ರಿಪ್ಪನ್ಪೇಟೆ : ಮಹಾತ್ಮಾಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯ 2023-24 ಮತ್ತು 24-25ನೇ ಸಾಲಿನ ಮಹಾತ್ವಾಕಾಂಕ್ಷಿ ಯೋಜನೆಯಡಿ ಅನುಮೋದಿಸಲ್ಪಟ ವೈಯಕ್ತಿಕ ಕಾಮಗಾರಿಗಳನ್ನು ಆರಂಭಿಸದಂತೆ ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಆದೇಶಿಸಿರುವುದು ಖಂಡನೀಯ ಎಂದು ಗ್ರಾಮ ಪಂಚಾಯ್ತಿ ಸದಸ್ಯ ಜಿ.ಡಿ.ಮಲ್ಲಿಕಾರ್ಜುನ ಆಕ್ರೋಶ ವ್ಯಕ್ತಪಡಿಸಿ ತಕ್ಷಣ ಈ ಆದೇಶವನ್ನು ವಾಪಾಸ್ ಪಡೆಯುವಂತೆ ಆಗ್ರಹಿಸಿದ್ದಾರೆ.
ರಿಪ್ಪನ್ಪೇಟೆಯಲ್ಲಿ ಪತ್ರಿಕಾ ಹೇಳಿಕೆ ನೀಡಿದ ಅವರು, ಉದ್ಯೋಗ ಖಾತ್ರಿ ಯೋಜನೆಯಡಿ 2023-24 ಮತ್ತು 24-25ನೇ ಸಾಲಿನ ವೈಯಕ್ತಿಕ ಕ್ರಿಯಾ ಯೋಜನೆ ಅನುಮೋದನೆಗೊಂಡ ಕಾಮಗಾರಿಗಳನ್ನು ತಕ್ಷಣ ಪ್ರಾರಂಭಿಸಲು ಅವಕಾಶ ಮಾಡಿಕೊಡಬೇಕು. ಕಾರಣ, ಮಲೆನಾಡಿನ ವ್ಯಾಪ್ತಿಯಲ್ಲಿ ಮಳೆಗಾಲ ಪ್ರಾರಂಭವಾದರೆ ಕಾಮಗಾರಿ ಮಾಡುವುದು ಕಷ್ಟಕರವಾಗಿದೆ. ಆ ಕಾರಣ ಜಿಲ್ಲಾ ಪಂಚಾಯ್ತಿ ಸಿಇಒ ಈಗಾಗಲೇ ತಡೆ ಹಿಡಿದಿರುವ ವೈಯಕ್ತಿಕ ಕಾಮಗಾರಿಗಳನ್ನು ಮುಂದುವರಿಸಲು ಆದೇಶ ಹೊರಡಿಸುವಂತೆ ಮನವಿ ಮೂಲಕ ಆಗ್ರಹಿಸಿದ್ದಾರೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.