ಚಿಕ್ಕಮಗಳೂರು: ನಗರದ ಆದ್ರಿಕಾ ಹೋಟೆಲ್ನಲ್ಲಿ ಉಡುಪಿ – ಚಿಕ್ಕಮಗಳೂರು ಕಾಂಗ್ರೆಸ್ ಲೋಕಸಭಾ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ಪತ್ರಿಕಾಗೋಷ್ಠಿ ನಡೆಸುತ್ತಿದ್ದ ವೇಳೆ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ದಿಢೀರ್ ಪ್ರತಿಭಟನೆ ನಡೆಸಿ ಸಚಿವ ಶಿವರಾಜ್ ತಂಗಡಿ ವಿರುದ್ದ ಘೋಷಣೆ ಕೋಗಿದ್ದಾರೆ.
ಕನ್ನಡ ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿರವರು ಮೋದಿ ಹೆಸರು ಹೇಳಿದವರಿಗೆ ಕಪಾಳಕ್ಕೆ ಹೊಡೆಯಿರಿ ಎಂಬ ಹೇಳಿಕೆ ಖಂಡಿಸಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಹೋಟೆಲ್ ಹೊರಗೆ ಪ್ರತಿಭಟಿಸಿದರು. ಜಯಪ್ರಕಾಶ್ ಹೆಗ್ಡೆ, ಸಚಿವ ಕೆ.ಜೆ ಜಾರ್ಜ್ ಹೋಟೆಲ್ ಹೊರಗೆ ಆಗಮಿಸುತ್ತಿದ್ದಂತೆ ಮೋದಿ ಮೋದಿ ಎಂದು ಘೋಷಣೆ ಕೂಗಿದರು. ಮೋದಿ ಪೋಸ್ಟರ್ ಹಿಡಿದು ಕಾಂಗ್ರೆಸ್ ವಿರುದ್ಧ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.
‘ಕಾಂಗ್ರೆಸ್ ಸಚಿವರಿಗೆ ಬಿಸಿ ಮುಟ್ಟಿಸಲು ಬಂದ ಹಿಂದೂ ಕಾರ್ಯಕರ್ತರು ನಾವು, ಏಕೆ ಬಂಧನ ಮಾಡುತ್ತಿದ್ದೀರಿ?’ ಎಂದು ಪ್ರಶ್ನಿಸಿದರು.
ಲೋಕಸಭಾ ಚುನಾವಣೆ ನೀತಿ ಸಂಹಿತಿ ಜಾರಿಯಲ್ಲಿ ಇದ್ದರೂ ಪ್ರತಿಭಟನೆ ನಡೆಸಿದ ಕಾರಣಕ್ಕೆ 20 ಕ್ಕೂ ಹೆಚ್ಚು ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದರು. ಈ ವೇಳೆ ಪೊಲೀಸರು ಹಾಗೂ ಕಾರ್ಯಕರ್ತರ ನಡುವೆ ಜಟಾಪಟಿ ಸಹಾ ನಡೆಯಿತು. ಗಲಾಟೆ ಮಾಡಲು ಬಂದಿಲ್ಲ ಪ್ರತಿಭಟಿಸುತ್ತಿದ್ದೇವೆ ಅಷ್ಟೇ ಎಂದು ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.
ಈ ಹಿನ್ನೆಲೆ ಕೆ.ಜೆ ಜಾರ್ಜ್, ಜಯಪ್ರಕಾಶ್ ಹೆಗ್ಡೆ, ಸೇರಿದಂತೆ ಜಿಲ್ಲೆಯ ಐವರು ಶಾಸಕರು ಹೋಟೆಲ್ ಹೊರಗೆ ಕೆಲಕಾಲ ಬರಲಿಲ್ಲ.
ಶಿವಮೊಗ್ಗ : ಏ.30ರಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಶಿವಮೊಗ್ಗ ಆಗಮಿಸಲಿದ್ದು ರಾಷ್ಟ್ರೀಯತೆಯ ಬಗ್ಗೆ ಕಾರ್ಯಕರ್ತರಲ್ಲಿ ಹುಮ್ಮಸ್ಸು…
ರಿಪ್ಪನ್ಪೇಟೆ: ಮೇ 7 ರಂದು ನಡೆಯುವ ಶಿವಮೊಗ್ಗ ಲೋಕಸಭಾ ಚುನಾವಣೆಯಲ್ಲಿ 10 ಜನ ಈಶ್ವರಪ್ಪನಂತವರು ಸ್ಪರ್ಧಿಸಿದರೂ ಬಿಜೆಪಿ ಜೆಡಿಎಸ್ ಬೆಂಬಲಿತ…
ಮೋದಿ ಹೆಸರಿನಲ್ಲಿ ರಶೀದಿ ಪಡೆದು ಅಭಿಮಾನಿಯಿಂದ ಸಹಸ್ರನಾಮ ಅರ್ಚನೆ..... ಶೃಂಗೇರಿ : ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಕಾಫಿನಾಡು ವಿಶೇಷತೆಗಳಿಗೆ…
ಹೊಸನಗರ : ಏ. 26 ಶುಕ್ರವಾರ ನಡೆದ ಹೊಸನಗರ ಮಾರುಕಟ್ಟೆಯ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.
ಶಿವಮೊಗ್ಗ : ಮೇ 2ರಂದು ಕಾಂಗ್ರೆಸ್ ನಾಯಕ ರಾಹುಲ್ಗಾಂಧಿ ನಗರದ ಫ್ರೀಡಂ ಪಾರ್ಕ್ನಲ್ಲಿ ಗೀತಾಶಿವರಾಜ್ಕುಮಾರ್ ಬಹಿರಂಗ ಪ್ರಚಾರ ಮಾಡಲಿದ್ದಾರೆ ಎಂದು…
ರಿಪ್ಪನ್ಪೇಟೆ: ನನ್ನ ಪರವಾಗಿ ಹೋದ ಕಡೆಯಲೆಲ್ಲ ಬಿಜೆಪಿ ಮತ್ತು ಜೆಡಿಎಸ್ ಕಾಂಗ್ರೆಸ್ ಪಕ್ಷದ ಸಾಕಷ್ಟು ಕಾರ್ಯಕರ್ತರು ಹೆಚ್ಚು ಬೆಂಬಲ ವ್ಯಕ್ತಪಡಿಸುತ್ತಿದ್ದು…