ಕುಡಿದ‌ ಮತ್ತಿನಲ್ಲಿ‌ ಕೊಡಲಿಯಿಂದ ಹೊಡೆದು ಪತ್ನಿಯನ್ನು‌ ಹತ್ಯೆ ಮಾಡಿದ ಪತಿರಾಯ !

0 1,346

ಮೂಡಿಗೆರೆ: ಕುಡಿದ‌ ಮತ್ತಿನಲ್ಲಿ‌ ಕೊಡಲಿಯಿಂದ ಹೊಡೆದು ಪತ್ನಿಯನ್ನು‌ ಪತಿಯೇ ಹತ್ಯೆ ಮಾಡಿರುವ ಘಟನೆ ಶುಕ್ರವಾರ ರಾತ್ರಿ ಮೂಡಿಗೆರೆ ತಾಲೂಕಿನ ಕಿರುಗುಂದ ಗ್ರಾಮದಲ್ಲಿ ನಡೆದಿದೆ.

ಕಿರುಗುಂದ ಗ್ರಾಮದ ಪರಿಶಿಷ್ಟರ ಬಡಾವಣೆ ನಿವಾಸಿ ಪದ್ಮಾಕ್ಷಿ (40) ಹತ್ಯೆಯಾದ ದುರ್ದೆವಿಯಾಗಿದ್ದು, ಪತಿ ಚಂದ್ರು ಪತ್ನಿಯನ್ನು ಹತ್ಯೆ ಮಾಡಿದ ಆರೋಪಿಯಾಗಿದ್ದಾನೆ.

ಕಳೆದ ರಾತ್ರಿ ಚಂದ್ರು ಮದ್ಯ ಕುಡಿದು ಮನೆಗೆ ಬಂದಿದ್ದು, ಕುಡಿತದ ವಿಚಾರಕ್ಕೆ ಪತಿ, ಪತ್ನಿ‌ ನಡುವೆ ಗಲಾಟೆ ನಡೆದಿದೆ. ಈ ವೇಳೆ ಇಬ್ಬರ ನಡುವಿನ ಜಗಳ ತಾರಕಕ್ಕೇರಿದ್ದು ಕುಪಿತನಾದ ಪತಿ ಮನೆಯಲ್ಲಿದ್ದ ಕೊಡಲಿಯಿಂದ ಪತ್ನಿ ಪದ್ಮಾಕ್ಷಿ ಮೇಲೆ ಹಲ್ಲೆ ಮಾಡಿ ಒದ್ದು ಮನೆಯಿಂದ ಹೊರ ಹಾಕಿದ್ದಾನೆ. ಬಳಿಕ ಚಂದ್ರು ಮನೆಯೊಳಗೇ ಮಲಗಿದ್ದಾನೆ‌. ಅತ್ತ ಗಂಭೀರ ಗಾಯಗೊಂಡಿದ್ದ ಪತ್ನಿ ರಕ್ತದ ಮಡುವಿನಲ್ಲಿ ಬಿದ್ದು ಮೃತಪಟ್ಟಿದ್ದಾಳೆ.

ಬೆಳಗಾಗುತ್ತಲೇ ಪತ್ನಿ ಮೃತಪಟ್ಟಿರುವುದು ಗೊತ್ತಾಗಿದೆ. ವಿಚಾರ ತಿಳಿದ ಕೂಡಲೇ ಅಕ್ಕಪಕ್ಕದ ಮನೆಯವರು ಗೋಣಿಬೀಡು ಪೊಲೀಸರಿಗೆ ಮಾಹಿತಿ ನೀಡಿದ್ದು ಘಟನಾ ಸ್ಥಳಕ್ಕೆ ಬಂದ ಪೊಲೀಸರು ಸ್ಥಳ ಪರಿಶೀಲನೆ ನಡೆಸಿ ಆರೋಪಿ ಚಂದ್ರು ನನ್ನು ವಶಕ್ಕೆ ಪಡೆದಿದ್ದಾರೆ.

ಮೃತ ಪದ್ಮಾಕ್ಷಿ ಗೆ ಇಬ್ಬರು ಮಕ್ಕಳಿದ್ದು ಘಟನೆ ವೇಳೆ ಮಕ್ಕಳು ಮನೆಯಲ್ಲಿರಲಿಲ್ಲ ಎಂದು ತಿಳಿದು ಬಂದಿದೆ.

Leave A Reply

Your email address will not be published.

error: Content is protected !!