ಹೊಸನಗರ ; ತಾಲೂಕಿನ ಮಾರುತಿಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ಕಚ್ಚಿಗೆಬೈಲು ಗ್ರಾಮದ ವಾಸಿ ಧರ್ಮಪ್ಪ ಮತ್ತು ವೇದಾವತಿ ದಂಪತಿಗಳ ಪುತ್ರಿ ಕು|| ಚಾಂದಿನಿ, ಈ ಬಾರಿ ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವ ಪ್ರಯುಕ್ತ ನಡೆಯುವ ಕರ್ತವ್ಯ ಪಥದ ಪೆರೇಡ್ ನಲ್ಲಿ ಭಾರತೀಯ ಸೈನ್ಯವನ್ನು ಪ್ರತಿನಿಧಿಸಿ ಹೆಜ್ಜೆ ಹಾಕಲಿದ್ದಾಳೆ.
ಮಗಳು ಭಾರತೀಯ ಸೈನ್ಯ ಸೇರಬೇಕೆಂಬ ತನ್ನ ತಂದೆಯ ಕನಸನ್ನು ನನಸಾಗಿಸಿದ ಚಾಂದಿನಿ, ಪ್ರಸ್ತುತ ಸಿ.ಆರ್.ಪಿ.ಎಫ್ ಯೋಧೆಯಾಗಿ ಸೇವೆ ಸಲ್ಲಿಸುತ್ತಿರುವುದು ವಿಶೇಷ.

ಪ್ರಾಥಮಿಕದಿಂದ ಪದವಿ ಶಿಕ್ಷಣದವರೆಗೂ ಸರ್ಕಾರಿ ಶಾಲೆಯಲ್ಲೇ ಅಭ್ಯಾಸ ಮಾಡಿದ್ದ ಈಕೆ, ಇದುವರೆಗೆ ಒಟ್ಟು 3 ಬಾರಿ ಕರ್ತವ್ಯ ಪಥದ ಪೆರೇಡ್ ಗೆ ಆಯ್ಕೆಯಾಗಿದ್ದು, ತಾಲೂಕಿಗೆ ಕೀರ್ತಿ ತಂದಿದ್ದಾಳೆ. ಜನವರಿ 26 ರಂದು ಗಣರಾಜ್ಯೋತ್ಸವದ ಸಂದರ್ಭದಲ್ಲಿ ದೆಹಲಿಯ ಕರ್ತವ್ಯ ಪಥದಲ್ಲಿ ನಡೆಯುವ ಪರೇಡ್ ನಲ್ಲಿ ಹೆಜ್ಜೆ ಹಾಕಲಿದ್ದಾಳೆ.

ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.