ಗುಂಡಿನ ಚಕಮಕಿ ; ಶೃಂಗೇರಿ ಮಹಿಳೆ ಸೇರಿದಂತೆ ಇಬ್ಬರು ನಕ್ಸಲರ ಬಂಧನ

ಶೃಂಗೇರಿ : ಕೇರಳದ ವಯನಾಡು ಜಿಲ್ಲೆಯಲ್ಲಿ ನಕ್ಸಲ್‌ ಮತ್ತು ಪೊಲೀಸರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಶೃಂಗೇರಿ ಮಹಿಳೆಯೊಬ್ಬಳು ಸೇರಿದಂತೆ ಇಬ್ಬರನ್ನು ಬಂಧಿಸಲಾಗಿದೆ.

ತಾಲೂಕಿನ ಬೆಳಗೋಡು ಕುಡಿಗೆಯ ಶ್ರೀಮತಿ ಅಲಿಯಾಸ್‌ ಉನ್ನಿಮಾಯ ಬಂಧನಕ್ಕೊಳಗಾದವಳು.

ತಳಪುಝ ಠಾಣಾ ವ್ಯಾಪ್ತಿಯ ಮನೆಯೊಂದಕ್ಕೆ ಐವರು ನಕ್ಸಲರ ತಂಡ ಮಂಗಳವಾರ ರಾತ್ರಿ ಊಟಕ್ಕೆಂದು ತೆರಳಿದ್ದಾಗ ಪೊಲೀಸರು ದಾಳಿ ನಡೆಸಿದ್ದರು. ಶರಣಾಗುವಂತೆ ಸೂಚಿಸಿದಾಗ ಗುಂಡಿನ ಚಕಮಕಿ ನಡೆಯಿತು. ಈ ಹಂತದಲ್ಲಿ ಮೂವರು ನಕ್ಸಲರು ಪರಾರಿಯಾದರೆ, ನಕ್ಸಲ್‌ ಮುಖಂಡ ಕೇರಳ ಮೂಲದ ಚಂದ್ರು ಅಲಿಯಾಸ್‌ ತಿರುವೆಂದಿಗಮ್‌ ಹಾಗೂ ಶ್ರೀಮತಿಯನ್ನು ಪೊಲೀಸರು ವಶಕ್ಕೆ ಪಡೆದರು. ಇವರಿಬ್ಬರೂ ಕೇರಳ ಹಾಗೂ ಕರ್ನಾಟಕದ ಪೊಲೀಸರಿಗೆ ಬೇಕಾಗಿದ್ದರು. ಬಂಧಿತರಿಂದ ಪಿಸ್ತೂಲ್‌ ಮತ್ತು ನಾಡಬಂದೂಕು ವಶಕ್ಕೆ ಪಡೆಯಲಾಗಿದೆ.

ಶೃಂಗೇರಿ ತಾಲೂಕಿನ ಬೇಗಾರ್‌ ಗ್ರಾಪಂ ಕೆ.ಮಸಿಗೆ ಗ್ರಾಮದ ಬೆಳಗೋಡುಕೊಡಿಗೆಯ ಶ್ರೀಮತಿ 2007ರಲ್ಲಿ ಮನೆಯಿಂದ ನಾಪತ್ತೆಯಾಗಿ ನಕ್ಸಲ್‌ ಗುಂಪಿಗೆ ಸೇರಿದ್ದರು. 2009ರ ತನಿಕೋಡು ಚೆಕ್‌ಪೋಸ್ಟ್‌ ಬಳಿ ಅರಣ್ಯ ಇಲಾಖೆ ತಪಾಸಣಾ ಕೊಠಡಿ ಧ್ವಂಸ ಪ್ರಕರಣ ಹಾಗೂ ಲೋಕಸಭೆ ಚುನಾವಣೆ ಸಂದರ್ಭ ಮಾತೊಳ್ಳಿಯಲ್ಲಿ ಪೊಲೀಸರೊಂದಿಗೆ ನಡೆಸಿದ ಗುಂಡಿನ ಚಕಮಕಿಯಲ್ಲೂ ಭಾಗಿಯಾಗಿದ್ದೂ ಸಹಿತ ವಿವಿಧ ಪೊಲೀಸ್‌ ಠಾಣೆಯಲ್ಲಿ 15ಕ್ಕೂ ಹೆಚ್ಚು ಪ್ರಕರಣ ದಾಖಲಾಗಿದೆ.

ಮಾಹಿತಿದಾರ ಸೆರೆ

ಪರಾರಿಯಾಗಿರುವವರ ಬಂಧನಕ್ಕೆ ಕಾಸರಗೋಡು ಜಿಲ್ಲೆಯ 3 ಪೊಲೀಸ್‌ ಉಪವಿಭಾಗಗಳಿಂದ ತಲಾ 10ರಂತೆ30 ಪೊಲೀಸರು ಮತ್ತು ಜಿಲ್ಲಾ ಸಶಸ್ತ್ರ ಮೀಸಲು ಪೊಲೀಸ್‌ ಪಡೆಯ 20 ಪೊಲೀಸರ ಸಹಿತ 50 ಮಂದಿಯನ್ನು ಮಾನಂತವಾಡಿಗೆ ಕಳುಹಿಸಲಾಗಿದೆ. ಪೊಲೀಸರ ಬಗ್ಗೆ ನಕ್ಸಲರಿಗೆ ಮಾಹಿತಿ ನೀಡುವ ಅನೀಶ್‌ ಎಂಬಾತನನನ್ನು ಪೊಲೀಸರು ಬಂಧಿಸಿದ್ದಾರೆ.

Malnad Times

Recent Posts

Rain Alert | ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಬೆಂಗಳೂರು : ಮೇ 7ರಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ…

2 hours ago

ಪೋಷಕರೊಂದಿಗೆ ಪ್ರವಾಸಕ್ಕೆ ಬಂದಿದ್ದ ಬಾಲಕಿ ನದಿಯಲ್ಲಿ ಮುಳುಗಿ ಸಾವು !

ಪೋಷಕರೊಂದಿಗೆ ಪ್ರವಾಸಕ್ಕೆ ಬಂದಿದ್ದ ಬಾಲಕಿ ನದಿಯಲ್ಲಿ ಮುಳುಗಿ ಸಾವು ! ಕಳಸ : ಪೋಷಕರೊಂದಿಗೆ ಪ್ರವಾಸಕ್ಕೆ ಬಂದಿದ್ದ ಬಾಲಕಿಯೊಬ್ಬಳು ಸ್ನಾನ…

5 hours ago

ತನ್ನೊಂದಿಗೆ ಚರ್ಚೆಗೆ ಬರುವಂತೆ ಅಣ್ಣಾಮಲೈಗೆ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಓಪನ್ ಚಾಲೆಂಜ್ !

ಶಿವಮೊಗ್ಗ : ಗ್ಯಾರಂಟಿ ಯೋಜನೆಯ ಮೂಲಕ ಕೋಟ್ಯಂತರ ಬಡವರು ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ ಇದು ಕಾಂಗ್ರೆಸ್ಸಿನ ಐತಿಹಾಸಿಕ ಕೊಡುಗೆಯಾಗಿದೆ. ಈ…

13 hours ago

ಮತದಾನದಲ್ಲೂ ಶಿವಮೊಗ್ಗ ಎತ್ತರಕ್ಕೇರಲಿ ; ಸ್ನೇಹಲ್ ಸುಧಾಕರ್ ಲೋಖಂಡೆ

ಶಿವಮೊಗ್ಗ : ಲೋಕಸಭಾ ಚುನಾವಣೆಯಲ್ಲಿ ಜಿಲ್ಲೆಯಲ್ಲಿನ ಮತದಾನ ಪ್ರಮಾಣ ಏರ್ ಬಲೂನ್ ರೀತಿಯಲ್ಲಿ ಆಕಾಶದ ಎತ್ತರಕ್ಕೆ ಏರಲಿ ಎಂದು ಜಿಲ್ಲಾ…

14 hours ago

ಹೃದಯಾಘಾತ ; ಮಮತಾ ನಿಧನ

ಹೊಸನಗರ : ಪಟ್ಟಣದ ಮಾರಿಗುಡ್ಡ ನಿವಾಸಿ ಮಮತಾ ಚಂದ್ರಶೇಖರ್ (43) ಶನಿವಾರ ಬೆಳಿಗ್ಗೆ ತಮ್ಮ ಸ್ವಂತ ಮನೆಯಲ್ಲಿ ಹೃದಯಘಾತದಿಂದ ನಿಧನರಾದರು.…

14 hours ago

ಶ್ರೀಮನ್ಮಹಾರಥೋತ್ಸವ ಜಾತ್ರೋತ್ಸವ ಧಾರ್ಮಿಕ ಕಾರ್ಯಕ್ರಮ ಸಂಪನ್ನ

ರಿಪ್ಪನ್‌ಪೇಟೆ: ಪುರಾಣ ಪ್ರಸಿದ್ದ ರಿಪ್ಪನ್‌ಪೇಟೆಯ ಶ್ರೀಸಿದ್ದಿವಿನಾಯಕ ಸ್ವಾಮಿ ದೇವಸ್ಥಾನ ಮತ್ತು ಜಗನ್ಮಾತೆ ಶ್ರೀಅನ್ನಪೂರ್ಣೇಶ್ವರಿ ಅಮ್ಮನವರ ದೇವಸ್ಥಾನದ ಶ್ರೀಮನ್ಮಹಾರಥೋತ್ಸವ ಹಾಗೂ ಜಾತ್ರೋತ್ಸವವು…

15 hours ago