CHIKKAMAGALURU ; ಹಾಸನಾಂಬೆ ದರ್ಶನಕ್ಕೆ ಹೊರಟಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದು, ಮಹಿಳೆ ಮೃತಪಟ್ಟ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಕಲ್ಕೆರೆ ಗ್ರಾಮದಲ್ಲಿ ಅ.30ರ ಬುಧವಾರ ನಡೆದಿದೆ.

ಚಿಕ್ಕಮಗಳೂರು ತಾಲೂಕಿನ ಗವನಹಳ್ಳಿ ಗ್ರಾಮದ ಮಂಜು-ವನಿತಾ ದಂಪತಿ ಪ್ರಯಾಣಿಸುತ್ತಿದ್ದ ಕಾರು ಬುಧವಾರ ಬೆಳಗಿನಜಾವ 5 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ.
ಮಂಜು ಪತ್ನಿ ವನಿತಾ (38) ಮೃತಪಟ್ಟವರು. ಕಾರು ಚಲಾಯಿಸುತ್ತಿದ್ದ ಮಂಜು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
Malnad Times App ಡೌನ್ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
ಲೇಖನವನ್ನು ಮುಂದುವರಿಸಿ ಓದಿ

ಕಾರು ಕೆರೆಗೆ ಬಿದ್ದ ಕೂಡಲೇ ಸ್ಥಳಿಯರಿಂದ ರಕ್ಷಣಾ ಕಾರ್ಯ ನಡೆದಿದ್ದು, ಕಾರಿಗೆ ಹಗ್ಗ ಕಟ್ಟಿ ಕಲ್ಕೆರೆ ಗ್ರಾಮಸ್ಥರು ಎಳೆದು ರಕ್ಷಣಾ ಕಾರ್ಯಾಚರಣೆ ಮಾಡಿದ್ದರು. ಕಾರು ಕೆರೆಗೆ ಬಿದ್ದು, ವನಿತಾ ನೀರು ಕುಡಿದಿದ್ದರಿಂದ ಆಕೆಯನ್ನು ಬದುಕಿಸುವ ಗ್ರಾಮಸ್ಥರ ಹರಸಾಹಸ ಫಲ ನೀಡಲಿಲ್ಲ.

ಬೇಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.

