ಮಾಜಿ ಶಾಸಕ ನಾಗನಗೌಡ ಕಂದಕೂರು ಅಗಲಿಕೆಗೆ ರಂಭಾಪುರಿ ಶ್ರೀಗಳ ಸಂತಾಪ

ಎನ್.ಆರ್.ಪುರ (ಬಾಳೆಹೊನ್ನೂರು) : ರೈತರ ಧ್ವನಿಯಾಗಿ ಕೆರೆ ತುಂಬಿಸುವ ಯೋಜನೆಗೆ ಸದಾ ಬೆನ್ನೆಲುಬಾಗಿ ನಿಂತಿದ್ದ ಗುರುಮಠಕಲ್ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ನಾಗನಗೌಡ ಕಂದಕೂರು (73) ಇವರ ಅಗಲಿಕೆಗೆ ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳು ತಮ್ಮ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ನಾಗನಗೌಡ ಕಂದಕೂರು ಅವರು ಜನ ಸೇವೆಯೇ ಜನಾರ್ಧನ ಸೇವೆ ಎನ್ನುವ ತತ್ವದಡಿ ನಂಬಿಕೆ ಇಟ್ಟುಕೊಂಡು ರಾಜಕೀಯ ಕ್ಷೇತ್ರದಲ್ಲಿ ಹೆಸರು ಮಾಡಿದ ಹಿರಿಯ ರಾಜಕಾರಣಿಯಾಗಿದ್ದರು. ಗಿರಿನಾಡಿನಲ್ಲಿ ಗ್ರಾಮಗಳ ಸಮಗ್ರ ಅಭಿವೃದ್ಧಿಗೆ ಶ್ರಮಿಸಿದ ಮುತ್ಸದ್ದಿ ನಾಯಕರಾಗಿದ್ದ ಅವರು ಭಾವನಾ ಜೀವಿಗಳಾಗಿದ್ದರು. ಧರ್ಮ ಸಂಸ್ಕೃತಿಯ ಬಗ್ಗೆ ಅಪಾರ ನಂಬಿಕೆ ಹೊಂದಿದವರಾಗಿದ್ದ ಅವರು ಕಲ್ಯಾಣ ಕರ್ನಾಟಕ ಭಾಗದಲ್ಲಿ ಶೈಕ್ಷಣಿಕ ಕ್ರಾಂತಿ ಮಾಡಿದವರಾಗಿದ್ದರು. ಸರ್ವ ಜನರ ಹಿತ ಚಿಂತಕರಾಗಿದ್ದ ಅವರ ಅಗಲಿಕೆಗೆ ಶ್ರೀ ರಂಭಾಪುರಿ ಜಗದ್ಗುರುಗಳು ತಮ್ಮ ಸಂತಾಪ ವ್ಯಕ್ತಪಡಿಸಿದ್ದಾರೆ.

ಮೃತರ ಆತ್ಮಕ್ಕೆ ಶ್ರೀ ಜಗದ್ಗುರು ರೇಣುಕಾಚಾರ್ಯರು ಹಾಗೂ ಕ್ಷೇತ್ರನಾಥ ಶ್ರೀ ವೀರಭದ್ರಸ್ವಾಮಿ ಚಿರಶಾಂತಿ ಅನುಗ್ರಹಿಸಲಿ ಹಾಗೂ ಅವರ ಅಗಲಿಕೆಯ ದುಃಖವನ್ನು ಸಹಿಸಿಕೊಳ್ಳುವ ಶಕ್ತಿಯನ್ನು ಅವರ ಕುಟುಂಬ ವರ್ಗದವರಿಗೆ ನೀಡಲಿ ಎಂದು ತಮ್ಮ ಸಂತಾಪ ಸಂದೇಶದಲ್ಲಿ ತಿಳಿಸಿದ್ದಾರೆ.

Malnad Times

Share
Published by
Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

4 days ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

4 days ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

4 days ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

4 days ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

4 days ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

5 days ago