ಯುವಕನನ್ನು ಮರಕ್ಕೆ ಕಟ್ಟಿ ಹಾಕಿ ಮನಬಂದಂತೆ ಹಲ್ಲೆ ಮಾಡಿ ತಲೆಮರೆಸಿಕೊಂಡಿದ್ದ ಐವರು ಆರೋಪಿಗಳು ಅಂದರ್

ಕೊಪ್ಪ : ಕೆಲಸದ ಬಾಕಿ ಹಣ ಕೇಳಿದ್ದ ಯುವಕನನ್ನು ಮರಕ್ಕೆ ಕಟ್ಟಿ ಹಾಕಿ ಥಳಿಸಿದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಐವರು ಆರೋಪಿಗಳನ್ನು ಬಂಧಿಸುವಲ್ಲಿ ಕೊಪ್ಪ ಪೊಲೀಸರು ಯಶಸ್ವಿಯಾಗಿದ್ದಾರೆ.

ಮಹೇಶ್, ವಿಠಲ್, ಸಿರಿಲ್, ಸುನಿಲ್, ಮಂಜು ಬಂಧಿತ ಆರೋಪಿಗಳು. ಕಳೆದ ಫೆ.2ರಂದು ಸತೀಶ್ ಎಂಬಾತನನ್ನು ಕೊಪ್ಪ ಪಟ್ಟಣ ಸಮೀಪದಲ್ಲಿರುವ ಅಕೇಶಿಯಾ ಪ್ಲಾಂಟೇಷನ್ ಒಂದಕ್ಕೆ ಕರೆತಂದಿದ್ದ ಆರೋಪಿಗಳು ಆತನನ್ನು ಮರಕ್ಕೆ ಕಟ್ಟಿಹಾಕಿ ಥಳಿಸಿದ್ದಲ್ಲದೇ ಜೀವಬೆದರಿಕೆಯನ್ನೂ ಹಾಕಿದ್ದರು ಎಂದು ಹೇಳಲಾಗಿದೆ.

ಸತೀಶ್ ಬೆಂಗಳೂರಿನಲ್ಲಿ ಆರೋಪಿ ಮಂಜು ಎಂಬಾತನ ಸಹೋದರ ಹೊಟೇಲ್‍ನಲ್ಲಿ ಕೆಲಸಕ್ಕಿದ್ದ. ನಂತರ ಮನಸ್ತಾಪದಿಂದ ಕೆಲಸ ಬಿಟ್ಟು ಬಂದಿದ್ದ. ನಂತರ ಹೊಟೇಲ್ ಮಾಲೀಕನಿಗೆ ಕರೆ ಮಾಡಿ ಬಾಕಿ ಸಂಬಳ ಕೊಡುವಂತೆ ಪದೇ ಪದೇ ಒತ್ತಡ ಹಾಕುತ್ತಿದ್ದ ಎನ್ನಲಾಗಿದ್ದು, ಈ ವಿಚಾರವನ್ನು ಹೊಟೇಲ್ ಮಾಲೀಕ ತನ್ನ ಸಹೋದರನ ಬಳಿ ಹೇಳಿಕೊಂಡಿದ್ದ ಎನ್ನಲಾಗಿದೆ.

ಫೆ.2ರಂದು ಹೊಟೇಲ್ ಮಾಲೀಕನ ಸಹೋದರ ಮಂಜು, ಬಾಕಿ ವೇತನ ನೀಡುವುದಾಗಿ ಹೇಳಿ ಸತೀಶ್‍ನನ್ನು ಕೊಪ್ಪ ಪಟ್ಟಣಕ್ಕೆ ಕರೆಸಿಕೊಂಡಿದ್ದ. ಅಲ್ಲಿ ಸತೀಶ್‍ಗೆ ಮದ್ಯಪಾನ ಮಾಡಿಸಿ ಬೈಕ್‍ನಲ್ಲಿ ಪಟ್ಟಣದ ಹೊರವಲಯದಲ್ಲಿದ್ದ ಪ್ಲಾಂಟೇಷನ್ ಒಂದಕ್ಕೆ ಕರೆತಂದು ಹಗ್ಗದಿಂದ ಕಟ್ಟುಹಾಕಿ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದರು. ಘಟನೆಯನ್ನು ಪೊಲೀಸರಿಗೆ ತಿಳಿಸಿದರೆ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದರೆಂದು ಸತೀಶ್ ಪೊಲೀಸರಿಗೆ ನೀಡಿದ್ದ ದೂರಿನಲ್ಲಿ ತಿಳಿಸಿದ್ದಾನೆ.

ಪ್ರಕರಣ ದಾಖಲಾಗುತ್ತಿದ್ದಂತೆ ಪರಾರಿಯಾಗಿದ್ದ ಆರೋಪಿಗಳ ಬಂಧನಕ್ಕೆ ಎಸ್ಪಿ ಡಾ.ವಿಕ್ರಮ್ ಅಮಟೆ ಪೊಲೀಸರ ತಂಡ ನೇಮಿಸಿದ್ದರು.

Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

16 hours ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

20 hours ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

20 hours ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

22 hours ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

23 hours ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

1 day ago