ಮಲೆನಾಡಿನಲ್ಲಿ ನಿಲ್ಲದ ವರುಣನಾರ್ಭಟ, ಹೊಸನಗರದ ಚಕ್ರಾನಗರದಲ್ಲಿ ರಾಜ್ಯದಲ್ಲೇ ಅತಿ ಹೆಚ್ಚು ಮಳೆ ದಾಖಲು

Written by Mahesh Hindlemane

Published on:

HOSANAGARA | ಮಳೆ(ಲೆ)ನಾಡಿನ ತವರು ಲಿಂಗನಮಕ್ಕಿ ಜಲಾಶಯಕ್ಕೆ ನೀರುಣಿಸುವ ಪ್ರಧಾನ ಜಲಾನಯನ ಪ್ರದೇಶವಾದ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನಾದ್ಯಂತ ವರುಣನಾರ್ಭಟ ಮುಂದುವರೆದಿದೆ.

WhatsApp Group Join Now
Telegram Group Join Now
Instagram Group Join Now

Rain Damage | ಹೊಸನಗರ ತಾಲೂಕಿನಲ್ಲಿ ಈವರೆಗೆ ಎಲ್ಲೆಲ್ಲಿ ಏನೇನು ಅನಾಹುತವಾಗಿದೆ ?

ಶುಕ್ರವಾರ ಬೆಳಗ್ಗೆ 8:30 ಗಂಟೆಗೆ ಅಂತ್ಯಗೊಂಡಂತೆ ಕಳೆದ 24 ಗಂಟೆಗಳಲ್ಲಿ ತಾಲೂಕಿನ ಚಕ್ರಾನಗರದಲ್ಲಿ ರಾಜ್ಯದಲ್ಲೇ ಅತಿ ಹೆಚ್ಚು 285 ಮಿಲಿ ಮೀಟರ್ ಮಳೆ ದಾಖಲಾಗಿದೆ.

ಮತ್ತೆಲ್ಲೆಲ್ಲಿ ಎಷ್ಟು ಮಳೆಯಾಗಿದೆ ?

  • ಮಾಸ್ತಿಕಟ್ಟೆ : 235 mm
  • ಹುಲಿಕಲ್ : 230 mm
  • ಮಾಣಿ : 205 mm
  • ಸಾವೇಹಕ್ಲು : 182 mm
  • ಯಡೂರು : 175 mm
  • ಬಿದನೂರುನಗರ : 143 mm
  • ಕಾರ್ಗಲ್ (ಸಾಗರ) : 124.4 mm
  • ಹೊಸನಗರ : 113.2 mm
  • ಹುಂಚ : 103 mm
  • ಅರಸಾಳು : 70 mm
  • ರಿಪ್ಪನ್‌ಪೇಟೆ : 52 mm

ಲಿಂಗನಮಕ್ಕಿ ಜಲಾಶಯ :

1819 ಅಡಿ ಗರಿಷ್ಠ ಮಟ್ಟದ ಲಿಂಗನಮಕ್ಕಿ ಜಲಾಶಯದ ನೀರಿನ ಮಟ್ಟ ಶುಕ್ರವಾರ ಬೆಳಗ್ಗೆ 8 ಗಂಟೆಗೆ 1791.50 ಅಡಿ ತಲುಪಿದ್ದು ಕಳೆದ ಬಾರಿಗಿಂತ 33 ಅಡಿ ಹೆಚ್ಚು ನೀರು ಸಂಗ್ರಹವಾಗಿದೆ. ಕಳೆದ ವರ್ಷ ಇದೇ ಅವಧಿಗೆ ಜಲಾಶಯದ ನೀರಿನ ಮಟ್ಟ 1758.35 ಅಡಿ ದಾಖಲಾಗಿತ್ತು.

ಶಿವಮೊಗ್ಗ ಜಿಲ್ಲೆಯ ಎಲ್ಲಾ ಶಾಲಾ, ಕಾಲೇಜುಗಳಿಗೆ ಶುಕ್ರವಾರ ರಜೆ ಘೋಷಿಸಿ ಡಿಸಿ ಆದೇಶ

Author Profile

Mahesh Hindlemane
Mahesh Hindlemane
ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.

Leave a Comment