ಚಿಕ್ಕಮಗಳೂರು: ಮೊಬೈಲ್ ಫೋನ್ಗಳನ್ನು (Mobile Phone’s) ಕಳೆದುಕೊಂಡಿದ್ದ ವಾರಸುದಾರರಿಗೆ ಸುಮಾರು 6 ಲಕ್ಷ ರೂ. ಬೆಲೆಯ 60 ಮೊಬೈಲ್ಗಳನ್ನು ಗುರುವಾರ ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ವಿತರಿಸಲಾಯಿತು.
ಪೋರ್ಟಲ್ ಬಳಸಿ ಪತ್ತೆ ಮಾಡಲಾದ ಈ ಮೊಬೈಲ್ ಫೋನ್ಗಳನ್ನು ಗುರುವಾರ ಪೊಲೀಸ್ ವರಿಷ್ಠಾಧಿಕಾರಿ (Chikkamagaluru SP) ಡಾ|| ವಿಕ್ರಮ್ ಅಮಟೆ ವಿತರಿಸಿದರು.
ಜಿಲ್ಲೆಯಲ್ಲಿ ಇಲ್ಲಿಯವರೆಗೆ 837 ಫೋನ್ಗಳು ಕಳವು ಪ್ರಕರಣದಲ್ಲಿ, ಈಗಾಗಲೇ 220 ಫೋನ್ಗಳ ಬಗ್ಗೆ ತನಿಖೆ ನಡೆಸಿ ಈವರೆಗೆ 190 ಮೊಬೈಲ್ಗಳನ್ನು ಸಂಬಂಧಪಟ್ಟವರಿಗೆ ವಿತರಿಸಲಾಗಿದೆ ಎಂದರು.
ಸಾರ್ವಜನಿಕರು ನಿಮ್ಮ ಮೊಬೈಲ್ಗಳನ್ನು ಕಳೆದುಕೊಂಡಲ್ಲಿ ಮೊಬೈಲ್ಫೋನ್ಗೆ ಸಂಬಂಧಿಸಿದ ದಾಖಲಾತಿಗಳು, ನಿಮ್ಮ ಗುರುತಿನ ಪುರಾವೆ ಹಾಗೂ ಪೊಲೀಸ್ ಠಾಣೆಗೆ ನೀಡಿದ ದೂರಿನ ಪ್ರತಿಯೊಂದಿಗೆ ಸಿಇಐಆರ್ ವೆಬ್ ಪೋರ್ಟಲ್ ನಲ್ಲಿ ವರದಿ ದಾಖಲಿಸಲು ಸೂಚಿಸಲಾಗಿದೆ.
ಜಿಲ್ಲಾ ಸಿಇಎನ್ ಅಪರಾಧ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಗವಿರಾಜ್, ಪಿಎಸ್ಐ ರಘುನಾಥ್ ಎಸ್.ವಿ, ವಿಶ್ವನಾಥ್ ಎನ್.ಸಿ ಹಾಗೂ ಸಿಬ್ಬಂದಿಗಳಾದ ಅನ್ವರ್ ಪಾ?, ಹರಿಪ್ರಸಾದ್ ತಂಡ ಮೊಬೈಲ್ಗಳನ್ನು ಪತ್ತೆ ಮಾಡಿದೆ ಎಂದು ತಿಳಿಸಿದ್ದಾರೆ.
2022ರ ಸೆಪ್ಟೆಂಬರ್ನಲ್ಲಿ ಕರ್ನಾಟಕ ರಾಜ್ಯದಲ್ಲಿ ಸಿಇಐಆರ್ ಪೋರ್ಟಲ್ಅನ್ನು ಪ್ರಾರಂಭ ಮಾಡಲಾಗಿದ್ದು ದಿನಾಂಕ 17/05/2022ರಂದು ರಾಜ್ಯ ವ್ಯಾಪಿಯಾಗಿ ಜಾರಿಗೆ ತರಲಾಗಿದ್ದು, ಪ್ರಾಯೋಗಿಕವಾಗಿ ತೆಲಂಗಾಣ ರಾಜ್ಯದಲ್ಲಿ ಸಿಇಐಆರ್ ಪೋರ್ಟಲ್ಅನ್ನು ಅಳವಡಿಸಲಾಗಿತ್ತು ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಎ.ಎಸ್ಪಿ ಕೃಷ್ಣಮೂರ್ತಿ ಉಪಸ್ಥಿತರಿದ್ದರು.
ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…
ರಿಪ್ಪನ್ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…
ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…
ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…
ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…
ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…