Chikkamagaluru

ಎರಡು ಪ್ರತ್ಯೇಕ ಘಟನೆ, ನೀರಿನಲ್ಲಿ ಮುಳುಗಿ ಇಬ್ಬರು ಯುವಕರು ಸಾವು !

CHIKKAMAGALURU | ಚಿಕ್ಕಮಗಳೂರು ಜಿಲ್ಲೆಯ ಕಳಸ ಮತ್ತು ಮೂಡಿಗೆರೆ ತಾಲ್ಲೂಕಿನ ವಿವಿಧ ಭಾಗದಲ್ಲಿ ಇಬ್ಬರು ನೀರಿನಲ್ಲಿ ಮುಳುಗಿ ಸಾವಪ್ಪಿರುವ ಘಟನೆ ವರದಿಯಾಗಿದೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಕಳಸ ಪಟ್ಟಣ ಸಮೀಪದ ಅಂಬಾತೀರ್ಥದ ಭದ್ರಾ ನದಿಯಲ್ಲಿ ಮಧ್ಯಪ್ರದೇಶದ ಕೂಲಿ ಕಾರ್ಮಿಕರೊಬ್ಬರು ಮುಳುಗಿ ಮೃತಪಟ್ಟಿದ್ದಾನೆ. ಸುಂದರಿ ಎಸ್ಟೇಟಿನಲ್ಲಿ ಕೆಲಸ ಮಾಡುತ್ತಿದ್ದ ಸಾಗರ (18) ತಮ್ಮ ಸ್ನೇಹಿತನ ಜೊತೆ ನದಿಯಲ್ಲಿ ಸ್ನಾನ ಮಾಡಲು ಇಳಿದಾಗ ಈ ಅವಘಡ ಸಂಭವಿಸಿದೆ.

Read More :ಸ್ಮಶಾನದಲ್ಲಿ ಕಂಠಪೂರ್ತಿ ಎಣ್ಣೆ ಕುಡಿದ ಇಬ್ಬರು ಸ್ನೇಹಿತರು, ಓರ್ವನನ್ನು ಕೊಚ್ಚಿ ಕೊಂದಿದ್ಯಾಕೆ ?

ಆಳವಾದ ಪ್ರದೇಶದಲ್ಲಿ ಮುಳುಗಿದ್ದ ಅವರ ಮೃತದೇಹ ಪತ್ತೆ ಆಗಿರಲಿಲ್ಲ. ನಂತರ ಮುಳುಗು ತಜ್ಞ ಈಶ್ವರ್ ಮಲ್ಪೆ ಶವವನ್ನು ಪತ್ತೆ ಮಾಡಿದರು. ಶೌರ್ಯ ವಿಪತ್ತು ತಂಡದ ಸದಸ್ಯರು ಮೃತದೇಹವನ್ನು ನೀರಿನಿಂದ ಮೇಲೆತ್ತಲು ಸಹಕಾರ ನೀಡಿದರು.

ಕೃಷಿ ಹೊಂಡದಲ್ಲಿ ಮುಳುಗಿ ಯುವಕ ಸಾವು !

ಮೂಡಿಗೆರೆ ತಾಲೂಕಿನ ಆಲ್ದೂರು ಸಮೀಪದ ವಗರ್ ರಸ್ತೆ ದೋಣಗುಡಿಗೆ ಗ್ರಾಮದ ಬಾಬು ಅಕ್ಕಮ್ಮ ದಂಪತಿ ಪುತ್ರ ಪೂರ್ಣೇಶ್ (18) ಮನೆಯ ಸಮೀಪದ ಕೃಷಿಹೊಂಡದಲ್ಲಿ ಈಜಲು ಹೋಗಿ ಮೃತಪಟ್ಟಿದ್ದಾನೆ.

ಮೂಡಿಗೆರೆ ತಾಲ್ಲೂಕು ಹೆಸಗಲ್ ವಲಯ ಶೌರ್ಯ ವಿಪತ್ತು ನಿರ್ವಹಣಾ ತಂಡದ ಈಜು ತಜ್ಞರಾದ ಹಾಂದಿ ರಾಕೇಶ್, ಪ್ರಶಾಂತ್, ಅಭಿಲಾಶ್ ಯುವಕನ ಮೃತದೇಹವನ್ನು ಕೃಷಿ ಹೊಂಡದಿಂದ ಹೊರತೆಗೆಯಲು ಸಹಕರಿಸಿದರು. ಆಲ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

ಪೂರ್ಣೇಶ್ ಮಂಗಳೂರಿನ ಗೋಕರ್ಣನಾಥೇಶ್ವರ ಕಾಲೇಜಿನಲ್ಲಿ ಪಿಯುಸಿ ಶಿಕ್ಷಣ ಮುಗಿಸಿ ಮೂಡಿಗೆರೆಯಲ್ಲಿ ಕಂಪ್ಯೂಟರ್ ತರಬೇತಿ ಪಡೆಯುತ್ತಿದ್ದ. ಈ ಬಾರಿ ನರ್ಸಿಂಗ್ ಕೋರ್ಸ್‌ಗೆ ಸೇರಲು ಸಿದ್ಧತೆ ನಡೆಸಿದ್ದ ಎಂದು ತಂದೆ ಬಾಬು ತಿಳಿಸಿದ್ದಾರೆ.

ಪಿಎಸ್‌ಐ ಅಕ್ಷಿತಾ ಕೆ.ಪಿ, ಎಎಸ್‌ಐ ಪರಮೇಶ್ ಗೌಡ, ಸಿಬ್ಬಂದಿ ಚಂದ್ರಪ್ಪ, ವಸಂತ, ಆನಂದ್, ಚಾಲಕ ಮಹೇಶ್, ದೊಡ್ಡ ಮಾಗರವಳ್ಳಿ ಪಂಚಾಯತಿ ಸದಸ್ಯ ಕೆ.ಎಲ್ ರಾಜು, ಆಲ್ದೂರು ಶೌರ್ಯ ಘಟಕದ ಅಧ್ಯಕ್ಷ ಕೆ.ಎಲ್, ಕುಮಾರ್, ಮೇಲ್ವಿಚಾರಕಿ ಲಲಿತಾ, ಸುಂದರೇಶ್ ನಂದಕುಮಾರ್ ಘಟನಾ ಸ್ಥಳಕ್ಕೆ ಭೇಟಿ ನೀಡಿದರು.

Read More :PM Kisan Yojana | ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗಳಿಗೆ ಗುಡ್ ನ್ಯೂಸ್ !

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]