ತೀರ್ಥಹಳ್ಳಿ

ಹಣಗೆರೆಕಟ್ಟೆಯಲ್ಲಿ ಭೀಕರ ಅಪಘಾತ : ಕಳಚಿ ಬಿತ್ತು ಬಸ್‌ನ ಹಿಂಬದಿಯ ನಾಲ್ಕು ಚಕ್ರಗಳು !

ತೀರ್ಥಹಳ್ಳಿ : ತಾಲೂಕಿನ ಹಣಗೆರೆಕಟ್ಟೆಯ ಕುಣಜೆ ಬಳಿ ಬಸ್ ಹಾಗೂ ಹಾಗೂ ಕಾರು ನಡುವೆ ಭೀಕರ ಅಪಘಾತ ಸಂಭವಿಸಿದೆ. ಅಪಘಾತದ ರಭಸಕ್ಕೆ ಬಸ್‌ನ ಹಿಂಬದಿಯ 4 ಚಕ್ರಕಳು ಬೇರ್ಪಟ್ಟಿದ್ದು ಕಾರಿನ ಮುಂಭಾಗ ಜಖಂ ಆಗಿದೆ.

WhatsApp Group Join Now
Telegram Group Join Now
Instagram Group Join Now

ರಾಮೇಶ್ವರ ದೇವಸ್ಥಾನ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾಗಿ ಡಿ.ಎಸ್. ವಿಶ್ವನಾಥ್ ಶೆಟ್ಟಿ ನೇಮಕ

ತೀರ್ಥಹಳ್ಳಿ:-2025-26ನೇ ಸಾಲಿನ  ತೀರ್ಥಹಳ್ಳಿಯ ಪ್ರತಿಷ್ಠಿತ ಶ್ರೀ ರಾಮೇಶ್ವರ  ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ 9 ಜನರನ್ನು ಸರ್ಕಾರದಿಂದ ಆಯ್ಕೆಯಾಗಿದ್ದು, ಈ ಸಮಿತಿಗೆ  ಅಧ್ಯಕ್ಷರಾಗಿ ಅವಿರೋಧವಾಗಿ  ಡಿ‌.ಎಸ್. ವಿಶ್ವನಾಥ್ ಶೆಟ್ಟಿ ಆಯ್ಕೆಯಾಗಿದ್ದಾರೆ.

ಪಟ್ಟಣದ ಶ್ರೀ ರಾಮೇಶ್ವರ ದೇವಸ್ಥಾನದಲ್ಲಿ‌ ನೆಡೆದ ಪತ್ರಿಕಾಗೋಷ್ಠಿಯಲ್ಲಿ  ಶ್ರೀ ರಾಮೇಶ್ವರ ದೇವಸ್ಥಾನದ ವ್ಯವಸ್ಥಾಪಕ ಸಮಿತಿಯ ಅಧ್ಯಕ್ಷರಾದ ಡಿ.ಎಸ್. ವಿಶ್ವನಾಥ ಶೆಟ್ಟಿ ಮಾತನಾಡಿ ನಾಲ್ಕು ವರ್ಷಗಳಿಂದ ಖಾಲಿಯಿದ್ದ ಸದಸ್ಯರುಗಳನ್ನು ಸರ್ಕಾರ ಮತ್ತು ಧಾರ್ಮಿಕ ದತ್ತಿ ಪರಿಷತ್ತು, ಜಿಲ್ಲಾಧಿಕಾರಿ ಗಳ ಮೂಲಕ ಆಯ್ಕೆ ಮಾಡಿದ್ದಾರೆ ಎಂದರು.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

ನಮ್ಮ‌ಮೊದಲ ಆದ್ಯತೆ ದೇವಸ್ಥಾನದ ಪೌಳಿ ನಿರ್ಮಾಣವಾಗಿದೆ, ದೇವಸ್ಥಾನದ ಕೆಲಸಕ್ಕಾಗಿ ತಗ್ಗಿ ನಡೆಯಲು ಸಿದ್ದನಾಗಿದ್ದೇನೆ, ಹಾಗೇಯೇ ಮುಂದೆ ಬರುವ ದಸರಾವನ್ನು ಶಾಸಕ ಆರಗ ಜ್ಞಾನೇಂದ್ರ, ಮಾಜಿ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್ ಹಾಗೂ ಮಲೆನಾಡು ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಆರ್.ಎಂ. ಮಂಜುನಾಥಗೌಡ ನೇತೃತ್ವದಲ್ಲಿ ಸಭೆ ಕರೆದು ಅದ್ದೂರಿಯಾಗಿ ನಡೆಸಲು ತೀರ್ಮಾನ ಕೈಗೊಳ್ಳಲಿದ್ದೇವೆ, ಕ್ಷೇತ್ರದ ಜನರು ಸಹಕಾರ ನೀಡಬೇಕು ಎಂದರು. 

ಈ ಗೋಷ್ಠಿಯಲ್ಲಿ ಪ್ರಧಾನ ಅರ್ಚಕ ರಾಜಶೇಖರ್ ಭಟ್, ಸಮಿತಿಯ ಸದಸ್ಯರಾದ ಮಹಾಬಲರಾವ್, ಪ್ರದೀಪ್, ಪೂರ್ಣೇಶ್, ಹಾಲಿಗೆ ನಾಗರಾಜ್, ತ್ರಿವೇಣಿ ಸುರೇಶ್, ಜ್ಯೋತಿ  ರವಿ, ಶಶಿಧರ್, ಜಿಲ್ಲಾ ಧಾರ್ಮಿಕ ದತ್ತಿ ಪರಿಷತ್ ಸದಸ್ಯೆ ವರಲಕ್ಷ್ಮೀ, ನಾಗಭೂಷಣ ಉಪಸ್ಥಿತರಿದ್ದರು.

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Koushik G K

MalnadTimes.com ವೆಬ್‌ಸೈಟ್‌ನ ಸ್ಥಾಪಕ ಮತ್ತು ನಿರ್ವಾಹಕರಾಗಿದ್ದಾರೆ. ಅಕ್ಟೋಬರ್ 3 2019 ರಲ್ಲಿ ಈ ತಾಣವನ್ನು ಆರಂಭಿಸಿದ ಅವರು, ಮೊದಲಿಗೆ ಐಟಿ ಕ್ಷೇತ್ರದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ತಮ್ಮ ತಾಂತ್ರಿಕ ಪರಿಣತಿಯನ್ನು ಮತ್ತು ಸ್ಥಳೀಯ ಸುದ್ದಿಗಳ ಪ್ರೀತಿಯನ್ನು ಒಂದಾಗಿಸಿ, ಮಲ್ನಾಡಿನ ಜನತೆಗೆ ನಿಖರವಾದ, ವಿಶ್ವಾಸಾರ್ಹ ಹಾಗೂ ಸಮಗ್ರ ಸುದ್ದಿಗಳನ್ನು ತಲುಪಿಸುವ ನಿಟ್ಟಿನಲ್ಲಿ ಈ ತಾಣವನ್ನು ರೂಪಿಸಿದ್ದಾರೆ. Malnad Times ಮೂಲಕ  ಶಿವಮೊಗ್ಗ ಮತ್ತು ಮಲ್ನಾಡು ಭಾಗದ ಸಮುದಾಯದ ಧ್ವನಿಯಾಗಿ, ಗ್ರಾಮೀಣ ಬದುಕು, ಪರಿಸರ, ಕೃಷಿ, ಶಿಕ್ಷಣ, ಮತ್ತು ಸಾರ್ವಜನಿಕ ವಿಚಾರಗಳನ್ನು ತಲುಪಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ.ಈ ತಾಣದ ನಿರ್ವಹಣೆ, ತಾಂತ್ರಿಕ ಹಾಗೂ ಸಂಪಾದಕೀಯ ಕಾರ್ಯಗಳಲ್ಲಿ ನಿತ್ಯ ಭಾಗವಹಿಸುತ್ತಿದ್ದಾರೆ.Contact No -7022818650