ಬಿಎಸ್‌ವೈ ಮೊಮ್ಮಗನ ಅದ್ಧೂರಿ ಆರತಕ್ಷತೆಯಲ್ಲಿ ಗಣ್ಯರು ಭಾಗಿ !

Written by Koushik G K

Published on:

ಬಿ ಎಸ್ ಯಡಿಯೂರಪ್ಪ ಅವರ ಮೊಮ್ಮಗ ಮತ್ತು ಬಿ ವೈ ರಾಘವೇಂದ್ರ ಪುತ್ರ ಸುಭಾಷ್ ಭಾನುವಾರ ವಿವಾಹ ಜೀವನಕ್ಕೆ ಕಾಲಿಡಲಿದ್ದಾರೆ. ಈ ಸಂದರ್ಭದಲ್ಲಿ ಶನಿವಾರ ನಡೆದ ಆರತಕ್ಷತೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಹಲವು ಗಣ್ಯರು ಭಾಗವಹಿಸಿದ್ದರು.

WhatsApp Group Join Now
Telegram Group Join Now
Instagram Group Join Now

ಬೆಂಗಳೂರಿನ ಅರಮನೆ ಮೈದಾನದಲ್ಲಿ ಬಿವೈ ರಾಘವೇಂದ್ರ ಪುತ್ರ ಸುಭಾಷ್ ಮತ್ತು ಶ್ರಾವಣಾ ಅವರ ಆರತಕ್ಷತಾ ಸಮಾರಂಭವು ಅದ್ದೂರಿಯಾಗಿ ನಡೆಯಿತು . ಈ ಸಂದರ್ಭದಲ್ಲಿದ್ದ ಜಮೀರ್ ಅಹ್ಮದ್, ಬೈರತಿ ಸುರೇಶ್, ಸರ್ಕಾರದ ಪ್ರಧಾನ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಮುಂತಾದ ಗಣ್ಯರು ಉಪಸ್ಥಿತರಿದ್ದರು. ಸಮಾರಂಭದಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ಬಿವೈ ರಾಘವೇಂದ್ರ ಶಾಲು ಹೊದಿಸಿದರು.

ಮಾರ್ಚ್ 24 ರಂದು ಕಲಬುರಗಿಯಲ್ಲಿ ಬಿವೈ ರಾಘವೇಂದ್ರ ಅವರ ಪುತ್ರ ಸುಭಾಷ್, ಕಲಬುರಗಿಯ ಮಹಾದಾಸೋಹಿ ಶರಣಬಸವೇಶ್ವರ ಸಂಸ್ಥಾನದ ಲಿಂಗರಾಜಪ್ಪ ಅಪ್ಪ ಮತ್ತು ದೀಪಾಲಿ ದಂಪತಿಯ ಪುತ್ರಿ ಶ್ರಾವಣ ಅವರನ್ನು ವರಿಸಲಿದ್ದಾರೆ.

ಸುಭಾಷ್ ಮತ್ತು ಶ್ರಾವಣಾ ಅವರ ಆರತಕ್ಷತೆ ಸಮಾರಂಭದಲ್ಲಿ ಜಾತಿಯ ಬಿಜೆಪಿಯ ರಾಷ್ಟ್ರಾಧ್ಯಕ್ಷ ಮತ್ತು ಕೇಂದ್ರ ಸಚಿವ ಜೆ.ಪಿ. ನಡ್ಡಾ, ಉಪರಾಷ್ಟ್ರಪತಿ ಜಗದೀಪ್ ಧನಕರ್, ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಆಂಧ್ರ ಪ್ರದೇಶದ ರಾಜ್ಯಪಾಲ ಅಬ್ದುಲ್ ನಜೀರ್, ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಮತ್ತು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಭಾಗವಹಿಸಿ, ನವ ವಧು-ವರರಿಗೆ ಶುಭ ಹಾರೈಸಿದರು.

ಚಿತ್ರನಟರಾದ ರಾಕಿಂಗ್ ಸ್ಟಾರ್ ಯಶ್, ಡಾಲಿ ಧನಂಜಯ್, ಹಿರಿಯ ನಟ ಅನಂತ್ ನಾಗ್, ಸುಂದರ್ ರಾಜ್, ಪ್ರಮೀಳಾ ಜೋಷಾಯ್, ರಮೇಶ್ ಅರವಿಂದ್ ಮತ್ತು ಇತರರು ಆಗಮಿಸಿದರು. ಬೆಂಗಳೂರಿನ ಅರಮನೆ ಮೈದಾನದಲ್ಲಿ ಸುಭಾಷ್ ಮತ್ತು ಶ್ರಾವಣಾ ಅವರ ಆರತಕ್ಷತೆ ಸಮಾರಂಭವು ನಡೆಯಿತು.

Read More

ಹೊಸನಗರ ; 39 ಕೆ.ಜಿ. ಶ್ರೀಗಂಧ ಸಹಿತ ಓರ್ವನ ಬಂಧನ !

500 ರೂ ನೋಟ್ ಬ್ಯಾನ್ ಆಗುತ್ತಾ ?

Leave a Comment