ಕೆರೆಯಲ್ಲಿ ಈಜಲು ಹೋಗಿ ಯುವಕ ನೀರುಪಾಲು !

0 324

ಚಿಕ್ಕಮಗಳೂರು : ಕೆರೆಯಲ್ಲಿ ಈಜಲು ಹೋಗಿ ಯುವಕನೋರ್ವ ಸಾವನಪ್ಪಿರುವ ಘಟನೆ ತಾಲೂಕಿನ ನಲ್ಲೂರು ಕೆರೆಯಲ್ಲಿ ನಡೆದಿದೆ.

ಚಿಕ್ಕಮಗಳೂರು ನಗರದ ಕೋಟೆ ನಿವಾಸಿ ಹರ್ಷ (20) ಮೃತ ದುರ್ದೈವಿ. ಹರ್ಷ ತನ್ನ ಸ್ನೇಹಿತರ ಜೊತೆ ನಲ್ಲೂರು ಕೆರೆಯಲ್ಲಿ ಈಜಲು ತೆರಳಿದ್ದಾರೆ. ಈ ವೇಳೆ ಈಜು ಬಾರದೆ ನೀರಿನಲ್ಲಿ ಮುಳುಗಿ ಸಾವನಪ್ಪಿದ್ದಾನೆ. ನಂತರ ವಿಷಯ ತಿಳಿದು ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳ ಸಿಬ್ಬಂದಿ ಮೃತದೇಹವನ್ನ ಕೆರೆಯಿಂದ ಹೊರ ತೆಗೆದಿದ್ದಾರೆ.

ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave A Reply

Your email address will not be published.

error: Content is protected !!