Hosanagara

BSNL ನೆಟ್‌ವರ್ಕ್ ಸಮಸ್ಯೆ, ಟವರ್ ಏರಿ ಪ್ರತಿಭಟಿಸಿದ ಗ್ರಾಮಸ್ಥರು

BSNL ನೆಟ್‌ವರ್ಕ್
BSNL ನೆಟ್‌ವರ್ಕ್

ಹೊಸನಗರ : ಮೊಬೈಲ್ ನೆಟ್‌ವರ್ಕ್ (Mobile Network) ಸಮಸ್ಯೆಗೆ ಆಕ್ರೋಶಗೊಂಡ ಗ್ರಾಮಸ್ಥರು (Villagers) ಟವರ್ (Tower) ಏರಿ ಪ್ರತಿಭಟನೆ ನಡೆಸಿದ ಘಟನೆ ಹೊಸನಗರ (Hosanagara) ತಾಲೂಕಿನ ಮತ್ತಿಮನೆಯಲ್ಲಿ (Matthimane) ಸೋಮವಾರ ನಡೆದಿದೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ತಾಲೂಕಿನ ಮತ್ತಿಮನೆ ಗ್ರಾಪಂ ಹಿಂಭಾಗದ ಬಿಎಸ್‌ಎನ್‌ಎಲ್ ಟವರ್ (BSNL Tower) ಸಮೀಪದಲ್ಲಿ ಜಮಾಯಿಸಿದ ಗ್ರಾಮಸ್ಥರು ಸಮಸ್ಯೆ ಬಗ್ಗೆ ನಿರ್ಲಕ್ಷ್ಯ ತೋರುತ್ತಿರುವ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ನಗರ ಹೋಬಳಿ ಕಾಂಗ್ರೆಸ್ ಅಧ್ಯಕ್ಷ, ಬ್ಲಾಕ್ ಕಾರ್ಯದರ್ಶಿ ಕುಮಾರ್ ಹಿಲ್ಕುಂಜಿ, ಅಡಗೋಡಿ ಸ್ವಾಮಿ, ತರುವೆ ಕೃಷ್ಣ ಮತ್ತು ಇತರರು ಟವರ್ ಏರಿ ಅಲ್ಲೇ ಕುಳಿತು ಪ್ರತಿಭಟಿಸಿದರು. ಸಮಸ್ಯೆ ಬಗೆಹರಿಯುವ ತನಕ ಕೆಳಗೆ ಇಳಿಯುವುದಿಲ್ಲ ಎಂದು ಪಟ್ಟುಹಿಡಿದ ಘಟನೆ ನಡೆದಿದೆ.

ಸಾಕಷ್ಟು ವರ್ಷಗಳಿಂದ ಮೊಬೈಲ್ ಟವರ್ ಇದ್ದರು ನೆಟ್‌ವರ್ಕ್ ಸಮಸ್ಯೆ ಬಾಧಿಸುತ್ತಿದೆ. ವಿದ್ಯುತ್ ಹೋಗುತ್ತಿದ್ದಂತೆ ನೆಟ್‌ವರ್ಕ್ ಸಮಸ್ಯೆ ಎದುರಾಗುತ್ತಿದೆ. ಜನರೇಟರ್ ಕೆಟ್ಟು ಹೋಗಿದ್ದರು ದುರಸ್ಥಿ ಇಲ್ಲ ಅಧಿಕಾರಿಗಳಿಗೆ ಮನವಿ ಮಾಡಿದರೆ ಯಾವುದೇ ಉಪಯೋಗವಿಲ್ಲ. ನಿರ್ವಹಣೆಯನ್ನು ಖಾಸಗಿ ಕಂಪನಿಗೆ ನೀಡಲಾಗಿದೆ. ಆದರೆ ಅವರು ಟವರ್ ಹತ್ತಿರ ಬರೋದೇ ಇಲ್ಲ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಸ್ಥಳಕ್ಕೆ ದೌಡಾಯಿಸಿದ ಅಧಿಕಾರಿಗಳು :

ಪ್ರತಿಭಟನೆ ವಿಷಯ ತಿಳಿದ ಬಿಎಸ್‌ಎನ್‌ಎಲ್ ಜೆಟಿಒ ಹರೀಶ್, ಸಂತೋಷ್, ಶರತ್, ನಗರ ಠಾಣೆ ಪಿಎಸ್‌ಐ ರಮೇಶ್ ಪ್ರತಿಭಟನಾ ಸ್ಥಳಕ್ಕೆ ದೌಡಾಯಿಸಿದರು. ಈ ವೇಳೆ ಅಧಿಕಾರಿಗಳು ಮತ್ತು ಗ್ರಾಮಸ್ಥರ ನಡುವೆ ಮಾತಿನ ಚಕಮಕಿ ನಡೆದು ಗ್ರಾಮಸ್ಥರು ಆರೋಪಗಳ ಸುರಿಮಳೆಗೈದರು. ನಗರ ಠಾಣೆ ಪಿಎಸ್‌ಐ ರಮೇಶ್ ಗ್ರಾಮಸ್ಥರು ಮತ್ತು ಅಧಿಕಾರಿಗಳಿಂದ ಮಾಹಿತಿ ಪಡೆದರು.

6 ದಿನ ಕಾಲಾವಕಾಶ ಕೇಳಿದ ಅಧಿಕಾರಿಗಳು :

ಮೊಬೈಲ್ ನೆಟ್‌ವರ್ಕ್ 24 ಗಂಟೆಯೂ ಸಿಗಬೇಕು. ವಿದ್ಯುತ್ ಇಲ್ಲದಿದ್ದರು ಜನರೇಟರ್ ಮೂಲಕ ನೆಟ್‌ವರ್ಕ್ ಇರುವಂತೆ ಕ್ರಮ ಕೈಗೊಳ್ಳಲು ಪಟ್ಟುಹಿಡಿದರು. ಇದಕ್ಕೆ ಅಧಿಕಾರಿಗಳು 6 ದಿನದ ಕಾಲಾವಕಾಶ ಕೋರಿದರು. ಇದಕ್ಕೆ ಸಮ್ಮತಿಸಿದ ಗ್ರಾಮಸ್ಥರು ಟವರ್‌ನಿಂದ ಕೆಳಗಿಳಿದು, ಒಂದು ವೇಳೆ ಮಾತು ತಪ್ಪಿದರೆ ಮತ್ತೆ ಪ್ರತಿಭಟನಾ ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ಪ್ರಮುಖರಾದ ಅರಮನೆಕೊಪ್ಪ ಗೋಪಾಲ್, ಕೊಡಸೆ ಚಂದ್ರಪ್ಪ, ಅಪ್ಪುಭಟ್, ಹಿಲ್ಕುಂಜಿ ಕುಮಾರ್, ಕಿಶೋರ್, ಸುಕೇಶ್ ಮತ್ತಿಕೈ, ಟಿ.ಡಿ ಗಣಪತಿ, ತರುವೆ ಕೃಷ್ಣ, ಸ್ವಾಮಿ ಅಡಗೋಡಿ, ರವೀಂದ್ರ ಮತ್ತಿಮನೆ, ಪ್ರಶಾಂತ ಸಂಪೇಕಟ್ಟೆ, ವೆಂಕಟರಮಣ ಭಟ್, ಶ್ರೀನಿವಾಸ ಎಸ್, ಆಧಿತ್ಯ, ಇತರರು ಇದ್ದರು.

Read More

ಬೈಕ್ ಮತ್ತು ಕ್ಯಾಂಟರ್ ನಡುವೆ ಸಂಭವಿಸಿದ ಅಪಘಾತದಲ್ಲಿ ಸವಾರ ಸಾವು, ಯುವತಿ ನಾಲಗೆ ಕಟ್ !

ಮುಳ್ಳು ಚುಚ್ಚಿದೆ ಎಂದು ಮಲಗಿದ್ದ ವ್ಯಕ್ತಿ ಪ್ರಾಣಪಕ್ಷಿ ಬೆಳಗಾಗುವಷ್ಟರಲ್ಲಿ ಹಾರಿಹೋಗಿತ್ತು ! ಅಸಲಿಗೆ ಆಗಿದ್ದೇನು ?

ಮಾಹಿತಿ ಮತ್ತು ಮೂಲ: ಈ ವರದಿಯ ಮಾಹಿತಿ ವರದಿಗಾರರು, ಅಧಿಕೃತ ಪ್ರಕಟಣೆಗಳು ಅಥವಾ ಸ್ಥಳದಲ್ಲಿನ ವಿಶ್ವಾಸಾರ್ಹ ಮೂಲಗಳಿಂದ ಪರಿಶೀಲಿಸಲಾಗಿದೆ.

Mahesh Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ <strong>'ಮಲ್ನಾಡ್ ಟೈಮ್ಸ್'</strong> ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. <a href="mailto:[email protected]">[email protected]</a>