ಮೂಡಿಗೆರೆ : ತಾಲ್ಲೂಕಿನ ಹಳೇ ಮೂಡಿಗೆರೆ ಸಮೀಪದ ಕಿತ್ತಲೆಗಂಡಿ ವೃತ್ತದಲ್ಲಿ ಬಿಡಾಡಿ ಹಸುಗಳು ಅಡ್ಡಾಡುತ್ತಿದ್ದು ಕೂಡಲೇ ಅವುಗಳನ್ನು ಗೋಶಾಲೆ ಅಥವಾ ಮಾಲೀಕರು ಕರೆದೊಯ್ಯುವ ಕೆಲಸವಾಗಬೇಕು ಎಂದು ದಲಿತಪರ ಸಂಘಟನೆಯ ಮುಖಂಡ ಸುಂದ್ರೇಶ್ ಠಾಣಾಧಿಕಾರಿಗೆ ಮನವಿ ಸಲ್ಲಿಸಿದ್ದಾರೆ.
ಈ ಕುರಿತು ಮೂಡಿಗೆರೆ ಪೊಲೀಸ್ ಠಾಣಾಧಿಕಾರಿಗೆ ಮಂಗಳವಾರ ಮನವಿ ಸಲ್ಲಿಸಿ ಮಾತನಾಡಿದ ಅವರು, ಕಿತ್ತಲೆಗಂಡಿ ವೃತ್ತದಲ್ಲಿ ಸುಮಾರು 30 ರಿಂದ 40 ಬಿಡಾಡಿ ಹಸುಗಳು ರಸ್ತೆಯಲ್ಲಿ ಅಡ್ಡಾಡುತ್ತಿರುವ ಪರಿಣಾಮ ಸಾರ್ವಜನಿಕರ ಸಂಚಾರಕ್ಕೆ ತೀವ್ರ ತೊಂದರೆಯಾಗಿರುವುದಲ್ಲದೇ ಈಚೆಗೆ ಓರ್ವ ಯುವಕ ಅಪಘಾತದಲ್ಲಿ ಸಾವಪ್ಪಿದ್ದಾನೆ ಎಂದು ತಿಳಿಸಿದ್ದಾರೆ.
ರಸ್ತೆಯುದ್ಧಕ್ಕೂ ಹಸುಗಳು ಸಂಚರಿಸುತ್ತಿರುವುದು ಅನೇಕ ಅಪಘಾತಗಳು ಜರುಗಿವೆ. ಜೊತೆಗೆ ಹಸುಗಳ ಕಳ್ಳತನ ಮಾಡುವುದು ಹೆಚ್ಚಾಗುವ ಹಿನ್ನೆಲೆಯಲ್ಲಿ ಇನ್ನಿತರೆ ಅಹಿತಕರ ಘಟನೆ ಸಂಭವಿಸುವ ಮೊದಲೇ ಮುಂಜಾಗ್ರತಾ ಕ್ರಮ ವಹಿಸಬೇಕು ಎಂದು ಒತ್ತಾಯಿಸಿದ್ದಾರೆ.
ಹಸುವಿನ ಮಾಲೀಕರು ಜವಾಬ್ದಾರಿಯುತ ನಡೆದುಕೊಳ್ಳುವ ಸಂಬಂಧ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳ ಕಚೇರಿಯಲ್ಲಿ ನಡೆದ ಎಸ್ಸಿ, ಎಸ್ಟಿ ಕುಂದುಕೊರತೆ ಸಭೆಯಲ್ಲಿ ವಿಷಯ ಪ್ರಸ್ತಾಪಿಸಿ ಜಿಲ್ಲಾಧಿಕಾರಿಗಳಿಗೂ ಮನವಿ ಮಾಡಲಾಗಿದ್ದರೂ ಕೂಡಾ ಗ್ರಾ.ಪಂ. ಯಾವುದೇ ಕ್ರಮವಹಿಸಿರುವುದಿಲ್ಲ ಎಂದು ದೂರಿದ್ದಾರೆ.
ಹೀಗಾಗಿ ಹಸುಗಳ ಮಾಲೀಕರಿಗೆ ಸರಿಯಾಗಿ ಮಾರ್ಗದರ್ಶನ ನೀಡಬೇಕು ಅಥವಾ ಗೋಶಾಲೆಗೆ ರವಾನಿಸಲು ಸೂಚಿಸಬೇಕು ಎಂದು ಆಗ್ರಹಿಸಿದ್ದಾರೆ. ಈ ಸಂದರ್ಭದಲ್ಲಿ ಗ್ರಾಮಸ್ಥರಾದ ಅನಿಲ್, ರಾಕೇಶ್, ದೀಕ್ಷಿತ್ ಮತ್ತಿತರರು ಹಾಜರಿದ್ದರು.
ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…
ರಿಪ್ಪನ್ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…
ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…
ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…
ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…
ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…