ತರೀಕೆರೆ : ಅಜ್ಜನ ನಿರ್ಲಕ್ಷ್ಯದಿಂದಾಗಿ ಬಸ್ನಲ್ಲಿ (Bus) ಪ್ರಯಾಣಿಸುತ್ತಿದ್ದ 3 ವರ್ಷದ ಮಗು ತಪ್ಪಿಸಿಕೊಂಡು ಹೋದ ಘಟನೆ ಬುಧವಾರ ತರೀಕೆರೆ (Tharikere) ತಾಲೂಕಿನಲ್ಲಿ ನಡೆದಿದೆ. ಪೊಲೀಸರು ಹಾಗೂ ಸಾರ್ವಜನಿಕರ ಸಮಯ ಪ್ರಜ್ಞೆಯಿಂದ ಮಗು ಹೆತ್ತವರು ಮಡಿಲು ಸೇರಿದೆ.
ಬುಧವಾರ ಬೆಳಗ್ಗೆ 3 ವರ್ಷದ ಶ್ರೇಯಸ್ ತನ್ನ ಅಜ್ಜನೊಂದಿಗೆ ತರೀಕೆರೆ ಬಸ್ ನಿಲ್ದಾಣದಲ್ಲಿ ತಾಲೂಕಿನ ತಣಿಗೆಬೈಲು ಗ್ರಾಮಕ್ಕೆ ತೆರಳಲು ಬಸ್ ಹತ್ತಿದೆ. ಈ ವೇಳೆ ಅಜ್ಜ ನಿದ್ರೆಗೆ ಜಾರಿದ್ದು, ಬಸ್ನಿಂದ ಇಳಿದ ಮಗು ಬೇರೊಂದು ಬಸ್ ಅನ್ನು ಹತ್ತಿದೆ. ಬಸ್ನಲ್ಲಿ ಅಜ್ಜನನ್ನು ಕಾಣದೇ ಮಗು ಅಳಲಾರಂಭಿಸಿದ್ದು, ಈ ವೇಳೆ ಅದೇ ಬಸ್ನಲ್ಲಿದ್ದ ಇಮ್ರಾನ್ ಮತ್ತಿತರರು ಮಗುವನ್ನು ನಗರದ ಪೊಲೀಸ್ ಠಾಣೆಗೆ ಕರೆದೊಯ್ದಿದ್ದಾರೆ.
ಪೊಲೀಸರು ಹಾಗೂ ಸಾರ್ವಜನಿಕರು ಮಗುವಿನ ಫೋಟೊವನ್ನು ಸಾಮಾಜಿಕ ಜಾಲತಾಣಗಳಲ್ಲಿ ಬಿಡುಗಡೆ ಮಾಡಿ ಪೋಷಕರ ಪತ್ತೆಗೆ ಮನವಿ ಮಾಡಿದ್ದಾರೆ. ವಿಷಯ ತಿಳಿದು ಹೆತ್ತವರು ಠಾಣೆಗೆ ಆಗಮಿಸಿ ಮಗುವನ್ನು ಕರೆದೊಯ್ದರು.
ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…
ರಿಪ್ಪನ್ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…
ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…
ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…
ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…
ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…