊರಿಗೆ ಮರಳುತ್ತಿದ್ದಾಗ ಈ ಘಟನೆ ಸಂಭವಿಸಿದೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.