ನಿಷೇಧಾಜ್ಞೆ ನಡುವೆಯೂ ಮಹಿಷ ದಸರಾ ಆಚರಣೆ ಮುಂದಾದವರ ಬಂಧನ

0 124

ಚಿಕ್ಕಮಗಳೂರು : ನಿಷೇಧಾಜ್ಞೆ ನಡುವೆಯೂ ಮಹಿಷ ದಸರಾ ಆಚರಣೆ ಮಾಡಲು ಬಂದಿದ್ದ ದಲಿತ ಸಂಘಟನೆ ಕಾರ್ಯಕರ್ತರನ್ನ ಪೊಲೀಸರು ಬಂಧಿಸಿದ ಘಟನೆ ನಡೆದಿದೆ.

ನಗರದ ಹನುಮಂತಪ್ಪ ವೃತ್ತದಲ್ಲಿ ಅಂಗಡಿ ಚಂದ್ರು ನೇತೃತ್ವದಲ್ಲಿ ಪ್ರಗತಿಪರ ಸಂಘಟನೆ ಕಾರ್ಯಕರ್ತರು ಮಹಿಷಾಸುರನ ಭಾವಚಿತ್ರ ಪ್ರದರ್ಶನ ಮಾಡಿದ್ದಾರೆ ಈ ಸಂದರ್ಭದಲ್ಲಿ ಪೊಲೀಸರು ಕಾರ್ಯಕರ್ತರನ್ನು ತಡೆಯಲು ಮುಂದಾಗಿದ್ದಾರೆ, ಈ ವೇಳೆ ಕಾರ್ಯಕರ್ತರು ಪೊಲೀಸರ ವಿರುದ್ಧ ಕಿಡಿಕಾರಿದ್ದಾರೆ ಅಲ್ಲದೆ ಮಹಿಷಾಸುರನ ಆಚರಣೆಗೆ ಅವಕಾಶ ನೀಡದ ನಿಟ್ಟಿನಲ್ಲಿ ಆಕ್ರೋಶಗೊಂಡ ಕಾರ್ಯಕರ್ತರು ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಈ ವೇಳೆ ಪೊಲೀಸರು ಹಾಗೂ ದಲಿತ ಸಂಘಟನೆ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದಿದೆ. ಕಾರ್ಯಕರ್ತರು ಪ್ರತಿಭಟನೆಗೆ ಮುಂದಾಗಿದ್ದು ಪೊಲೀಸರು ಅವರನ್ನು ಬಂಧಿಸಿದ್ದಾರೆ.

Leave A Reply

Your email address will not be published.

error: Content is protected !!