ಹೊಸನಗರ ; ಶಿವಮೊಗ್ಗ ಜಿಲ್ಲೆಯ ತಾಲ್ಲೂಕಿನ ಸರ್ಕಾರಿ ಶಾಲೆಯಲ್ಲಿ ಕುಡಿಯುವ ನೀರಿನ ಟ್ಯಾಂಕ್ಗೆ ಕಿಡಿಗೇಡಿಗಳು ಕೀಟನಾಶಕ ಬೆರೆಸಿರುವ ಪ್ರಕರಣ ಇದು ಯಾವ ಭಯೋತ್ಪಾದಕ ಕೃತ್ಯಗಳಿಗೂ ಕಡಿಮೆಯಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ.
ಈ ಕುರಿತು ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಸಿಎಂ, ‘ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕಿನ ಹೂವಿನಕೋಣೆಯ ಸರ್ಕಾರಿ ಪ್ರಾಥಮಿಕ ಶಾಲೆಯ ಕುಡಿಯುವ ನೀರಿನ ಟ್ಯಾಂಕ್ಗೆ ಕಿಡಿಗೇಡಿಗಳು ಕೀಟನಾಶಕ ಬೆರೆಸಿರುವ ಪ್ರಕರಣವನ್ನು ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಲಾಗಿದೆ. ಹತ್ತಾರು ಎಳೆಯ ಮಕ್ಕಳ ಮಾರಣ ಹೋಮ ನಡೆಸುವ ದುರುದ್ದೇಶ ಹೊಂದಿದ್ದ ಇದು ಯಾವ ಭಯೋತ್ಪಾದಕ ಕೃತ್ಯಗಳಿಗೂ ಕಡಿಮೆಯಿಲ್ಲ ಎನ್ನುವುದು ನನ್ನ ಭಾವನೆ’ ಎಂದಿದ್ದಾರೆ.
ಅಡುಗೆ ಸಿಬ್ಬಂದಿಯ ಸಮಯ ಪ್ರಜ್ಞೆಯಿಂದಾಗಿ ಘಟಿಸಬಹುದಾಗಿದ್ದ ಬಹುದೊಡ್ಡ ದುರಂತವೊಂದು ತಪ್ಪಿದೆ. ಶಾಲೆಯ ಅಡುಗೆ ಸಿಬ್ಬಂದಿಯನ್ನು ಅಭಿನಂದಿಸುತ್ತೇನೆ. ಘಟನೆಯ ಕುರಿತು ಸೂಕ್ತ ತನಿಖೆ ನಡೆಸಿ, ಕೃತ್ಯ ಎಸಗಿರುವ ದುರುಳರನ್ನು ಪತ್ತೆ ಹಚ್ಚಿ ಕಠಿಣ ಶಿಕ್ಷೆಯಾಗುವಂತೆ ನೋಡಿಕೊಳ್ಳುವಂತೆ ಪೊಲೀಸರಿಗೆ ಸೂಚನೆ ನೀಡಿದ್ದೇನೆ ಎಂದು ತಿಳಿಸಿದ್ದಾರೆ.

ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.