Chikkamagaluru | ಇ-ಸ್ವತ್ತು ಮಾಡಿಕೊಡಲು ಲಂಚದ (Bribe) ಬೇಡಿಕೆ ಇಟ್ಟು ಫೋನ್ ಪೇ (Phone Pay) ಮೂಲಕ ಹಣ ಹಾಕಿಸಿಕೊಂಡು ಮತ್ತಷ್ಟು ಹಣ ಪೀಕಲು ಪ್ಲಾನ್ ಮಾಡಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ (Lokayuktha) ಬಲೆಗೆ ಬಿದ್ದಿದ್ದಾನೆ. ಚಿಕ್ಕಮಗಳೂರು (Chikkamagaluru) ನಗರಸಭೆ ವಾರ್ಡ್ 2ರ ಬಿಲ್ ಕಲೆಕ್ಟರ್ ಪ್ರದೀಪ್ ಸಿಕ್ಕಿಬಿದ್ದಿದ್ದಾನೆ.
Read More:Dengue | ಡೆಂಗ್ಯೂಗೆ ಆರೋಗ್ಯ ಇಲಾಖೆ ಸಿಬ್ಬಂದಿ ಬಲಿ !
ಸದಾಶಿವಮೂರ್ತಿ ಎಂಬುವವರ ಬೈಪಾಸ್ ರಸ್ತೆಯ ಜಾಗದ ಇ-ಸ್ವತ್ತು ಮಾಡಿಕೊಡಲು ಚಿಕ್ಕಮಗಳೂರು ನಗರಸಭೆ ವಾರ್ಡ್2 ಬಿಲ್ ಕಲೆಕ್ಟರ್ ಪ್ರದೀಪ್ ಲಂಚ ಪಡೆಯುವ ವೇಳೆ ಲೋಕಾಯುಕ್ತರಿಗೆ ಸಿಕ್ಕಿ ಬಿದ್ದಿದ್ದಾನೆ.
ಸದಾಶಿವಮೂರ್ತಿ ಮಗ ರಾಕೇಶ್ ನೀಡಿದ ದೂರಿನ ಮೇರೆಗೆ ಇಂದು ಕಾರ್ಯಾಚರಣೆ ನಡೆಸಿದ ಲೋಕಾ ಇನ್ಸ್ಪೆಕ್ಟರ್ ಅನಿಲ್ ರಾಥೋಡ್ ಹಾಗೂ ಮಲ್ಲಿಕಾರ್ಜುನ ನೇತೃತ್ವದ ತಂಡ ಪ್ರದೀಪ್ ನನ್ನು ನಗರಸಭೆ ಕಚೇರಿ ಎದುರು ಬಂಧಿಸಿದ್ದಾರೆ.

ಫೋನ್ ಪೇ ಮೂಲಕ ರಾಕೇಶ್ ಮೊಬೈಲ್ ನಿಂದ ಮೊದಲಿಗೆ 3 ಸಾವಿರ ರೂ. ಹಾಕಿಸಿಕೊಂಡಿದ್ದ ಪ್ರದೀಪ್ ನಂತರ ನಗದು 2 ಸಾವಿರ ರೂ. ಹಾಗೂ ಇದೀಗ ಮತ್ತೆ 2 ಸಾವಿರ ರೂ. ಗಳಿಗೆ ಬೇಡಿಕೆ ಇಟ್ಟಿದ್ದು ಅದನ್ನು ಪಡೆಯುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ.
ಕಾರ್ಯಾಚರಣೆ ತಂಡದಲ್ಲಿ ಲೋಕಾಯುಕ್ತ ಪೊಲೀಸರಾದ ಅನಿಲ್ ನಾಯಕ್ ಲೋಕೇಶ್, ವಿಜಯಭಾಸ್ಕರ್, ಶ್ರೀಧರ್ ಪ್ರಸಾದ್ ಚಂದನ್ ಭಾಗಿಯಾಗಿದ್ದರು.
Read More:Dengue | ಡೆಂಗ್ಯೂಗೆ ಆರೋಗ್ಯ ಇಲಾಖೆ ಸಿಬ್ಬಂದಿ ಬಲಿ !

ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.