ಸಿಡಿಲು ಬಡಿದು ಚಿಕನ್ ಅಂಗಡಿ ಮಾಲಿಕ ಸಾವು !

Written by Mahesha Hindlemane

Published on:

ಶಿವಮೊಗ್ಗ ; ಸಿಡಿಲು ಬಡಿದು ಚಿಕನ್ ಅಂಗಡಿಯ ಮಾಲಿಕ ಸಾವನಪ್ಪಿದ ಘಟನೆ ಸೋಮವಾರ ನಡೆದಿದೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಶೇಕ್ ಮುಜೀಬ್(45) ಮೃತ ದುರ್ದೈವಿ. ಶಿವಮೊಗ್ಗ ತಾಲೂಕಿನ ರಾಮನಗರದಲ್ಲಿ ಚಿಕನ್ ಅಂಗಡಿಯಲ್ಲಿದ್ದಾಗ ಸಿಡಿಲು ಬಡಿದಿದ್ದು ಸ್ಥಳದಲ್ಲಿಯೇ ಸಾವನಪ್ಪಿದ್ದಾರೆ.

ಶೇಕ್ ಮುಜೀಬ್ ಹಾರನಹಳ್ಳಿ ನಿವಾಸಿಯಾಗಿದ್ದು, ರಾಮನಗರದಲ್ಲಿ ಚಿಕನ್ ಅಂಗಡಿ ಇಟ್ಟುಕೊಂಡು ಜೀವನ ನಡೆಸುತ್ತಿದ್ದರು. ಅಂಗಡಿ ಪಕ್ಕದಲ್ಲಿದ್ದ ಮರಕ್ಕೆ ಸಿಡಿಲು ಬಡಿದು ಅಲ್ಲೇ ಇದ್ದ ಶೇಕ್ ಮುಜೀಬ್ ಗೆ ಸಿಡಿಲು ಬಡಿದಿದೆ. ಈ ಘಟನೆ ಕುಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಇನ್ನು ಶಿವಮೊಗ್ಗದ ವಿನೋಬ ನಗರದ ಆಂಜನೇಯ ಸ್ವಾಮಿ ದೇವಸ್ಥಾನದ ಬಳಿಯಿದ್ದ ತೆಂಗಿನಮರಕ್ಕೆ ಸಿಡಿಲು ಬಡಿದು ಬೆಂಕಿ ಹತ್ತಿಕೊಂಡ ಘಟನೆ ಸಹ ನಡೆದಿದೆ.

ಭದ್ರಾವತಿಯಲ್ಲಿಯೂ ಸಿಡಿಲು ಬಡಿದು ದಂಪತಿಗಳು ಗಾಯಗೊಂಡಿದ್ದಾರೆ. ಗಾಯಗೊಂಡವರನ್ನ ಭದ್ರಾವತಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಂಗೀತ ಮತ್ತು ಜಾನ್ ಎಂಬುವರು ಆಸ್ಪತ್ರೆಗೆ ದಾಖಲಿಸಲಾಗಿದೆ.

Leave a Comment