ಹೊಸನಗರ ; ಪೊಲೀಸ್ ಇಲಾಖೆಯಲ್ಲಿ 23 ವರ್ಷಗಳ ಅವಿರತ ಸೇವೆಯ ಜೊತೆಯಲ್ಲಿ, ಸಾಹಿತ್ಯ ಕ್ಷೇತ್ರದಲ್ಲಿ ತಮ್ಮದೇ ಛಾಪು ಮೂಡಿಸಿ ಸುಮಾರು ಹತ್ತು ಸಾಹಿತ್ಯ ಕೃತಿಗಳನ್ನು (ಕತೆ-ಕವನ) ಲೋಕಾರ್ಪಣೆ ಮಾಡಿದ ರಾಜ್ಯ ಪೊಲೀಸ್ ಇಲಾಖೆಯ ಮೊದಲ ವ್ಯಕ್ತಿ ಎಂಬ ವಿಶಿಷ್ಟ ಗೌರವಕ್ಕೆ ಪಾತ್ರರಾಗುವ ಮೂಲಕ 2024-25ನೇ ಸಾಲಿನ ಮುಖ್ಯಮಂತ್ರಿ ಚಿನ್ನದ ಪದಕ ಪ್ರಶಸ್ತಿಗೆ ಭಾಜನರಾಗಿರುವ ಹೊಸನಗರ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್ ಖಾಕಿ ಕವಿ ಎಂದೇ ಖ್ಯಾತರಾದ ಮಂಜುನಾಥ್ ಅವರಿಗೆ ಇಲ್ಲಿನ ವೃತ್ತ ನಿರೀಕ್ಷಕ ಗುರಣ್ಣ ಎಸ್ ಹೆಬ್ಬಾಳ್, ಪಿಎಸ್ಐ ಶಂಕರಗೌಡ ಪಾಟೀಲ್ ಸೇರಿದಂತೆ ಸಿಬ್ಬಂದಿ ವರ್ಗ ಅಭಿನಂದಿಸಿದೆ.

ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.