ಬಿಂಡಿಗ ದೇವಿರಮ್ಮ ದರ್ಶನಕ್ಕೆ ಹರಿದು ಬಂದ ಭಕ್ತ ಸಾಗರ

ಚಿಕ್ಕಮಗಳೂರು : ವರ್ಷಕ್ಕೊಮ್ಮೆ ಮಾತ್ರ ಭಕ್ತರಿಗೆ ದರ್ಶನ ನೀಡುವ ಬೆಟ್ಟದ ದೇವಿರಮ್ಮ ದೇವಸ್ಥಾನ ದೀಪಾವಳಿ ಸಂದರ್ಭದಲ್ಲಿ ತೆರೆಯಲಾಗಿದ್ದು, ಸಾವಿರಾರು ಮಂದಿ ಭಕ್ತರು ದೇವಿಯನ್ನು ಕಂಡು ಸಂತೃಪ್ತರಾದರು.

ಚಿಕ್ಕಮಗಳೂರು ತಾಲೂಕಿನ ಮಲ್ಲೇನಹಳ್ಳಿ ಗ್ರಾಮದ ಬೆಟ್ಟದಲ್ಲಿರುವ ಬಿಂಡಿಗ ದೇವಿರಮ್ಮ ದೇವಸ್ಥಾನದಲ್ಲಿ ದೀಪಾವಳಿ ಅಂಗವಾಗಿ ದೇವರಿಗೆ ಮೂರು ದಿನಗಳ ಕಾಲ ವಿಶೇಷ ಪೂಜೆ ಇರುತ್ತದೆ.

ಸುಮಾರು ಮೂರು ಸಾವಿರ ಅಡಿ ಎತ್ತರದಲ್ಲಿ ನೆಲೆಸಿರುವ ದೇವಿಯನ್ನು ಕಾಣಲು ರಾಜ್ಯದ ಮೂಲೆ ಮೂಲೆಯಿಂದ ಭಕ್ತರು ಆಗಮಿಸುತ್ತಾರೆ. ಬರಿಗಾಲಿನಲ್ಲೇ ಬೆಟ್ಟ ಹತ್ತುವ ಭಕ್ತರು ದೇವರ ದರ್ಶನ ಮಾಡಿದರು. ಸುಮಾರು 50 ಸಾವಿರಕ್ಕೂ ಅಧಿಕ ಭಕ್ತರು ದೇವರ ದರ್ಶನ ಪಡೆದರು.

ದೇವೀರಮ್ಮ ಬೆಟ್ಟದ ಇತಿಹಾಸ

ಪುರಾಣದ ಪ್ರಕಾರ, ಮಹಿಷಾಸುರನನ್ನು ಅಂತ್ಯ ಮಾಡಿದ ಬಳಿಕವೂ ತಾಯಿ ಚಾಮುಂಡಿಯ ಕೋಪ ತಣ್ಣಗಾಗಿರುವುದಿಲ್ಲ. ಆಕರಯ ಕೋಪಕ್ಕೆ ಭಕ್ತರು ಬಲಿಯಾಗದಿರಲಿ ಎಂಬ ಕಾರಣಕ್ಕೆ ದೇವಿ ಶಾಂತಳಾಗಲು ಚಂದ್ರದ್ರೋಣ ಪರ್ವತದ ತಪ್ಪಲಿಗೆ ಬರುತ್ತಾಳೆ. ಅಲ್ಲಿ ರುದ್ರಮುನಿ ಸೀತಯ್ಯ, ಮುಳ್ಳಯ್ಯ, ದತ್ತಾತ್ರೇಯ, ಗಾಳಲ್ಲಿ ಅಜ್ಜಯ್ಯ ಎಂಬ ಮುನಿಗಳು ಅದಾಗಲೇ ಅಲ್ಲಿ ನೆಲೆಸಿದ್ದರೆಂದೂ ಹೇಳಲಾಗುತ್ತದೆ. ಆಗ ಆ ಐದು ಜನ ತಪಸ್ವಿಗಳು ತಾವಿರುವ ಸ್ಥಳದಿಂದ ಸ್ವಲ್ಪ ದೂರವಿರುವ ಈ ಬೆಟ್ಟದಲ್ಲಿ ನೆಲೆಸುವಂತೆ ಹೇಳುತ್ತಾರೆ. ಅಂದಿನಿಂದ ತಾಯಿ ಶಾಂತ ಸ್ವರೂಪಳಾಗಿ ಈ ಬೆಟ್ಟದಲ್ಲಿ ನೆಲೆಯೂರಿದ್ದಾಳೆ ಎಂಬ ಇತಿಹಾಸ ಇದೆ.

ಬೆಟ್ಟದ ಮೇಲೆ ನರಕಚತುದರ್ಶಿಯಂದು ಮಾತ್ರ ತಾಯಿ ದರುಶನ ನೀಡುತ್ತಾಳೆ. ದೀಪಾವಳಿಯ ಎರಡನೇ ದಿನ ಅಮವಾಸ್ಯೆಯಂದು ದೇವಿ ಬೆಟ್ಟದ ಕೆಳಗಿರುವ ಬಿಂಡಿಗ ದೇವಸ್ಥಾನದಲ್ಲಿ ಭಕ್ತರಿಗೆ ದರುಶನ ಭಾಗ್ಯ ನೀಡುತ್ತಾಳೆ. ಈ ವೇಳೆ ಭಕ್ತರು ತಮ್ಮ ಇಷ್ಟಾರ್ಥ ಸಿದ್ಧಿಗಾಗಿ ಅಮ್ಮನವರನ್ನು ಪ್ರಾರ್ಥಿಸಿ ಹರಕೆ ಕೊಟ್ಟುವವರು, ತೀರಿಸುವವರ ಜನಜಂಗುಳಿಯೇ ಇರುತ್ತದೆ.

ಅಮ್ಮನವರ ಮತ್ತೊಂದು ಪವಾಡ

ಈ ದೇವಾಲಯದ ಮತ್ತೊಂದು ಪವಾಡ ಎಂದರೆ, ಬಿಂಡಿಗ ದೇವಾಲಯದ ಬಾಗಿಲು ತನ್ನಷ್ಟಕ್ಕೆ ತಾನೇ ತೆರೆದುಕೊಳ್ಳುವುದು. ಈ ಪವಾಡ ನೋಡಲು ಸಾವಿರಾರು ಭಕ್ತರು ಇಲ್ಲಿಗೆ ಆಗಮಿಸುತ್ತಾರೆ.

Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

19 hours ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

23 hours ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

23 hours ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

1 day ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

1 day ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

1 day ago