ಬದುಕಿಗೆ ಯಾವುದು ಆಧಾರವೋ ಅದುವೇ ನಿಜವಾದ ಸಂಪತ್ತು ; ರಂಭಾಪುರಿ ಶ್ರೀಗಳು

ಎನ್.ಆರ್.ಪುರ: ಸಂಪತ್ತೊಂದೇ ಸುಖದ ಮೂಲವೆಂದು ತಿಳಿದವರು ಹಲವಾರು ಜನ. ಆದರೆ ಬಾಳ ಬದುಕಿಗೆ ಯಾವುದು ಆಧಾರವೋ ಅದುವೇ ನಿಜವಾದ ಸಂಪತ್ತು ಎಂದು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳು ಅಭಿಪ್ರಾಯಪಟ್ಟರು.

ಅವರು ಮಂಗಳವಾರ ಶ್ರೀ ರಂಭಾಪುರಿ ಪೀಠದಲ್ಲಿ ಜರುಗಿದ ಹುಣ್ಣಿಮೆ ಧರ್ಮ ಸಮಾರಂಭದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡುತ್ತಿದ್ದರು.
ಮನುಷ್ಯನಿಗೆ ನೀರು ಅನ್ನ ಒಳ್ಳೆಯ ಮಾತು ಇವು ಅಮೂಲ್ಯ ಸಂಪತ್ತು. ಇವುಗಳನ್ನು ಸಂಪಾದಿಸಿಕೊಂಡು ಬಾಳಿದರೆ ಬದುಕಿನಲ್ಲಿ ತೃಪ್ತಿ ಕಾಣಲು ಸಾಧ್ಯ. ಮನುಷ್ಯನಲ್ಲಿ ಬೆಟ್ಟದಷ್ಟು ಹಣವಿದ್ದರೂ ಅದು ಹಸಿವೆಯನ್ನು ಹಿಂಗಿಸದು. ಕೋಟಿ ಹಣವಿದ್ದರೂ ಒಂದು ತುತ್ತಿಗೂ ಸರಿಯಾಗದು. ಮನುಷ್ಯ ತಿಳಿದುಕೊಂಡಿರುವ ಸಂಪತ್ತಿಗೆ ಜೀವವನ್ನು ಬದುಕಿಸುವ ಶಕ್ತಿಯಿಲ್ಲ. ಆ ಭಗವಂತನಿತ್ತ ಸಂಪತ್ತು ಬಾಳಿನ ನಿಜವಾದ ಸಂಪತ್ತು ಎಂದು ಅರಿಯಬೇಕು. ಇನ್ನೊಬ್ಬರಿಗೆ ಉಪಕಾರಿಯಾಗಿ ಬಾಳುವುದರಲ್ಲಿ ಜೀವನದ ಹಿರಿಮೆಯಿದೆ. ಬಯಕೆ ಅನಂತ ಆದರೆ ಬಯಕೆ ಕೈಗೂಡಲಿ ಬಿಡಲಿ ಯತಾರ್ಥ ಧರ್ಮದ ಸೂತ್ರಗಳನ್ನು ಪರಿಪಾಲಿಸಿ ಸುಖಿಗಳಾಗಬೇಕೆಂದು ಶ್ರೀ ಜಗದ್ಗುರು ರೇಣುಕಾಚಾರ್ಯರು ಸ್ಪಷ್ಟವಾಗಿ ನಿರೂಪಿಸಿದ್ದಾರೆ. ಮನುಷ್ಯನಲ್ಲಿ ಅರಿವು ಆದರ್ಶ ಸಂಸ್ಕಾರ ಪಡೆದು ಸುಖಿಗಳಾಗಬೇಕೆಂದರು.

ಸಮಾರಂಭದಲ್ಲಿ ಶ್ರೀನಿವಾಸ ಸರಡಗಿ, ತೊನಸನಹಳ್ಳಿ, ಸಂಗೊಳ್ಳಿ, ದೋರನಾಳು, ಎಸಳೂರು ಮತ್ತು ಹಲಕರಟಿ ಶ್ರೀಗಳು ಪಾಲ್ಗೊಂಡು ನುಡಿ ನಮನ ಸಲ್ಲಿಸಿದರು.
ಬೆಂಗಳೂರಿನ ಮೂರು ಜನ ಜಂಗಮ ವಟುಗಳಿಗೆ ಶಿವದೀಕ್ಷೆ ಅಯ್ಯಾಚಾರವಿತ್ತು ಶ್ರೀ ರಂಭಾಪುರಿ ಜಗದ್ಗುರುಗಳು ಶುಭ ಹಾರೈಸಿದರು.

ಶ್ರೀ ಜಗದ್ಗುರು ರೇಣುಕಾಚಾರ್ಯ ಗುರುಕುಲ ಸಾಧಕರಿಂದ ವೇದಘೋಷ, ಗಂಗಾಧರಸ್ವಾಮಿ ಇವರಿಂದ ಭಕ್ತಿಗೀತೆ ಜರುಗಿತು. ಶಿಕ್ಷಕ ವೀರೇಶ ಕುಲಕರ್ಣಿ ನಿರೂಪಿಸಿದರು.

Malnad Times

Share
Published by
Malnad Times

Recent Posts

ಏ.30 ರಂದು ಶಿವಮೊಗ್ಗಕ್ಕೆ ಬರಲಿದ್ದಾರೆ ನಡ್ಡಾ ; ಬಿವೈಆರ್

ಶಿವಮೊಗ್ಗ : ಏ.30ರಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಶಿವಮೊಗ್ಗ ಆಗಮಿಸಲಿದ್ದು ರಾಷ್ಟ್ರೀಯತೆಯ ಬಗ್ಗೆ ಕಾರ್ಯಕರ್ತರಲ್ಲಿ ಹುಮ್ಮಸ್ಸು…

8 hours ago

10 ಜನ ಈಶ್ವರಪ್ಪನಂತವರು ಸ್ಪರ್ಧಿಸಿದರು ಬಿ.ವೈ.ರಾಘವೇಂದ್ರ ಗೆಲುವು ತಡೆಯಲು ಸಾಧ್ಯವಿಲ್ಲ

ರಿಪ್ಪನ್‌ಪೇಟೆ: ಮೇ 7 ರಂದು ನಡೆಯುವ ಶಿವಮೊಗ್ಗ ಲೋಕಸಭಾ ಚುನಾವಣೆಯಲ್ಲಿ 10 ಜನ ಈಶ್ವರಪ್ಪನಂತವರು ಸ್ಪರ್ಧಿಸಿದರೂ ಬಿಜೆಪಿ ಜೆಡಿಎಸ್ ಬೆಂಬಲಿತ…

14 hours ago

ಮೋದಿ ಹೆಸರಿನಲ್ಲಿ ರಶೀದಿ ಪಡೆದು ಅಭಿಮಾನಿಯಿಂದ ಸಹಸ್ರನಾಮ ಅರ್ಚನೆ

ಮೋದಿ ಹೆಸರಿನಲ್ಲಿ ರಶೀದಿ ಪಡೆದು ಅಭಿಮಾನಿಯಿಂದ ಸಹಸ್ರನಾಮ ಅರ್ಚನೆ..... ಶೃಂಗೇರಿ : ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಕಾಫಿನಾಡು ವಿಶೇಷತೆಗಳಿಗೆ…

22 hours ago

Arecanut Today Price | ಏಪ್ರಿಲ್ 26ರ ಅಡಿಕೆ ರೇಟ್

ಹೊಸನಗರ : ಏ. 26 ಶುಕ್ರವಾರ ನಡೆದ ಹೊಸನಗರ ಮಾರುಕಟ್ಟೆಯ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.

1 day ago

ಮೇ 02 ರಂದು ಶಿವಮೊಗ್ಗಕ್ಕೆ ರಾಹುಲ್ ಗಾಂಧಿ ಆಗಮನ

ಶಿವಮೊಗ್ಗ : ಮೇ 2ರಂದು ಕಾಂಗ್ರೆಸ್ ನಾಯಕ ರಾಹುಲ್‍ಗಾಂಧಿ ನಗರದ ಫ್ರೀಡಂ ಪಾರ್ಕ್‌ನಲ್ಲಿ ಗೀತಾಶಿವರಾಜ್‍ಕುಮಾರ್ ಬಹಿರಂಗ ಪ್ರಚಾರ ಮಾಡಲಿದ್ದಾರೆ ಎಂದು…

1 day ago

ಲಕ್ಷಾಂತರ ಮತಗಳ ಅಂತರದಲ್ಲಿ ಗೆಲುವು ನನ್ನದೇ, 2ನೇ ಸ್ಥಾನಕ್ಕಾಗಿ ಬಿಜೆಪಿ, ಕಾಂಗ್ರೆಸ್ ಪೈಪೋಟಿ ಅಂದ್ರು ಈಶ್ವರಪ್ಪ

ರಿಪ್ಪನ್‌ಪೇಟೆ: ನನ್ನ ಪರವಾಗಿ ಹೋದ ಕಡೆಯಲೆಲ್ಲ ಬಿಜೆಪಿ ಮತ್ತು ಜೆಡಿಎಸ್ ಕಾಂಗ್ರೆಸ್ ಪಕ್ಷದ ಸಾಕಷ್ಟು ಕಾರ್ಯಕರ್ತರು ಹೆಚ್ಚು ಬೆಂಬಲ ವ್ಯಕ್ತಪಡಿಸುತ್ತಿದ್ದು…

1 day ago