ವಾಕಿಂಗ್ ತೆರಳಿದ್ದ ವ್ಯಕ್ತಿಯ ಬರ್ಬರ ಹತ್ಯೆ !

Written by malnadtimes.com

Published on:

ಭದ್ರಾವತಿ ; ವಾಕಿಂಗ್ ಗೆ ತೆರಳಿದ್ದ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಲಾದ ಘಟನೆ ತಾಲೂಕಿನ ಹೊಳೆಹೊನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

WhatsApp Group Join Now
Telegram Group Join Now
Instagram Group Join Now

ಹೇಮಣ್ಣ (68) ಕೊಲೆಯಾದ ವ್ಯಕ್ತಿ. ಹೊಳೆಹೊನ್ನೂರು ಕೊಪ್ಪ ಗ್ರಾಮದ ಸರ್ಕಾರಿ ಪದವಿ ಕಾಲೇಜ್ ರಸ್ತೆಯಲ್ಲಿ ಹೇಮಣ್ಣ ಅವರನ್ನು ಕೊಲೆ ಮಾಡಲಾಗಿದೆ. ಈ ಹಿಂದೆಯೂ ಹೇಮಣ್ಣ ಅವರ ಮೇಲೆ ದಾಳಿ ನಡೆಸಲಾಗಿತ್ತು ಆಗ ಅವರು ಕೂದಲೆಳೆ ಅಂತರದಲ್ಲಿ ಪಾರಾಗಿದ್ದರು.

ಇಂದು ಬೆಳಗ್ಗೆ ವಾಕಿಂಗ್ ಹೋಗಿದ್ದ ಸಂದರ್ಭದಲ್ಲಿ ದಾಳಿ ಮಾಡಿದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಥಳಿಸಿ ಕೊಲೆ ಮಾಡಿ ಪರಾರಿಯಾಗಿದ್ದಾರೆ.

ಸ್ಥಳಕ್ಕೆ ಹೊಳೆಹೊನ್ನೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave a Comment