ಜ.7 ರಂದು ಶ್ರೀ ರಂಭಾಪುರಿ ಜಗದ್ಗುರುಗಳ ಜನ್ಮದಿನೋತ್ಸವ ಸಮಾರಂಭ

ಎನ್.ಆರ್.ಪುರ : ಬಾಳೆಹೊನ್ನೂರು ಶ್ರೀ ರಂಭಾಪುರಿ ಜಗದ್ಗುರು ಪ್ರಸನ್ನ ರೇಣುಕ ಡಾ. ವೀರಸೋಮೇಶ್ವರ ಶಿವಾಚಾರ್ಯ ಭಗವತ್ಪಾದರ 68ನೇ ಜನ್ಮದಿನೋತ್ಸವ ಜ.7 ರ ಭಾನುವಾರ ಬೆಳಿಗ್ಗೆ 11 ಗಂಟೆಗೆ ತೆಲಂಗಾಣ ರಾಜ್ಯದ ಕೊಲನುಪಾಕ (ಕೊಲ್ಲಿಪಾಕಿ) ಸ್ವಯಂಭು ಶ್ರೀ ಸೋಮೇಶ್ವರ ದೇವಸ್ಥಾನದ ಪರಿಸರದಲ್ಲಿ ಜರುಗುವುದು.

ಶ್ರೀ ರಂಭಾಪುರಿ ಜಗದ್ಗುರುಗಳ ಸಾನ್ನಿಧ್ಯದಲ್ಲಿ ಜರುಗುವ ಸಮಾರಂಭವನ್ನು ತೆಲಂಗಾಣ ರಾಜ್ಯದ ಮುಖ್ಯಮಂತ್ರಿ ಎ.ರೇವಂತ್ ರೆಡ್ಡಿ ಉದ್ಘಾಟಿಸುವರು. ಅಲೇರು ಕ್ಷೇತ್ರದ ಶಾಸಕ ಬರ‍್ಲಾ ಐಲಯ್ಯ ಇವರ ಅಧ್ಯಕ್ಷತೆಯಲ್ಲಿ ನಡೆಯುವ ಸಮಾರಂಭದಲ್ಲಿ ಕರ್ನಾಟಕ ಸರ್ಕಾರದ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಖಾತೆ ಸಚಿವ ಈಶ್ವರ ಖಂಡ್ರೆ ರಂಭಾಪುರಿ ಬೆಳಗು ಮಾಸಿಕ ಬಿಡುಗಡೆ ಮಾಡುವರು.

ಮುಖ್ಯ ಅತಿಥಿಗಳಾಗಿ ಕರ್ನಾಟಕ ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಖಾತೆ ಸಚಿವ ಡಾ|| ಶರಣ ಪ್ರಕಾಶ ಪಾಟೀಲ, ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್.ಬೋಸರಾಜು, ನಿವೃತ್ತ ಐಪಿಎಸ್ ಅಧಿಕಾರಿ ಜ್ಯೋತಿಪ್ರಕಾಶ ಮಿರ್ಜಿ ಹಾಗೂ ಕೊಲನಪಾಕ ಗ್ರಾಮ ಪಂಚಾಯತ ಅಧ್ಯಕ್ಷರು ಮತ್ತು ಸದಸ್ಯರು ಭಾಗವಹಿಸುವರು. ಉಪಸ್ಥಿತರಿರುವ ನಾಡಿನ ಮಠಾಧೀಶರು ನೇತೃತ್ವ ವಹಿಸುವರು.

ಐದು ದಿನಗಳ ದಾಸೋಹ ಹಾಗೂ ಸೇವಾರ್ಥಿಗಳಿಗೆ ಗುರುರಕ್ಷೆ ನೀಡುವ ಸೇವೆಯನ್ನು ಕಲಬುರಗಿಯ ಸಮಾಜ ಸೇವಕ ಗಿರಿಯಪ್ಪ ಮುತ್ಯಾ ನಿರ್ವಹಿಸುವರು. ದಿನಾಂಕ 3ರಿಂದ 6ರ ವರೆಗಿನ ಪೂಜಾ ಸೇವಾಕರ್ತರಾಗಿ ಬೆಂಗಳೂರಿನ ಚಂದ್ರಶೇಖರ ನಾಗರಾಳಮಠ, ಚಿಟಗುಪ್ಪದ ಮಲ್ಲಿಕಾರ್ಜುನ ಉಣ್ಣೆ, ಭಾಲ್ಕಿಯ ಚನ್ನಬಸವಣ್ಣ ಬಳಕೆ, ಬೆಂಗಳೂರಿನ ಬೀರೂರು ಶಿವಸ್ವಾಮಿ, ಹೈದರಾಬಾದಿನ ಎಮ್.ವೀರಮಲ್ಲೇಶ, ರಾಮ್ ರೆಡ್ಡಿ, ವಿಜಯಕುಮಾರ ಹೆರೂರು ಹಾಗೂ 7ರಂದು ಶಿವಾಚಾರ್ಯರ ಸಮೂಹ ಪಾಲ್ಗೊಳ್ಳುವರು.

ಜ. 5ರಂದು ವಿಜಯನಗರ ಜಿಲ್ಲೆ ಹರಪನಹಳ್ಳಿ ಸದ್ಭಕ್ತರಿಂದ ಶ್ರೀ ವೀರಭದ್ರಸ್ವಾಮಿ ಗುಗ್ಗುಳ ಮಹೋತ್ಸವ ಜರುಗುವುದು. ಜ. 3ರಿಂದ 7ರ ವರೆಗೆ ಶ್ರೀ ರಂಭಾಪುರಿ ಜಗದ್ಗುರುಗಳು ಇಷ್ಟಲಿಂಗ ಮಹಾಪೂಜಾ ನೆರವೇರಿಸುವರು.

ಈ ಎಲ್ಲ ಕಾರ್ಯಕ್ರಮಗಳ ಮೇಲ್ವಿಚಾರಣೆಯನ್ನು ಮೇಹಕರ ಹಿರೇಮಠದ ರಾಜೇಶ್ವರ ಶಿವಾಚಾರ್ಯ ಸ್ವಾಮಿಗಳು, ಸಿದ್ಧರಬೆಟ್ಟ ಕ್ಷೇತ್ರದ ವೀರಭದ್ರ ಶಿವಾಚಾರ್ಯ ಸ್ವಾಮಿಗಳು ಹಾಗೂ ಲಿಂಗಸುಗೂರು ಶ್ರೀ ಮಾಣಿಕ್ಯೇಶ್ವರಿ ಆಶ್ರಮದ ಮಾತಾ ನಂದಿಕೇಶ್ವರಿ ಅಮ್ಮನವರು ಹಾಗೂ ಶ್ರೀ ಜಗದ್ಗುರು ರಂಭಾಪುರಿ ಪೀಠದ ಆಡಳಿತಾಧಿಕಾರಿ ಎಸ್.ಬಿ.ಹಿರೇಮಠ ನಿರ್ವಹಿಸುವರು.

ಮಾರ್ಗಸೂಚಿ:
ಕೊಲ್ಲಿಪಾಕಿ (ಕೊಲನುಪಾಕ) ಸುಕ್ಷೇತ್ರಕ್ಕಾಗಿ ರಸ್ತೆ ಮಾರ್ಗವಾಗಿ ಬರುವವರು ಹೈದರಾಬಾದ, ಕಾಚಿಗುಡ್ಡ ಅಥವಾ ಸಿಕಂದರಾಬಾದಿಗೆ ಬಂದು ಅಲ್ಲಿಂದ ವಾರಂಗಲ್ ರಸ್ತೆ ಮೂಲಕ ಭುವನಗಿರಿ-ಅಲೇರು ತಲುಪಿ ಅಲ್ಲಿಂದ ಕೊಲನುಪಾಕ ಕ್ಷೇತ್ರದ ಶ್ರೀ ಸೋಮೇಶ್ವರ ದೇವಸ್ಥಾನಕ್ಕೆ ತಲುಪಬಹುದು.
ರೈಲು ಮೂಲಕ ಆಗಮಿಸುವವರು ಸಿಕಂದರಾಬಾದ ರೇಲ್ವೆ ಸ್ಟೇಷನ್ ಮೂಲಕ ಅಲೇರು ನಿಲ್ದಾಣಕ್ಕೆ ಬಂದರೆ ಅಲ್ಲಿಂದ 7 ಕಿ.ಮೀ.ಅಂತರದಲ್ಲಿರುವ ಕೊಲನುಪಾಕ ಕ್ಷೇತ್ರದ ಶ್ರೀ ಸೋಮೇಶ್ವರ ದೇವಸ್ಥಾನಕ್ಕೆ ಆಟೋಗಳ ಮೂಲಕ ಬರಬಹುದಾಗಿದೆ.
ಹುಬ್ಬಳ್ಳಿಯಿಂದ ಕಾಝಿಪೇಟ ಎಕ್ಸ್‌ಪ್ರೆಸ್‌ ಮೂಲಕ ಬೊಂಗಿರ ಸ್ಟೇಷನ್‌ಗೆ ಬಂದರೆ ಬಸ್ ಮೂಲಕ ಕೊಲನಪಾಕ ಕ್ಷೇತ್ರಕ್ಕೆ (35 ಕಿ.ಮೀ.) ಬರಬಹುದಾಗಿದೆ.

Malnad Times

Share
Published by
Malnad Times

Recent Posts

28 ಸ್ಥಾನ ಗೆಲ್ಲದಿದ್ದರೆ ಅಪ್ಪ, ಮಗ ರಾಜೀನಾಮೆ ಕೊಡ್ತಾರಾ…? ಬೇಳೂರು

ರಿಪ್ಪನ್‌ಪೇಟೆ: ಕಳೆದ ವಿಧಾನಸಭಾ ಚುನಾವಣೆಯ ವೇಳೆ ನಮ್ಮ ಪಕ್ಷದ ಕಾರ್ಯಕರ್ತರು ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಮನೆಗೆ ತಲುಪಿಸುವಾಗ ಬಿಜೆಪಿಯವರು ಗ್ಯಾರಂಟಿ…

4 hours ago

ಪ್ರಜ್ವಲ್ ರೇವಣ್ಣನಂತಹ ಅತ್ಯಾಚಾರಿ ಪರ ಮತಯಾಚಿಸಿದ ಮೋದಿ ಹೆಣ್ಣು ಮಕ್ಕಳ ಕ್ಷಮೆ ಕೇಳಬೇಕು ; ರಾಹುಲ್ ಗಾಂಧಿ

ಶಿವಮೊಗ್ಗ: ಪ್ರಜ್ವಲ್ ರೇವಣ್ಣನಂತಹ ಅತ್ಯಾಚಾರಿಯ ಪರ ಮತಯಾಚಿಸಿದ ಪ್ರಧಾನಿ ಮೋದಿ ಅವರು ಈ ದೇಶದ ಹೆಣ್ಣುಮಕ್ಕಳ ಕ್ಷಮೆ ಕೇಳಬೇಕು ಎಂದು…

7 hours ago

ಅಪಾರ ಭಕ್ತ ಸಮೂಹದೊಂದಿಗೆ ಅದ್ಧೂರಿಯಾಗಿ ಜರುಗಿದ ರಿಪ್ಪನ್‌ಪೇಟೆಯ ಶ್ರೀ ಸಿದ್ದಿವಿನಾಯಕ ಸ್ವಾಮಿಯ ಶ್ರೀಮನ್ಮಹಾರಥೋತ್ಸವ

ರಿಪ್ಪನ್‌ಪೇಟೆ: ಇತಿಹಾಸ ಪ್ರಸಿದ್ದ ಶ್ರೀಸಿದ್ದಿವಿನಾಯಕ ಸ್ವಾಮಿಯ ಪ್ರಥಮ ವರ್ಷದ ಶ್ರೀಮನ್ಮಹಾರಥೋತ್ಸವ ಸಂಭ್ರಮ ಸಡಗರದೊಂದಿಗೆ ವಿಜೃಂಭಣೆಯಿಂದ ಇಂದು ಜರುಗಿತು. ಮಧ್ಯಾಹ್ನ 12:30…

7 hours ago

ಇನ್ನೊಬ್ಬ ಈಶ್ವರಪ್ಪ ಇದ್ದಾರೆ ಎಚ್ಚರ…!

ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ನಗರದಲ್ಲಿ ಮತಯಾಚನೆ ನಡೆಸಿದರು. ನಗರದ ಶಾಹಿ ಗಾರ್ಮೆಂಟ್ಸ್, ಟೊಯೋಟಾ…

12 hours ago

ಕೆ.ಎಸ್. ಈಶ್ವರಪ್ಪ ಚುನಾವಣಾ ಕಚೇರಿ ಮುಂದೆ ವಾಮಾಚಾರ

ಶಿಕಾರಿಪುರ: ಪಕ್ಷೇತರ ಅಭ್ಯರ್ಥಿಯಾಗಿರುವ ಕೆ.ಎಸ್.ಈಶ್ವರಪ್ಪ ಅವರ ಶಿಕಾರಿಪುರದ ಚುನಾವಣಾ ಕಚೇರಿ ಮುಂದೆ ವಾಮಾಚಾರ ನಡೆದಿರುವುದು ಬೆಳಕಿಗೆ ಬಂದಿದ್ದು ಈ ಕುರಿತು ಈಶ್ವರಪ್ಪ…

14 hours ago

ಫಲಿತಾಂಶ ಹೊರಬರಲಿ ಗ್ಯಾರಂಟಿಯೋ, ಅಭಿವೃದ್ದಿಯೋ ತಿಳಿಯಲಿದೆ ; ಬಿ.ವೈ. ರಾಘವೇಂದ್ರ

ಹೊಸನಗರ : ಈ ಬಾರಿಯ ಚುನಾವಣೆ ಭಾಗ್ಯ ಗ್ಯಾರಂಟಿಗಳ ಮೂಲಕ ಜನರನ್ನು ಸೆಳೆಯುವ ಚುನಾವಣೆಯಲ್ಲ, ಹಾಡು ಡ್ಯಾನ್ಸ್ ಮೂಲಕ ಲೋಕಸಭೆಗೆ…

1 day ago