Accident

ದೇವರ ದರ್ಶನಕ್ಕೆ ಹೊರಟಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ ಕಾರು, ಮಹಿಳೆ ಸಾವು !

CHIKKAMAGALURU ; ಹಾಸನಾಂಬೆ ದರ್ಶನಕ್ಕೆ ಹೊರಟಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದು, ಮಹಿಳೆ ಮೃತಪಟ್ಟ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಕಲ್ಕೆರೆ ಗ್ರಾಮದಲ್ಲಿ ಅ.30ರ ಬುಧವಾರ ನಡೆದಿದೆ.

WhatsApp Group Join Now
Telegram Group Join Now
Instagram Group Join Now
ಓದುಗರಿಗೆ ಹಾಗೂ ಜಾಹೀರಾತುದಾರರಿಗೆ ನರಕ ಚತುರ್ದಶಿಯ ಹಾರ್ದಿಕ ಶುಭಾಶಯಗಳು
📢 Stay Updated! Join our WhatsApp Channel Now →

ಚಿಕ್ಕಮಗಳೂರು ತಾಲೂಕಿನ ಗವನಹಳ್ಳಿ ಗ್ರಾಮದ ಮಂಜು-ವನಿತಾ ದಂಪತಿ ಪ್ರಯಾಣಿಸುತ್ತಿದ್ದ ಕಾರು ಬುಧವಾರ ಬೆಳಗಿನಜಾವ 5 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ.

ಮಂಜು ಪತ್ನಿ ವನಿತಾ (38) ಮೃತಪಟ್ಟವರು. ಕಾರು ಚಲಾಯಿಸುತ್ತಿದ್ದ ಮಂಜು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play
ಲೇಖನವನ್ನು ಮುಂದುವರಿಸಿ ಓದಿ

ಕಾರು ಕೆರೆಗೆ ಬಿದ್ದ ಕೂಡಲೇ ಸ್ಥಳಿಯರಿಂದ ರಕ್ಷಣಾ ಕಾರ್ಯ ನಡೆದಿದ್ದು, ಕಾರಿಗೆ ಹಗ್ಗ ಕಟ್ಟಿ ಕಲ್ಕೆರೆ ಗ್ರಾಮಸ್ಥರು ಎಳೆದು ರಕ್ಷಣಾ ಕಾರ್ಯಾಚರಣೆ ಮಾಡಿದ್ದರು. ಕಾರು ಕೆರೆಗೆ ಬಿದ್ದು, ವನಿತಾ ನೀರು ಕುಡಿದಿದ್ದರಿಂದ ಆಕೆಯನ್ನು ಬದುಕಿಸುವ ಗ್ರಾಮಸ್ಥರ ಹರಸಾಹಸ ಫಲ ನೀಡಲಿಲ್ಲ.

ಬೇಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.

ಮಾಹಿತಿ ಮತ್ತು ಮೂಲ: ಈ ವರದಿಯ ಮಾಹಿತಿ ವರದಿಗಾರರು, ಅಧಿಕೃತ ಪ್ರಕಟಣೆಗಳು ಅಥವಾ ಸ್ಥಳದಲ್ಲಿನ ವಿಶ್ವಾಸಾರ್ಹ ಮೂಲಗಳಿಂದ ಪರಿಶೀಲಿಸಲಾಗಿದೆ.

Mahesh Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ <strong>'ಮಲ್ನಾಡ್ ಟೈಮ್ಸ್'</strong> ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. <a href="mailto:[email protected]">[email protected]</a>