ಮೂಡಿಗೆರೆ: ಕುಡಿದ ಮತ್ತಿನಲ್ಲಿ ಕೊಡಲಿಯಿಂದ ಹೊಡೆದು ಪತ್ನಿಯನ್ನು ಪತಿಯೇ ಹತ್ಯೆ ಮಾಡಿರುವ ಘಟನೆ ಶುಕ್ರವಾರ ರಾತ್ರಿ ಮೂಡಿಗೆರೆ ತಾಲೂಕಿನ ಕಿರುಗುಂದ ಗ್ರಾಮದಲ್ಲಿ ನಡೆದಿದೆ.
ಕಿರುಗುಂದ ಗ್ರಾಮದ ಪರಿಶಿಷ್ಟರ ಬಡಾವಣೆ ನಿವಾಸಿ ಪದ್ಮಾಕ್ಷಿ (40) ಹತ್ಯೆಯಾದ ದುರ್ದೆವಿಯಾಗಿದ್ದು, ಪತಿ ಚಂದ್ರು ಪತ್ನಿಯನ್ನು ಹತ್ಯೆ ಮಾಡಿದ ಆರೋಪಿಯಾಗಿದ್ದಾನೆ.
ಕಳೆದ ರಾತ್ರಿ ಚಂದ್ರು ಮದ್ಯ ಕುಡಿದು ಮನೆಗೆ ಬಂದಿದ್ದು, ಕುಡಿತದ ವಿಚಾರಕ್ಕೆ ಪತಿ, ಪತ್ನಿ ನಡುವೆ ಗಲಾಟೆ ನಡೆದಿದೆ. ಈ ವೇಳೆ ಇಬ್ಬರ ನಡುವಿನ ಜಗಳ ತಾರಕಕ್ಕೇರಿದ್ದು ಕುಪಿತನಾದ ಪತಿ ಮನೆಯಲ್ಲಿದ್ದ ಕೊಡಲಿಯಿಂದ ಪತ್ನಿ ಪದ್ಮಾಕ್ಷಿ ಮೇಲೆ ಹಲ್ಲೆ ಮಾಡಿ ಒದ್ದು ಮನೆಯಿಂದ ಹೊರ ಹಾಕಿದ್ದಾನೆ. ಬಳಿಕ ಚಂದ್ರು ಮನೆಯೊಳಗೇ ಮಲಗಿದ್ದಾನೆ. ಅತ್ತ ಗಂಭೀರ ಗಾಯಗೊಂಡಿದ್ದ ಪತ್ನಿ ರಕ್ತದ ಮಡುವಿನಲ್ಲಿ ಬಿದ್ದು ಮೃತಪಟ್ಟಿದ್ದಾಳೆ.
ಬೆಳಗಾಗುತ್ತಲೇ ಪತ್ನಿ ಮೃತಪಟ್ಟಿರುವುದು ಗೊತ್ತಾಗಿದೆ. ವಿಚಾರ ತಿಳಿದ ಕೂಡಲೇ ಅಕ್ಕಪಕ್ಕದ ಮನೆಯವರು ಗೋಣಿಬೀಡು ಪೊಲೀಸರಿಗೆ ಮಾಹಿತಿ ನೀಡಿದ್ದು ಘಟನಾ ಸ್ಥಳಕ್ಕೆ ಬಂದ ಪೊಲೀಸರು ಸ್ಥಳ ಪರಿಶೀಲನೆ ನಡೆಸಿ ಆರೋಪಿ ಚಂದ್ರು ನನ್ನು ವಶಕ್ಕೆ ಪಡೆದಿದ್ದಾರೆ.
ಮೃತ ಪದ್ಮಾಕ್ಷಿ ಗೆ ಇಬ್ಬರು ಮಕ್ಕಳಿದ್ದು ಘಟನೆ ವೇಳೆ ಮಕ್ಕಳು ಮನೆಯಲ್ಲಿರಲಿಲ್ಲ ಎಂದು ತಿಳಿದು ಬಂದಿದೆ.
ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…
ರಿಪ್ಪನ್ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…
ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…
ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…
ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…
ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…