ಆರ್ಕೆಸ್ಟ್ರಾ ಕಾರ್ಯಕ್ರಮದಲ್ಲಿ ಯುವಕರ ನಡುವೆ ಗಲಾಟೆ, ಪೊಲೀಸ್ ಠಾಣೆ ಮುಂದೆ ಜನರ ಪ್ರತಿಭಟನೆ

0 336

ಕಡೂರು : ಆರ್ಕೆಸ್ಟ್ರಾ ಕಾರ್ಯಕ್ರಮದ ಸಮಯದಲ್ಲಿ ಕಲುಕ್ಷ ಕಾರಣಕ್ಕೆ ನಡೆದ ಗಲಾಟೆ ಹಿನ್ನೆಲೆಯಲ್ಲಿ ಎರಡು ಗ್ರಾಮಗಳ ಗ್ರಾಮಸ್ಥರು  ಪೊಲೀಸ್ ಠಾಣೆ ಮುಂದೆ ಜಮಾವಣೆಗೊಂಡು ಪ್ರತಿಭಟನೆ ನಡೆಸಿದ ಘಟನೆ ತಾಲ್ಲೂಕಿನ ಸಿಂಗಟಗೆರೆ ಬಳಿಯ ದೇವರಹಳ್ಳಿ ಗ್ರಾಮದಲ್ಲಿ ನಡೆದಿದೆ.

ಗ್ರಾಮ ದೇವತೆ ಕರಿಯಮ್ಮ ದೇವಿ ಜಾತ್ರೆ ಅಂಗವಾಗಿ ಹಮ್ಮಿಕೊಂಡಿದ್ದ ಆರ್ಕೆಸ್ಟ್ರಾ ಕಾರ್ಯಕ್ರಮದ ವೇಳೆ ದೇವರಹಳ್ಳೊ ಹಾಗೂ ಅರಸೀಕೆರೆ ತಾಲೂಕಿನ ಗಂಜಿಗೆರೆ ಗ್ರಾಮದ ಕೆಲ ಯುವಕರ ನಡುವೆ ಗಲಾಟೆ ನಡೆದು ಪರಸ್ಪರ ಹಲ್ಲೆ ಮಾಡಿಕೊಂಡಿದ್ದಾರೆ. ಗಲಾಟೆ ಹಾಗೂ ಹಲ್ಲೆ ಸಂಬಂಧ ಸಿಂಗಟಗೆರೆ ಪೊಲೀಸ್ ಠಾಣೆಯಲ್ಲಿ ದೇವರಹಳ್ಳಿ ಗ್ರಾಮಸ್ಥರು ದೂರು ದಾಖಲಿಸಿದ್ದರು. ಆದರೆ ಗಂಜಿಗೆರೆ ಗ್ರಾಮದ ಕೆಲ ವ್ಯಕ್ತಿಗಳು ದೂರು ವಾಪಸ್ ತೆಗೆದುಕೊಳ್ಳುವಂತೆ ಬೆದರಿಕೆ ಹಾಕಿದ್ದುರು ಎನ್ನಲಾಗಿದೆ.

ಈ ಹಿನ್ನೆಲೆಯಲ್ಲಿ ಎರಡೂ ಗ್ರಾಮಗಳ ಗ್ರಾಮಸ್ಥರು ಸಿಂಗಟಗೆರೆ ಪೊಲೀಸ್ ಠಾಣೆಯ ಬಳಿ ಪ್ರತಿಭಟನೆ ನಡಿಸಿ ಹೈಡ್ರಾಮಾ ಸೃಷ್ಟಿಸಿದ್ದಾರೆ.

Leave A Reply

Your email address will not be published.

error: Content is protected !!