ಮೂಡಿಗೆರೆ : ಕಾಫಿನಾಡಿನಲ್ಲಿ ಕಾಡಾನೆಗಳ (Elephants) ಹಾವಳಿ ಹೆಚ್ಚಾಗಿದ್ದು ಇತ್ತೀಚೆಗೆ ಚಿಕ್ಕಮಗಳೂರು (Chikkamagaluru) ತಾಲೂಕಿನ ಹೆಡದಾಳು ಗ್ರಾಮದಲ್ಲಿ ಕಾಡಾನೆ ದಾಳಿಯಿಂದ ಕಾರ್ಮಿಕ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಮಾಸುವುದಕ್ಕೂ ಮುನ್ನ ಇಂದು ಸಂಜೆ ಕಾಡಾನೆ ದಾಳಿಗೆ ಆನೆ ನಿಗ್ರಹ ಪಡೆಯ ಸಿಬ್ಬಂದಿ ಬಲಿಯಾಗಿರುವ (Death) ಘಟನೆ ಮೂಡಿಗೆರೆ (Mudigere) ತಾಲೂಕಿನ ಭೈರಾಪುರ (Bairapura) ಗ್ರಾಮದಲ್ಲಿ ನಡೆದಿದೆ. ಮತ್ತಿಬ್ಬರು ಸಿಬ್ಬಂದಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ.
ಮೂಡಿಗೆರೆ ತಾಲೂಕಿನ ಗೌಡಳ್ಳಿ ನಿವಾಸಿಯಾಗಿರುವ ಕಾರ್ತಿಕ್ಗೌಡ (26) ಮೃತ ಆನೆ ಕಾರ್ಯಪಡೆ ಸಿಬ್ಬಂದಿಯಾಗಿದ್ದು, ಬುಧವಾರ ಸಂಜೆ ಭೈರಾಪುರ ಗ್ರಾಮಕ್ಕೆ ದಾಳಿ ಇಟ್ಟಿದ್ದ ಕಾಡಾನೆಗಳನ್ನು ಕಾಡಿಗೆ ಓಡಿಸುತ್ತಿದ್ದ ಸಂದರ್ಭದಲ್ಲಿ ಕಾಡಾನೆಯೊಂದು ಆನೆ ಕಾರ್ಯಪಡೆ ಸಿಬ್ಬಂದಿ ಮೇಲೆಯೇ ದಾಳಿ ಮಾಡಿದ್ದು, ದಾಳಿಯಲ್ಲಿ ಕಾರ್ತಿಕ್ಗೌಡ ಅವರನ್ನು ಕಾಡಾನೆ ತುಳಿದು ಸಾಯಿಸಿದ್ದು, ಘಟನೆಯಲ್ಲಿ ಮತ್ತಿಬ್ಬರು ಸಿಬ್ಬಂದಿ ಗಾಯಗೊಂಡಿದ್ದು, ಗಾಯಾಳುಗಳನ್ನು ಮೂಡಿಗೆರೆ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಕೆಲವು ದಿನಗಳ ಹಿಂದೆ ಚಿಕ್ಕಮಗಳೂರು ತಾಲೂಕಿನ ಹೆಡದಾಳು ಗ್ರಾಮದಲ್ಲಿ ಕೆಲಸಕ್ಕೆ ಹೊರಟಿದ್ದ ಕಾರ್ಮಿಕ ಮಹಿಳೆ ವೀಣಾ ಎಂಬವರ ಮೇಲೆ ದಾಳಿ ನಡೆಸಿದ ಒಂಟಿ ಸಲಗ ಆಕೆಯನ್ನು ತುಳಿದು ಸಾಯಿಸಿತ್ತು. ಈ ಘಟನೆಗೂ ಕೆಲವು ದಿನಗಳ ಹಿಂದೆ ಆಲ್ದೂರು ಸಮೀಪದ ಕಂಚಿಕಲ್ಲು ದುರ್ಗ ಎಂಬಲ್ಲಿ ಆಸ್ಪತ್ರೆಗೆ ಬರುತ್ತಿದ್ದ ಕಾರ್ಮಿಕ ಚಿನ್ನಿ ಎಂಬವರನ್ನು ಕಾಡಾನೆ ತುಳಿದು ಸಾಯಿಸಿತ್ತು. ಈ ಘಟನೆಗಳ ಜನ ಮಾಸುವ ಮುನ್ನವೇ ಬುಧವಾರ ಆನೆ ನಿಗ್ರಹ ದಳದ ಸಿಬ್ಬಂದಿಯೇ ಕಾಡಾನೆಗೆ ಬಲಿಯಾಗಿರುವ ಘಟನೆ ನಡೆದಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
ಆಲ್ದೂರು ಭಾಗದಲ್ಲಿ ಕಾರ್ಮಿಕ ಮಹಿಳೆಯನ್ನು ಸಾಯಿಸಿದ್ದ ಒಂಟಿ ಸಲಗವನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಸಿಬ್ಬಂದಿ, ಅಧಿಕಾರಿಗಳ ತಂಡ 9 ಸಾಕಾನೆಗಳೊಂದಿಗೆ ಕಾರ್ಯಾಚರಣೆ ನಡೆಸುತ್ತಿದ್ದು, ಮಹಿಳೆಯನ್ನು ಬಲಿ ಪಡೆದ ಒಂಟಿ ಸಲಗದ ಬಗ್ಗೆ ಇದುವರೆಗೂ ಅರಣ್ಯಾಧಿಕಾರಿಗಳಿಗೆ ಸುಳಿವು ಸಿಕ್ಕಿಲ್ಲ. ಈ ಆನೆಯ ಸೆರೆಗೆ ಕಾರ್ಯಾಚರಣೆ ನಡೆಯುತ್ತಿರುವ ಮಧ್ಯೆಯೇ ಸರ್ಕಾರ ರಚಿಸಿರುವ ಆನೆ ಕಾರ್ಯ ಪಡೆಯಲ್ಲಿ ಕೆಲಸ ಮಾಡುತ್ತಿದ್ದ ಸಿಬ್ಬಂದಿ ಕಾಡಾನೆ ದಾಳಿಗೆ ಬಲಿಯಾಗಿರುವುದು ಕಾಫಿನಾಡಿನಲ್ಲಿ ಕಾಡಾನೆಗಳ ಹಾವಳಿ ಮಿತಿ ಮೀರಿರುವುದಕ್ಕೆ ಸಾಕ್ಷಿಯಾಗಿದೆ ಎಂದು ಸಾರ್ವಜನಿಕರು ಆಕ್ರೋಶ ಹೊರಹಾಕುತ್ತಿದ್ದಾರೆ.
ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…
ರಿಪ್ಪನ್ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…
ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…
ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…
ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…
ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…