ಎನ್.ಆರ್.ಪುರ: ಶ್ರೀ ಜಗದ್ಗುರು ರಂಭಾಪುರಿ ವೀರಸಿಂಹಾಸನ ಮಹಾ ಸಂಸ್ಥಾನ ಪೀಠದಲ್ಲಿ ಮಾರ್ಚ್ 20ರಿಂದ ನಡೆದುಕೊಂಡು ಬಂದ ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವ ಹಾಗೂ ಕ್ಷೇತ್ರನಾಥ ಶ್ರೀ ವೀರಭದ್ರಸ್ವಾಮಿ ಮಹಾರಥೋತ್ಸವದ ಅಂಗವಾಗಿ ಜರುಗಿದ ಎಲ್ಲಾ ಕಾರ್ಯಕ್ರಮಗಳು ಭದ್ರಾ ನದಿ ತೀರದಲ್ಲಿ ಸುರಗಿ ಸಮಾರಾಧನಾ ಪೂಜೆಯೊಂದಿಗೆ ಜಯಂತಿ ಜಾತ್ರಾ ಮಹೋತ್ಸವ ಸಂಪನ್ನಗೊಂಡವು.
ಇದೇ ಸಂದರ್ಭದಲ್ಲಿ ಇಷ್ಟಲಿಂಗ ಮಹಾಪೂಜಾ ನೆರವೇರಿಸಿದ ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳು ಆಶೀರ್ವಚನ ನೀಡಿ ಮನುಷ್ಯನ ಬುದ್ಧಿ ಶಕ್ತಿ ಬೆಳೆದಂತೆ ಭಾವನೆಗಳು ಬೆಳೆದುಕೊಂಡು ಬರಬೇಕಾಗಿದೆ. ಮಾನವೀಯ ಸಂಬಂಧಗಳು ಗಟ್ಟಿಗೊಳ್ಳಬೇಕಾಗಿದೆ. ಶಿಕ್ಷಣದಿಂದ ಬುದ್ಧಿ ಶಕ್ತಿ ಬೆಳೆದರೆ ಧರ್ಮಾಚರಣೆಯಿಂದ ಭಾವನೆಗಳು ಬೆಳೆಯಲು ಸಾಧ್ಯ. ಬದುಕಿ ಬಾಳುವ ಮನುಷ್ಯನಿಗೆ ಬುದ್ಧಿ ಭಾವನೆಗಳೆರಡೂ ಬೇಕು. ಜ್ಞಾನ ಕ್ರಿಯಾತ್ಮಕ ಬದುಕಿನೊಂದಿಗೆ ಸಾಮಾಜಿಕ ಮೌಲ್ಯಗಳನ್ನು ಎತ್ತಿ ಹಿಡಿದ ಶ್ರೀ ಜಗದ್ಗುರು ರೇಣುಕಾಚಾರ್ಯರ ಲೋಕೋದ್ಧಾರ ಚಿಂತನೆಗಳನ್ನು ಅರಿತು ಬಾಳಿದರೆ ಜೀವನ ಸಾರ್ಥಕಗೊಳ್ಳುವುದು. ಒಂದು ವಾರ ಸಂದರ್ಭದಲ್ಲಿ ಅನ್ನ ದಾಸೋಹ ಪೂಜಾ ಕಾರ್ಯಗಳು ಮತ್ತು ಹೆಚ್ಚಿನ ಭಕ್ತರು ಪಾಲ್ಗೊಂಡು ಸಹಕರಿಸಿದ್ದು ತಮಗೆ ಅತೀವ ಸಂತೋಷವನ್ನು ಉಂಟು ಮಾಡಿದೆ ಎಂದರು.
ಈ ಅಪೂರ್ವ ಸುರಗಿ ಪೂಜಾರಾಧನಾ ಸಂದರ್ಭದಲ್ಲಿ ಎಡೆಯೂರು, ಮುಕ್ತಿಮಂದಿರ, ಸುಳ್ಳ, ಮಳಲಿಮಠ, ಕವಲೇದುರ್ಗ, ಮೈಸೂರು, ಸಂಗೊಳ್ಳಿ, ಸಿದ್ಧರಬೆಟ್ಟ, ಹಾರನಹಳ್ಳಿ ಶ್ರೀಗಳು ಮೊದಲ್ಗೊಂಡು ಸುಮಾರು 20ಕ್ಕೂ ಮಿಕ್ಕಿ ಮಠಾಧೀಶರು ಪಾಲ್ಗೊಂಡರು.
ಆಗಮಿಸಿದ ಸಹಸ್ರಾರು ಭಕ್ತರು ಭದ್ರಾ ನದಿಯಲ್ಲಿ ಮಂಗಳ ಸ್ನಾನ ಮಾಡಿ ಇಷ್ಟಲಿಂಗಾರ್ಚನೆ ಪೂಜಾ ನೆರವೇರಿಸಿದರು. ಒಂದೇ ಕಾಲದಲ್ಲಿ ಬಂದ ಎಲ್ಲಾ ಭಕ್ತರಿಗೂ ಅನ್ನದಾಸೋಹ ನೆರವೇರಿತು.
ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…
ರಿಪ್ಪನ್ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…
ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…
ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…
ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…
ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…