ಮುಂದುವರೆದ ಹುಲಿ ಉಗುರು ಕಾರ್ಯಾಚರಣೆ ; ಇಬ್ಬರು ಅರ್ಚಕರ ಬಂಧನ
ಚಿಕ್ಕಮಗಳೂರು : ಕಾಫಿನಾಡಲ್ಲಿ ಹುಲಿ ಉಗುರು ಕಾರ್ಯಾಚರಣೆ ಮುಂದುವರಿದಿದ್ದು, ಹುಲಿ ಉಗುರಿನ ಡಾಲರ್ ಹಾಕಿಕೊಂಡಿದ್ದ ಇಬ್ಬರು ಅರ್ಚಕರನ್ನು ಬಾಳೆಹೊನ್ನೂರು ಅರಣ್ಯ ವಲಯದ ಅಧಿಕಾರಿಗಳು ಬಂಧಿಸಿದ್ದಾರೆ.
ತಾಲೂಕಿನ ಖಾಂಡ್ಯ ಮಾರ್ಕಾಂಡೇಶ್ವರ ದೇವಸ್ಥಾನದ ಕೃಷ್ಣಾನಂದ ಹೊಳ್ಳ ಮತ್ತು ನಾಗೇಂದ್ರ ಜೋಯಿಸ ಬಂಧಿತ ಅರ್ಚಕರು.
ಬಂಧಿತ ಅರ್ಚಕರಿಂದ ಮೂರು ಹುಲಿ ಉಗುರುಗಳನ್ನು ವಶಕ್ಕೆ ಪಡೆಯಲಾಗಿದ್ದು, ಬಾಳೆಹೊನ್ನೂರು ಅರಣ್ಯ ಇಲಾಖೆಯ ಸಿಬ್ಬಂದಿಗಳು ಇಬ್ಬರನ್ನು ವಿಚಾರಣೆ ನಡೆಸುತ್ತಿದ್ದಾರೆ.
ಇಬ್ಬರು ಅರ್ಚಕರ ವಿರುದ್ಧ ಬಾಳೆಹೊನ್ನೂರು ಅರಣ್ಯ ಇಲಾಖೆಯಲ್ಲಿ ಪ್ರಕರಣ ದಾಖಲಾಗಿದೆ.