ಅನಧಿಕೃತ ಕ್ಲಿನಿಕ್‌ಗಳ ಮೇಲೆ ಅಧಿಕಾರಿಗಳ ದಾಳಿ

ಚಿಕ್ಕಮಗಳೂರು: ಸೂಕ್ತ ಪರವಾನಗಿ ಪಡೆಯದೆ ಅನಧಿಕೃತವಾಗಿ ನಡೆಸಲಾಗುತ್ತಿದ್ದ 4 ಕ್ಲಿನಿಕ್‌ಗಳ (Clinic) ಮೇಲೆ ಆರೋಗ್ಯ ಇಲಾಖೆ ಅಧಿಕಾರಿಗಳು (Health Department) ದಾಳಿ ನಡೆಸಿ ಅವುಗಳನ್ನು ಬಂದ್ ಮಾಡಿಸಿದ್ದಾರೆ.

ಉಪ್ಪಳ್ಳಿ ಉಪ್ಪಳ್ಳಿಯ ಮೆಡಿಕಲ್ ಮತ್ತು ಜನರಲ್ ಸ್ಟೋರ್‌ನಲ್ಲಿ ಅನಧಿಕೃತ ಕ್ಲಿನಿಕ್, ಮುಭಾರಕ್ ಕ್ಲಿನಿಕ್, ಮಲ್ಲಂದೂರು ರಸ್ತೆಯಲ್ಲಿರುವ ಎಸ್.ಎಂ ಕ್ಲಿನಿಕ್ ಮತ್ತು ಮಂಡಲ್ ಕ್ಲಿನಿಕ್‌ಗಳ ಮೇಲೆ ದಾಳಿ ನಡೆಸಿ ಪರಿಶೀಲಿಸಿ ಪ್ರಯೋಗಾಲಯವನ್ನು ಬಾಗಿಲು ಮುಚ್ಚಿಸಲಾಗಿದೆ.

ಜಿಲ್ಲಾ ಆರೋಗ್ಯ ಇಲಾಖೆ ಕುಟುಂಬ ಕಲ್ಯಾಣಾಧಿಕಾರಿ ಡಾ.ಶಶಿಕಲಾ ನೇತೃತ್ವದಲ್ಲಿ ಸಿಬ್ಬಂದಿಗಳು ಮಾಹಿತಿ ಮೇರೆಗೆ ನಗರದ ಮಲ್ಲಂದೂರು ರಸ್ತೆ ಮತ್ತು ಉಪ್ಪಳ್ಳಿ ಬಡಾವಣೆಯಲ್ಲಿ ಅನಧಿಕೃತವಾಗಿ ನಡೆಸಲಾಗುತ್ತಿದ್ದ ಕ್ಲಿನಿಕ್‌ಗಳ ಮೇಲೆ ದಾಳಿ ನಡೆಸಿದರು.

ಈ ವೇಳೆ ಮಾತನಾಡಿದ ಡಾ.ಶಶಿಕಲಾ ಕೆಪಿಎಂಇ ಆಕ್ಟ್ ಅಡಿಯಲ್ಲಿ ಪರವಾನಗಿ ಪಡೆಯದೆ ಮಲ್ಲಂದೂರು ರಸ್ತೆ ಮತ್ತು ಉಪ್ಪಳ್ಳಿಯಲ್ಲಿ ಕ್ಲಿನಿಕ್‌ಗಳನ್ನು ಆರಂಭಿಸಲಾಗಿದೆ. ಅವುಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ಮಾಡಿ ಕ್ಲಿನಿಕ್‌ಗಳನ್ನು ಮುಚ್ಚುವಂತೆ ಸೂಚನೆ ನೀಡಿದ್ದೇವೆ. ಸೂಕ್ತ ಪರವಾನಗಿ ಪಡೆಯದೆ ಮತ್ತೆ ಕ್ಲಿನಿಕ್‌ಗಳನ್ನು ಆರಂಭಿಸಿದಲ್ಲಿ ಪೊಲೀಸರನ್ನು ಕರೆ ತಂದು ಅವರಿಗೆ ಸೇರಿದ ಕ್ಲಿನಿಕ್ ಮತ್ತು ಮೆಡಿಕಲ್ ಸ್ಟೋರ್‌ಗಳ ವಿರುದ್ಧ ಕಾನೂನಿನ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದೇವೆ ಎಂದು ತಿಳಿಸಿದರು.

ಅನಧಿಕೃತವಾಗಿ ಕ್ಲಿನಿಕ್ ನಡೆಸುವುದು ಅಪರಾಧ. ಇದರ ಬಗ್ಗೆ ಜನರಿಗೆ ಮಾಹಿತಿ ಇದ್ದರೂ ಅನಧಿಕೃತವಾಗಿ ಕ್ಲಿನಿಕ್ ತೆರೆದು ನಂತರ ಕೆಪಿಎಂಇಗೆ ಪರವಾನಗಿಗೆ ಅರ್ಜಿ ಸಲ್ಲಿಸುವ ಕೆಲಸ ಆಗುತ್ತಿದೆ. ಸಾರ್ವಜನಿಕರಿಗೆ ನಾವು ಅನುಕೂಲ ಮಾಡುತ್ತಿದ್ದೇವೆ ಎಂದು ಅವರು ಭಾವಿಸಿರುತ್ತಾರೆ ಆದರೆ ಅದರಿಂದ ಜನತೆಗೆ ಹೆಚ್ಚು ನಷ್ಟವೇ ಆಗುತ್ತದೆ ಎಂದು ತಿಳಿಸಿದರು.

ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಸೀಮಾ ಮಾತನಾಡಿ, ಕೆಪಿಎಂಇ ಸರ್ಟಿಫಿಕೇಟ್‌ಗಳು ಇಲ್ಲದ ನಾಲ್ಕು ಕ್ಲಿನಿಕ್‌ಗಳನ್ನು ಮುಚ್ಚಲು ಸೂಚಿಸಿದ್ದೇವೆ. ನಾವು ಭೇಟಿ ನೀಡಿದ ಕ್ಲಿನಿಕ್‌ಗಳಲ್ಲಿ ಸ್ವಚ್ಛತೆಗೂ ಆಧ್ಯತೆ ಕೊಡದಿರುವುದು ಕಂಡು ಬಂದಿದೆ. ಮುಂದೆ ಅವರು ಪರವಾನಗಿ ಪಡೆದ ನಂತರ ಮತ್ತೆ ಭೇಟಿ ನೀಡಿ ಪರಿಶೀಲಿಸುತ್ತೇವೆ. ಅವರು ಸರಿಪಡಿಸಿಕೊಂಡಿಲ್ಲವಾದರೆ ಮತ್ತೆ ಕಾನೂನು ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಹೇಳಿದರು.

ಕ್ಲಿನಿಕ್‌ಗಳಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳಬೇಕು. ವೈದ್ಯಕೀಯ ತ್ಯಾಜ್ಯ ವನ್ನು ಬೇರ್‍ಪಡಿಸಿ ವಿಲೇವಾರಿ ಮಾಡಬೇಕು ಎನ್ನುವ ಇನ್ನಿತರೆ ಸೂಚನೆಗಳನ್ನು ನೀಡಲಾಗಿದೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಡಾ. ಬಾಲಕೃಷ್ಣ ಮತ್ತು ಸಿಬ್ಬಂದಿ ಇದ್ದರು.

Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

2 days ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

2 days ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

2 days ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

2 days ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

2 days ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

3 days ago