Ripponpete

ರಿಪ್ಪನ್‌ಪೇಟೆ ಜಿ.ಎಸ್.ಬಿ. ಸಮುದಾಯದಲ್ಲಿ ಶ್ರೀವಿಷ್ಣು ಸಹಸ್ರನಾಮ ಪಾರಾಯಣ ಕಾರ್ಯಕ್ರಮ ಭಕ್ತಿಯಿಂದ ಸಂಪನ್ನ

ರಿಪ್ಪನ್‌ಪೇಟೆ : ಗೌಡ ಸಾರಸ್ವತ ಬ್ರಾಹ್ಮಣ ಸಮಾಜದ ಶ್ರೀರಾಮ ಮಂದಿರದಲ್ಲಿ ಭಾನುವಾರ ಜೇಷ್ಟ ಮಾಸದ ಅಂಗವಾಗಿ ಶ್ರೀವಿಷ್ಣು ಸಹಸ್ರನಾಮ ಪಠಣ ಹಾಗೂ ವಿಶೇಷ ಪೂಜಾ ಕಾರ್ಯಕ್ರಮ ಭಕ್ತಿಭಾವದಿಂದ ಆಯೋಜಿಸಲಾಯಿತು. ಈ ಧಾರ್ಮಿಕ ಕಾರ್ಯಕ್ರಮವು ಲೋಕಕಲ್ಯಾಣಾರ್ಥವಾಗಿ ನೆರವೇರಿತು.

WhatsApp Group Join Now
Telegram Group Join Now
Instagram Group Join Now

ಶ್ರೀ ವಿಷ್ಣು ಸಹಸ್ರನಾಮ ಪಠಣದಲ್ಲಿ ಭಕ್ತರು ಶ್ರೀ ವಿಷ್ಣು ಅಷ್ಟೋತ್ತರ ಮತ್ತು ಶ್ರೀ ಲಕ್ಷ್ಮಿ ಅಷ್ಟೋತ್ತರ ಪಾರಾಯಣವನ್ನು ಶ್ರದ್ಧೆಯಿಂದ ನೆರವೇರಿಸಿದರು. ಸಮಸ್ತ ಗೌಡ ಸಾರಸ್ವತ ಬ್ರಾಹ್ಮಣ ಸಮುದಾಯದ ಸದಸ್ಯರು ಬಾಂಧವರ ಕ್ಷೇಮಾಭಿವೃದ್ದಿ, ಹಿಂದೂ ರಾಷ್ಟ್ರದ ಪ್ರಗತಿ ಮತ್ತು ಶ್ರೇಯಸ್ಸಿಗಾಗಿ ಶ್ರೀ ಮಹಾವಿಷ್ಣುವಿನ ಮುಂದೆ ವಿಶೇಷ ಪ್ರಾರ್ಥನೆ ಸಲ್ಲಿಸಿದರು.

ಕಾರ್ಯಕ್ರಮದ ನಂತರ ಭಜನೆ, ಮಹಾಮಂಗಳಾರತಿ, ತೀರ್ಥಪ್ರಸಾದ ವಿತರಣೆ ಹಾಗೂ ಸಮಾಜಬಾಂಧವರಿಗೆ ಸಾಮೂಹಿಕ ಅನ್ನಸಂತರ್ಪಣೆ ಜರುಗಿತು.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

ಈ ಸಂದರ್ಭದಲ್ಲಿ ಜಿ.ಎಸ್.ಬಿ. ಸಮುದಾಯದ ಅಧ್ಯಕ್ಷ ಗಣೇಶ್ ಕಾಮತ್, ರಾಮದಾಸಭಟ್ ಡಿ, ನರಸಿಂಹ ಕಾಮತ್, ದೀಪಕ್ ಭಗತ್, ಜೆ.ರಾಧಾಕೃಷ್ಣ, ಹರೀಶ್ ಪ್ರಭು, ರಾಘವೇಂದ್ರ ಕಾಮತ್, ಕಸ್ತೂರಿನಾಯಕ್, ಶಕುಂತಳಾ ಪ್ರಭು, ಸಂಧ್ಯಾ ಕಾಮತ್, ಯಶೋಧ ಶೆಣೈ, ಶುಭ ಶಶಿಧರ್ ಪೈ, ಪೂರ್ಣಿಮಾ ಕಿಣಿ, ಸಂಧ್ಯಾ ಪ್ರಭು ಮತ್ತು ಸಮಾಜದ ಅನೇಕ ಸದಸ್ಯರು ಭಾಗವಹಿಸಿದ್ದರು.

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]